ಬ್ರೇಕಿಂಗ್ ನ್ಯೂಸ್
01-09-22 10:46 pm HK News Desk ಕರ್ನಾಟಕ
ಚಿತ್ರದುರ್ಗ, ಸೆ.1: ಪ್ರೌಢ ಶಾಲೆಯ ಮಕ್ಕಳ ಮೇಲೆ ಅತ್ಯಾಚಾರ ಆರೋಪದಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿದ್ದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತ ಬಾಲಕಿಯರ ಹೇಳಿಕೆಯನ್ನು ಕೋರ್ಟಿನಲ್ಲಿ ದಾಖಲು ಮಾಡಲಾಗಿತ್ತು. ಸಿಆರ್ ಪಿಸಿ 164 ಕಲಂ ಅಡಿ ಹೇಳಿಕೆಯನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು. ಹೇಳಿಕೆಯ ಬಳಿಕ ಅತ್ಯಾಚಾರ ಆರೋಪಕ್ಕೆ ಪ್ರಬಲ ಪುರಾವೆ ಸಿಕ್ಕಿದೆ ಎನ್ನಲಾಗುತ್ತಿದ್ದು ಪ್ರಮುಖ ಆರೋಪಿ ಸ್ವಾಮೀಜಿಯನ್ನು ಬಂಧಿಸಲಾಗಿದೆ.
ಗುರುವಾರ ಸಂಜೆ ಹಾಸ್ಟೆಲ್ ವಾರ್ಡನ್ ರಶ್ಮಿ ಅವರನ್ನು ವಿಚಾರಣೆ ನಡೆಸಲಾಗಿತ್ತು. ಸ್ವಾಮೀಜಿಯ ಲೈಂಗಿಕ ಕಿರುಕುಳಕ್ಕೆ ಸಾಥ್ ನೀಡಿದ್ದು ಮತ್ತು ಮಕ್ಕಳನ್ನು ಮನವೊಲಿಸಿ ಸ್ವಾಮೀಜಿ ಬಳಿಗೆ ಕಳಿಸಿಕೊಡುತ್ತಿದ್ದ ಆರೋಪ ರಶ್ಮಿ ಮೇಲಿತ್ತು. ಆಕೆಯ ಹೇಳಿಕೆ ಪಡೆದ ಬಳಿಕ ಮುರುಘಾ ಶ್ರೀಗಳನ್ನು ಬಂಧಿಸುವ ನಿರ್ಧಾರಕ್ಕೆ ಬರಲಾಗಿದೆ. ಅದರಂತೆ, ಪ್ರಕರಣ ದಾಖಲಾದ ಏಳು ದಿನಗಳ ಬಳಿಕ ಆರೋಪಿ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಬಲ ಲಿಂಗಾಯತ ಸ್ವಾಮೀಜಿಯಾಗಿದ್ದರಿಂದ ಬಂಧಿಸಿದರೆ ಸಮುದಾಯದ ವಿರೋಧ ಕಟ್ಟಿಕೊಳ್ಳುವ ಭಯದಲ್ಲಿ ರಾಜ್ಯ ಸರಕಾರ ಬಂಧನಕ್ಕೆ ಮುಂದಾಗಿರಲಿಲ್ಲ. ಆದರೆ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದ್ದರಿಂದ ಮಕ್ಕಳ ಹೇಳಿಕೆಯನ್ನು ಕೋರ್ಟ್ ಮುಂದೆ ದಾಖಲಿಸಲಾಗಿತ್ತು. ಅದೇ ಸ್ವಾಮೀಜಿಗೆ ಮುಳುವಾಗಿ ಪರಿಣಮಿಸಿದೆ.
Sharanaru Muruga Mutt Seer Shivamurthy Murugha arrested in sexual harassment case.
01-07-25 10:52 pm
Bangalore Correspondent
ಹಾಸನ ಬಳಿಕ ಶಿವಮೊಗ್ಗ ಸರದಿ ; ಎರಡು ದಿನದಲ್ಲಿ ವಿದ್ಯ...
01-07-25 09:57 pm
Stampede, IPS Officer Vikas Kumar Suspension:...
01-07-25 04:19 pm
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
01-07-25 08:57 pm
HK News Desk
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm