ಬ್ರೇಕಿಂಗ್ ನ್ಯೂಸ್
08-09-22 03:56 pm HK News Desk ಕರ್ನಾಟಕ
ತುಮಕೂರು,ಸೆ.8: ಬೆಳ್ಳಂಬೆಳಗ್ಗೆ ಮದ್ಯಪಾನ ಮಾಡಿಕೊಂಡು ಪಾಠ ಮಾಡುತ್ತಿದ್ದ ಲೇಡಿ ಟೀಚರ್ ಒಬ್ಬಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ವಿಲಕ್ಷಣ ಘಟನೆ ತುಮಕೂರು ತಾಲೂಕಿನ ಚಿಕ್ಕಸಾರಂಗಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಕಳೆದ 25 ವರ್ಷಗಳಿಂದ ಈ ಶಾಲೆಯಲ್ಲಿ ಶಿಕ್ಷಕಿ ಗಂಗಲಕ್ಷ್ಮಮ್ಮ ಸೇವೆ ಸಲ್ಲಿಸುತ್ತಿದ್ದಾಳೆ. ಆದರೆ ಕಳೆದ 5 ವರ್ಷದಿಂದ ಮದ್ಯ ವ್ಯಸನಕ್ಕೆ ದಾಸಳಾಗಿದ್ದಳು.
ಮದ್ಯಪಾನ ಮಾಡಿ ಪಾಠ ಮಾಡಿ, ವಿದ್ಯಾರ್ಥಿಗಳಿಗೆ ಸುಖಾಸುಮ್ಮನೆ ಹೊಡೆಯುವುದು ಹಾಗೂ ಸಹೋದ್ಯೋಗಿಗಳ ಜೊತೆ ಜಗಳ ಮಾಡುತ್ತಿದ್ದಳು. ಇದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯುಂಟಾಗಿತ್ತು. ಇದನ್ನು ಮನಗಂಡ ಪೋಷಕರು ಶಿಕ್ಷಕಿ ಗಂಗಲಕ್ಷ್ಮಮ್ಮಗೆ ತಪ್ಪು ತಿದ್ದಿಕೊಳ್ಳುವಂತೆ ತಾಕೀತು ಮಾಡಿದ್ದರು. ಆದರೆ ಗಂಗಲಕ್ಷ್ಮಮ್ಮ ತನ್ನ ಚಾಳಿ ಬದಲಿಸಲಿಲ್ಲ. ಇದರಿಂದ ಪೋಷಕರು ಶಾಲೆಗೆ ಬೀಗ ಹಾಕಿ ಶಿಕ್ಷಕಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು.

ಈ ವೇಳೆ ಸ್ಥಳಕ್ಕೆ ಬಿ.ಇ.ಒ ಹನುಮಾ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿಕ್ಷಕಿಯ ಟೇಬಲ್ನ ಡ್ರಾಯರ್ ಓಪನ್ ಮಾಡುವಂತೆ ಗ್ರಾಮಸ್ಥರು ಒತ್ತಾಯ ಮಾಡಿದರು. ಸ್ವತಃ ಬಿಇಒ ಡ್ರಾಯರ್ ಓಪನ್ ಮಾಡಲು ಹೋದಾಗ ಶಿಕ್ಷಕಿ ಪ್ರತಿರೋಧ ಒಡ್ಡಿದ್ದಾಳೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಟೇಬಲನ್ನು ಹೊರಕ್ಕೆ ತಂದು ಡ್ರಾಯರ್ ಬೀಗ ಮುರಿದಿದ್ದಾರೆ. ಆಗ ಡ್ರಾಯರ್ನಲ್ಲಿ ಒಂದು ಫುಲ್ ಮತ್ತು ಎರಡು ಖಾಲಿ ಮದ್ಯದ ಬಾಟಲ್ಗಳು ಪತ್ತೆಯಾಗಿದೆ.
ಮದ್ಯದ ಬಾಟಲ್ ಪತ್ತೆಯಾಗುತಿದ್ದಂತೆ ಕೊಠಡಿ ಬೀಗಹಾಕೊಂಡು ಗಂಗ ಲಕ್ಷ್ಮಮ್ಮ ಆತ್ಮಹತ್ಯೆ ಮಾಡಿಕೊಳ್ಳುವ ನಾಟಕ ಮಾಡಿದ್ದಾಳೆ. ಬಳಿಕ ಪೊಲೀಸರು ಬಂದು ಮದ್ಯದ ಬಾಟಲನ್ನು ವಶಕ್ಕೆ ಪಡೆದಿದ್ದಾರೆ. ಶಿಕ್ಷಕಿ ಗಂಗಲಕ್ಷ್ಮಮ್ಮಳನ್ನು ಇಲಾಖಾ ವಿಚಾರಣೆಗೆ ಒಳಪಡಿಸಲಾಗಿದೆ. ಒಟ್ಟಾರೆ ಚಿಕ್ಕಸಾರಂಗಿ ಶಾಲೆಯ ಮುಂದೆ ನಡೆದ ಹೈಡ್ರಾಮಾಕ್ಕೆ ಗ್ರಾಮಸ್ಥರು ಸಾಕ್ಷಿಯಾಗಿದ್ದಾರೆ.
Lady Teacher held for consuming alcohol and taking classes in Tumkur. It is said that she's been consuming alcohol for five years and attends school to teach.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 01:35 pm
Mangaluru Correspondent
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm