ಬ್ರೇಕಿಂಗ್ ನ್ಯೂಸ್
01-09-22 12:54 pm HK News Desk ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 1: ಉತ್ತರ ಪ್ರದೇಶದ ಮುಖ್ಯಮಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿಯಿಂದ ನಿರ್ಮಿತವಾಗಿರುವ ರಾಷ್ಟ್ರೀಯ ಹೆದ್ದಾರಿ 75ರ ಮಹದೇವಪುರದ ಕ್ಷೇಮಾವನವನ್ನು ಯೋಗಿ ಆದಿತ್ಯನಾಥ್ ಅವರು ಉದ್ಘಾಟನೆ ಮಾಡಲಿದ್ದಾರೆ. ಯೋಗಿ ಆಗಮನ ಹಿನ್ನೆಲೆ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೇ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಪಾಲ್ಗೊಳ್ಳಲಿದ್ದಾರೆ.
ಮಳೆ ಸಮಸ್ಯೆಯಾದರೆ ಬೆಂಗಳೂರಿನಿಂದ ಮಹದೇವಪುರಕ್ಕೆ ಯೋಗಿ ಕಾರಿನಲ್ಲಿ ಪ್ರಯಾಣ ಮಾಡಲಿದ್ದಾರೆ. ಈಗಾಗಲೇ ನೆಲಮಂಗಲದ ಬಾವಿಕೆರೆ ಬಳಿ ಎರಡು ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ. ಯೋಗಿ ಭದ್ರತೆಗಾಗಿ 1 ಎಸ್ಪಿ, 1 ಎಎಸ್ಪಿ, 6 ಡಿವೈಎಸ್ಪಿ, 20 ಸಿಪಿಐ, 50 ಪಿಎಸ್ಐ, 600 ಪೊಲೀಸ್ ಸಿಬ್ಬಂದಿ, 1 ಕೆಎಸ್ಆರ್ಪಿ ತುಕಡಿ, ಹಾಗೂ 2 ಡಿಎಆರ್ ತುಕಡಿ ನಿಯೋಜಿಸಲಾಗಿದೆ.

ಮತ್ತೊಂದೆಡೆ ನಾಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ. ಹೀಗಾಗಿ ಮಂಗಳೂರು ನಗರ ಹೊರವಲಯದ ಕೂಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದೆ.

ಕಾರ್ಯಕ್ರದಲ್ಲಿ 2 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದ್ದು, 25 ಎಕರೆ ಪ್ರದೇಶದಲ್ಲಿ ಬೃಹತ್ ಪೆಂಡಾಲ್ ಅಳವಡಿಸಲಾಗುತ್ತಿದೆ. ನಾಳೆ ಮಧ್ಯಾಹ್ನ 12:55ಕ್ಕೆ ವಿಶೇಷ ವಿಮಾನದ ಮೂಲಕ ಕೊಚ್ಚಿಯಿಂದ ಮಂಗಳೂರು ಏರ್ಪೋರ್ಟ್ಗೆ ಮೋದಿ ಬಂದಿಳಿಯಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಎನ್.ಎಂ.ಪಿ.ಎ ಹೆಲಿಪ್ಯಾಡ್ಗೆ ಬಂದು ಬಳಿಕ ಸಮಾವೇಶ ನಡೆಯುವ ಸ್ಥಳಕ್ಕೆ ಆಗಮಿಸಲಿದ್ದಾರೆ.
ಎನ್ ಎಂಪಿಟಿ, ಎಂಆರ್ಪಿಎಲ್, ರಾಜ್ಯ ಮೀನುಗಾರಿಕೆ ಇಲಾಖೆಯ ಯೋಜನೆಯ ಶಿಲಾನ್ಯಾಸ, ಲೋಕಾರ್ಪಣೆಯನ್ನು ಪ್ರಧಾನಿ ಮಾಡಲಿದ್ದಾರೆ. ಎಸ್.ಪಿ.ಜಿ ಅಧಿಕಾರಿಗಳು ಮೂರು ದಿನಗಳಿಂದ ಮಂಗಳೂರಿನಲ್ಲೇ ಮೊಕ್ಕಾಂ ಹೂಡಿದ್ದಾರೆ. ಸಮಾವೇಶಕ್ಕೆ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಿಂದ ಕಾರ್ಯಕರ್ತರನ್ನು ಕರೆತರಲು 1461 ಬಸ್, 200 ಟಿಟಿ ಬುಕ್ಕಿಂಗ್ ಮಾಡಲಾಗಿದೆ.
Uttar Pradesh Chief Minister Yogi Adityanath will visit Bangalore on Thursday. He will inaugurate the ‘Sri Dharmasthala Nature Therapy and Yoga Education Institute’ built on the outskirts of the city.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm