ಬ್ರೇಕಿಂಗ್ ನ್ಯೂಸ್
30-08-22 09:43 pm Bangalore Correspondent ಕರ್ನಾಟಕ
ಬೆಂಗಳೂರು, ಆ.30: ಮೈಸೂರು ಹೆದ್ದಾರಿ ಪ್ಲಾನ್ ಮಾಡಿರುವ ಇಂಜಿನಿಯರ್ಗಳಿಗೆ ಮುಖ್ಯಮಂತ್ರಿಗಳು ಪದ್ಮಭೂಷಣ ಅಥವಾ ಬೇರೆ ಪ್ರಶಸ್ತಿ ಕೊಡಿಸಬೇಕು. ರಾಷ್ಟ್ರೀಯ ಹೆದ್ದಾರಿ ಮಾಡುವಾಗ ಎತ್ತರ ಪ್ರದೇಶದಲ್ಲಿ ನೀರು ಯಾವ ರೀತಿ ಹೋಗಬೇಕು ಎಂಬುದರ ಬಗ್ಗೆ ಸಾಮಾನ್ಯ ಪ್ರಜ್ಞೆ ಇಟ್ಟುಕೊಂಡು ಯೋಜನೆ ರೂಪಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರಸ್ತೆಯ ಟೋಲ್ ಜಾಗ ಈಗ ಕೆರೆಯಾಗಿದೆ. ಮುಖ್ಯಮಂತ್ರಿಗಳು ಕೂಡಲೇ ಈ ವಿಚಾರದಲ್ಲಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರಸ್ತೆ ನಿರ್ಮಾಣ ಎಂದರೆ ಜಲ್ಲಿ, ಟಾರು ಅಥವಾ ಕಾಂಕ್ರೀಟ್ ಹಾಕಿ ಹಣ ಪಡೆಯುವುದಲ್ಲ. ಮಳೆ ಬಂದಾಗ ನೀರು ಹೇಗೆ ಹೋಗಬೇಕು, ಎಲ್ಲಿ ಕಾಲುವೆ ತೆಗೆಯಬೇಕು ಎಂದು ಯೋಜನೆ ರೂಪಿಸುವುದು ಸರ್ಕಾರ ಹಾಗೂ ಇಂಜಿನಿಯರ್ ಗಳ ಕರ್ತವ್ಯ ಎಂದರು.
ರಾಷ್ಟ್ರೀಯ ಹೆದ್ದಾರಿ ಸ್ಥಿತಿ ಹೀಗಾದರೆ ಹಳ್ಳಿ ರಸ್ತೆಗಳ ಪರಿಸ್ಥಿತಿ ಏನಾಗಬೇಕು. ಒಬ್ಬಿಬ್ಬರ ಪ್ರಾಣ ಹಾನಿಯಾಗಿರುವ ಮಾಹಿತಿ ಬಂದಿದ್ದು, ರಾಮನಗರ, ಚನ್ನಪಟ್ಟಣ, ಕನಕಪುರದ ಕೆಲವು ಭಾಗಗಳಿಗೆ ಹೋಗಿ ಪರಿಸ್ಥಿತಿ ಪರಿಶೀಲಿಸುತ್ತೇನೆ. ಅವರಿಗೆ ಧೈರ್ಯ ತುಂಬುತ್ತೇನೆ. ಸರ್ಕಾರದ ಮೇಲೆ ಒತ್ತಡ ಹಾಕುತ್ತೇನೆ ಎಂದರು.
ಈ ಸಮಯದಲ್ಲಿ ಆಡಳಿತ ವ್ಯವಸ್ಥೆ ಚುರುಕಾಗಿ ಕೆಲಸ ಮಾಡಬೇಕು. ಒಂದು ವಾರ ಅಥವಾ 10 ದಿನಗಳಲ್ಲಿ ಪರಿಹಾರ ನೀಡುತ್ತೇನೆ ಎಂದು ಹೇಳುವುದಲ್ಲ. ತಕ್ಷಣ ಸ್ಥಳದಲ್ಲೇ ಚೆಕ್ ಮೂಲಕ ಪರಿಹಾರ ನೀಡಲು ಸಮಸ್ಯೆ ಏನು? ಹಾನಿಗೆ ಒಳಗಾದವರನ್ನು ಬೇರೆ ಕಡೆಗೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದರು.
Bangalore mysore highway flooded with rainwater Dk shivkumar slams BJP government Says the engineers who constructed the highway should be given a padma bhushan award.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm