ಬ್ರೇಕಿಂಗ್ ನ್ಯೂಸ್
07-09-22 08:33 pm HK News Desk ಕರ್ನಾಟಕ
ಧಾರವಾಡ, ಸೆ.7: ಕನ್ನಡ ಭಾಷೆಯಲ್ಲಿ ಚೆಕ್ ಹಾಳೆಯನ್ನು ತುಂಬಿದ್ದಕ್ಕಾಗಿ ಸ್ವೀಕರಿಸಲು ಒಪ್ಪದೆ ನಿರಾಕರಿಸಿದ್ದ ಹಳಿಯಾಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 85 ಸಾವಿರ ರೂಪಾಯಿ ದಂಡ ವಿಧಿಸಿದೆ.
ಧಾರವಾಡದ ಇಂಗ್ಲಿಷ್ ಪ್ರಾಧ್ಯಾಪಕ ವಾದಿರಾಜಾಚಾರ್ಯ ಇನಾಮದಾರ ಅವರು ತಮ್ಮ ಖಾತೆಯಲ್ಲಿದ್ದ ಹಣವನ್ನು ಪಡೆಯಲು ಚೆಕ್ ಪುಸ್ತಕವನ್ನು ತುಂಬಿ ಬ್ಯಾಂಕ್ ಶಾಖೆಯಲ್ಲಿ ನೀಡಿದ್ದರು. ಆದರೆ, ವಾದಿರಾಜ ಅವರು ಕನ್ನಡ ಭಾಷೆಯಲ್ಲಿ ಚೆಕ್ ಹಾಳೆಯಲ್ಲಿ ಬರೆದಿದ್ದಕ್ಕಾಗಿ ಶಾಖಾ ವ್ಯವಸ್ಥಾಪಕರು ನಿರಾಕರಣೆ ಮಾಡಿದ್ದರು. ಇದರ ವಿರುದ್ಧ ಧಾರವಾಡದ ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗದಲ್ಲಿ ದೂರು ದಾಖಲಿಸಿದ್ದರು.
ಪ್ರಕರಣವನ್ನು ವಿಚಾರಣೆ ನಡೆಸಿದ ಆಯೋಗ ಸದಸ್ಯರು, ಗ್ರಾಹಕರ ಉಳಿತಾಯ ಖಾತೆಯಲ್ಲಿ 9 ಲಕ್ಷ ರೂ. ಹಣ ಇದ್ದರೂ ಕೇವಲ ಆರು ಸಾವಿರ ರೂ. ಪಡೆಯಲು ಚೆಕ್ ನೀಡಿದ್ದರು. ಆದರೆ, ಚೆಕ್ ಹಾಳೆಯನ್ನು ಕನ್ನಡದಲ್ಲಿ ತುಂಬಿದ್ದಕ್ಕಾಗಿ ಅಮಾನ್ಯ ಮಾಡಿದ್ದು ಸೇವಾ ನ್ಯೂನತೆಯೆಂದು ಪರಿಗಣಿಸಿ ಬ್ಯಾಂಕ್ ಶಾಖೆಗೆ ದಂಡ ವಿಧಿಸಿದ್ದಾರೆ. ಬ್ಯಾಂಕ್ ಶಾಖೆಯ ವ್ಯವಸ್ಥಾಪಕರು ದೂರುದಾರರಿಗೆ 85,177 ರೂಪಾಯಿ ದಂಡದ ರೂಪದಲ್ಲಿ ನೀಡುವಂತೆ ಆದೇಶ ಮಾಡಿದ್ದಾರೆ. ಆಯೋಗದ ಅಧ್ಯಕ್ಷ ಈಶಪ್ಪ ಭೂತೆ, ಸದಸ್ಯರಾದ ವಿ.ಅ. ಬೋಳಶೆಟ್ಟಿ ಹಾಗೂ ಪಿ.ಸಿ. ಹಿರೇಮಠ ಈ ತೀರ್ಪು ನೀಡಿದ್ದಾರೆ.
ಬ್ಯಾಂಕಿನಲ್ಲಿ ತ್ರಿಭಾಷಾ ಸೂತ್ರದ ಪ್ರಕಾರ, ಇಂಗ್ಲಿಷ್, ಹಿಂದಿ ಮತ್ತು ಆಯಾ ರಾಜ್ಯಗಳ ಭಾಷೆಯಲ್ಲಿ ಚೆಕ್ ಪುಸ್ತಕ ಇನ್ನಿತರ ವಿಚಾರಗಳಲ್ಲಿ ವ್ಯವಹರಿಸಲು ಅವಕಾಶ ಇರುತ್ತದೆ. ಆದರೆ ಹೆಚ್ಚಿನ ಕಡೆಗಳಲ್ಲಿ ಇಂಗ್ಲಿಷ್ ಭಾಷೆ ಬಳಕೆ ಮಾತ್ರ ಇರುವುದರಿಂದ ಶಾಖಾ ಸಿಬಂದಿ ಕೂಡ ಇಂಗ್ಲಿಷ್ ಭಾಷೆಗೇ ಪ್ರೋತ್ಸಾಹ ನೀಡುತ್ತಾರೆ. ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗದ ತೀರ್ಪು ಮಹತ್ವದ್ದಾಗಿದೆ.
In a significant judgment that will go a long way in the implementation of the three-language policy in banks, the Dharwad District Consumer Redressal Forum has imposed a penalty of ₹85,177 on the Haliyal branch of the State Bank of India for dishonouring a cheque issued in Kannada for a sum of ₹6,000 despite the customer having adequate balance in his savings account.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm