ಬ್ರೇಕಿಂಗ್ ನ್ಯೂಸ್
09-09-22 03:07 pm HK News Desk ಕರ್ನಾಟಕ
ರಾಯಚೂರು, ಸೆ.9 : ಶಾಲೆಯ ಸಮವಸ್ತ್ರದಲ್ಲಿ ಮಲ ವಿಸರ್ಜನೆ ಮಾಡಿದ್ದಕ್ಕಾಗಿ ಎರಡನೇ ತರಗತಿ ಓದುತ್ತಿದ್ದ ಬಾಲಕನಿಗೆ ಶಿಕ್ಷಕ ಬಿಸಿ ನೀರು ಎರಚಿ ವಿಕೃತಿ ಮೆರೆದ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಂತೆಕೆಲ್ಲೂರು ಶಾಲೆಯಲ್ಲಿ ಸೆಪ್ಟೆಂಬರ್ 2 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶ್ರೀಘನ ಮಠೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು ಶಿಕ್ಷಕನ ವಿರುದ್ಧ ಭಾರೀ ಆಕ್ರೋಶ ಕೇಳಿಬಂದಿದೆ. ವಿದ್ಯಾರ್ಥಿ ತರಗತಿಯಲ್ಲೇ ಮಲ ವಿಸರ್ಜನೆ ಮಾಡಿದ್ದು ಬಾಲಕನ ವರ್ತನೆ ಸಹಿಸಲಾಗದೆ ಶಿಕ್ಷಕ ಬಿಸಿನೀರು ಎರಚಿದ್ದಾನೆ ಎನ್ನಲಾಗಿದೆ.

ಮಿಟ್ಟೆಕೆಲ್ಲೂರು ಗ್ರಾಮದ ವೆಂಕಟೇಶ್ ಮತ್ತು ಸುನೀತಾ ದಂಪತಿಯ ಪುತ್ರ ಅಖಿಲ್(8) ಗಾಯಾಳು ಬಾಲಕನಾಗಿದ್ದು ಹೊಟ್ಟೆ, ಬೆನ್ನಿನ ಭಾಗದಲ್ಲಿ ಚರ್ಮ ಸುಟ್ಟು ಹೋಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಬಿಸಿ ನೀರಿನ ತಾಪಕ್ಕೆ ವಿದ್ಯಾರ್ಥಿಯ ದೇಹ ಶೇ. 40 ರಷ್ಟು ಸುಟ್ಟು ಹೋಗಿದೆ.
ಶಿಕ್ಷಕ ಹುಲಿಗೆಪ್ಪ ಅನ್ನೋ ವ್ಯಕ್ತಿ ಕೃತ್ಯ ಎಸಗಿದ್ದು ಘಟನೆ ಬಳಿಕ ಶಾಲೆಗೆ ಬರದೆ ಗೈರಾಗಿದ್ದಾನೆ. ಘಟನೆ ನಡೆದು ವಾರವಾದ್ರೂ ಪೊಲೀಸ್ ಪ್ರಕರಣ ದಾಖಲಾಗಿಲ್ಲ. ದೂರು ದಾಖಲಿಸದಂತೆ ಪ್ರಭಾವಿಗಳು ಸೇರಿ ಬಾಲಕನ ಪೋಷಕರಿಗೆ ಒತ್ತಡ ಹಾಕಿದ್ದಾರೆ ಎನ್ನುವ ಆರೋಪಗಳಿವೆ. ಮಸ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದೇ ಶಿಕ್ಷಕ, ಈ ಹಿಂದೆ ಶಾಸಕರೊಬ್ಬರನ್ನ ಕೊಲ್ಲಲು ಯತ್ನಿಸಿದ್ದ ಆರೋಪಕ್ಕೂ ಒಳಗಾಗಿದ್ದ.
An incident took place in Muski taluk of Raichur where a teacher, who was angry because the boy had defecated in his school uniform, poured hot water on the 8-year-old boy and mutilated him.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 04:36 pm
HK News Staffer
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm