ಬ್ರೇಕಿಂಗ್ ನ್ಯೂಸ್
08-09-22 10:41 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.8: ಬಿಹಾರದ ಪಾಟ್ನಾದಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಗುರುವಾರ ಒಂದೇ ದಿನ ಬಿಹಾರ, ಕರ್ನಾಟಕ, ತಮಿಳುನಾಡಿನ 20 ಕಡೆಗಳಲ್ಲಿ ದಾಳಿ ಕಾರ್ಯಾಚರಣೆ ನಡೆಸಿರುವ ಬಗ್ಗೆ ಮಾಹಿತಿ ನೀಡಿದೆ.
ಬಿಹಾರದಲ್ಲಿ ನಲಂದಾ, ಕತಿಹಾರ್, ಅರಾರಿಯಾ, ಮಧುಬನಿ, ಪಾಟ್ನಾ, ವೈಶಾಲಿ, ದರ್ಭಾಂಗ, ಮುಝಾಫರ್ ಪುರ ಮತ್ತು ಸರಣ್ ಜಿಲ್ಲೆಯಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ತಮಿಳುನಾಡಿನ ಶಿವಗಂಗಾ ಮತ್ತು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ದಾಳಿ ನಡೆಸಲಾಗಿತ್ತು.
ಬಿಹಾರದ ಪಾಟ್ನಾ ಜಿಲ್ಲೆಯ ಪುಲ್ವಾರಿ ಶರೀಫ್ ಠಾಣೆ ವ್ಯಾಪ್ತಿಯಲ್ಲಿ ಜುಲೈ 12ರಂದು ದೇಶ ವಿರೋಧಿ ಚಟುವಟಿಕೆ ಬಗ್ಗೆ ಪ್ರಕರಣ ದಾಖಲಾಗಿತ್ತು. ಪ್ರಧಾನಿ ಮೋದಿ ಪಾಟ್ನಾಕ್ಕೆ ಭೇಟಿ ನೀಡುವ ಸಂದರ್ಭದಲ್ಲಿಯೇ ದೇಶ ವಿರೋಧಿ ಕೃತ್ಯಕ್ಕೆ ಸಂಚು ನಡೆಸಿದ್ದರು ಅನ್ನುವ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದರು. ಘಟನೆ ಸಂಬಂಧಿಸಿ ಎನ್ಐಎ ತನಿಖೆ ಆರಂಭಿಸಿದ್ದು, ಉತ್ತರ ಪ್ರದೇಶ, ಬಿಹಾರ ಸೇರಿ ವಿವಿಧೆಡೆ ದಾಳಿ ನಡೆಸಿತ್ತು. ಬಂದಿತರು ಎಸ್ಡಿಪಿಐ ಮತ್ತು ಪಿಎಫ್ಐ ಕಾರ್ಯಕರ್ತರು ಅನ್ನುವ ನೆಲೆಯಲ್ಲಿ ತನಿಖೆ ನಡೆದಿತ್ತು.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ರಿಯಾಜ್ ಪರಂಗಿಪೇಟೆ ಎಂಬವರು ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದು, ಅಲ್ಲದೆ, ಬಿಹಾರದಲ್ಲಿ ಎಸ್ಡಿಪಿಐ ಪಕ್ಷದ ಉಸ್ತುವಾರಿ ಆಗಿದ್ದಾರೆ. ಬಿಹಾರಕ್ಕೆ ತೆರಳಿ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಬಂಧಿತ ಆರೋಪಿಗಳಿಗೆ ರಿಯಾಜ್ ಪರಂಗಿಪೇಟೆ ಜೊತೆಗೆ ನಂಟು ಇದೆಯೆಂಬ ಆರೋಪದಲ್ಲಿ ಎನ್ಐಎ ಅಧಿಕಾರಿಗಳು ಗುರುವಾರ ಬೆಳಗ್ಗೆ ಬಂಟ್ವಾಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದ್ದಾರೆ. ದಾಳಿ ವೇಳೆ, ಡಿಜಿಟಲ್ ಸಾಕ್ಷ್ಯವುಳ್ಳ ಮೊಬೈಲ್, ಲ್ಯಾಪ್ ಟಾಪ್, ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಪಾಟ್ನಾ ಘಟನೆ ಸಂಬಂಧ ಎನ್ಐಎ ದೆಹಲಿ ಕಚೇರಿಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರತ್ಯೇಕ ತನಿಖೆ ನಡೆಸುತ್ತಿದ್ದಾರೆ.
The National Investigation Agency is conducting searches across 30 locations in Bihar in connection with its probe into a suspected terror module allegedly linked to the Popular Front of India. Officials told News18 on condition of anonymity that the outfit is alleged to be running “arms training camps under the guise of martial arts training".
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm