ಬ್ರೇಕಿಂಗ್ ನ್ಯೂಸ್
07-10-20 09:20 am Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 07: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರ್ಕಾರ ಇದೀಗ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.
ರಾಜ್ಯದಲ್ಲಿ ಪ್ರಾಥಮಿಕ, ದ್ವಿತೀಯ ಸಂಪರ್ಕಿತರಿಗೆ ಕೊರೋನಾ ಸೋಂಕಿನ ಪರೀಕ್ಷೆ ಕಡ್ಡಾಯಗೊಳಿಸಲು ಆದೇಶಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಈ ಕುರಿತು ಆದೇಶ ಹೊರಡಿಸಲಾಗಿದ್ದು, ಕೋವಿಡ್ ಸೋಂಕಿತರ ಸಂಪರ್ಕಕ್ಕೆ ಒಳಗಾದ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರು ಸೇರಿದಂತೆ ಲಕ್ಷಣವಿರುವ ವ್ಯಕ್ತಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕಿದೆ.

ಹೊಸ ಆದೇಶದಲ್ಲಿ ಯಾರೆಲ್ಲಾ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದು ಸ್ಪಷ್ಟವಾಗಿ ಹೇಳಲಾಗಿದ್ದು, ಉಸಿರಾಟ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವ ರೋಗಿಗಳು, ಕೊರೋನಾ ಚಿಕಿತ್ಸೆಯಲ್ಲಿ ತೊಡಗಿರುವ ಸಿಬ್ಬಂದಿ, ಆರೋಗ್ಯ ಸೇವಾ ಕ್ಷೇತ್ರದ ಕಾರ್ಯಕರ್ತರು, ಕಂಟೈನ್ ಮೆಂಟ್, ಬಫರ್ ವಲಯದಲ್ಲಿರುವ ವ್ಯಕ್ತಿಗಳು, ಆರೋಗ್ಯ ಸಿಬ್ಬಂದಿ ಗುರುತಿಸಲ್ಪಡುವ ಯಾವುದೇ ವ್ಯಕ್ತಿ ಅಥವಾ ಕೊರೋನಾ ಶಂಕಿತ ವ್ಯಕ್ತಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕಿದೆ .
ಈ ಆದೇಶವನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಸುಗ್ರೀವಾಜ್ಞೆ - 2020ರ 4ನೇ ವಿಧಿಯಡಿ ಹೊರಡಿಸಲಾಗಿದ್ದು, ಆದೇಶ ಜಾರಿಯ ಹೊಣೆಯನ್ನು ಜಿಲ್ಲಾಧಿಕಾರಿಗಳು ಅಥವಾ ಮುನಿಸಿಪಲ್ ಕಮಿಷನರ್ ಅವರಿಗೆ ವಹಿಸಲಾಗಿದೆ. ಈ ಸುಗ್ರೀವಾಜ್ಞೆ ಪ್ರಕಾರ, ಸರ್ಕಾರ ಸೂಚಿಸಿದರೂ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳದವರಿಗೆ 50 ಸಾವಿರ ರು.ವರೆಗೆ ದಂಡ ಹಾಗೂ 6 ತಿಂಗಳಿಂದ 3 ವರ್ಷದವರೆಗೆ ಶಿಕ್ಷೆ ವಿಧಿಸುವ ಅವಕಾಶವಿದೆ
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm