ಬ್ರೇಕಿಂಗ್ ನ್ಯೂಸ್
11-09-22 08:36 pm HK News Desk ಕರ್ನಾಟಕ
ಬೆಂಗಳೂರು, ಸೆ.11: ಸೆಪ್ಟೆಂಬರ್ ಹತ್ತರಂದು ಪ್ರತಿ ವರ್ಷ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸರಕಾರದ ವತಿಯಿಂದ ನಾರಾಯಣ ಗುರುಗಳ ಜಯಂತಿ ಆಚರಣೆ ಮಾಡಿಕೊಂಡು ಬರಲಾಗಿತ್ತು. ಆದರೆ ಈ ಬಾರಿ ಆಚರಣೆ ಮಾಡಿಲ್ಲ. ಅಲ್ಲದೆ, ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿಯೂ ಕಾರ್ಯಕ್ರಮ ನಡೆಸಿಲ್ಲ ಎಂದು ನಾರಾಯಣ ಗುರು ಶಕ್ತಿಪೀಠದ ಪ್ರಣಾವಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರಕಾರದ ಈ ಧೋರಣೆಯಿಂದ ಈಡಿಗ, ಬಿಲ್ಲವ, ನಾಮಧಾರಿ ಸಮಾಜಕ್ಕೆ ಅಪಮಾನವಾಗಿದೆ ಎಂದವರು ಹೇಳಿದ್ದಾರೆ. ಈ ಹಿಂದೆ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ನಾರಾಯಣ ಗುರು ಜಯಂತಿ ಘೋಷಣೆ ಮಾಡಿದ್ದರು. ಅವರಿದ್ದಾಗ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮ ಆಚರಣೆ ಮಾಡುತ್ತ ಬರಲಾಗಿತ್ತು. ಆದರೆ, ಈಗಿನ ಸರಕಾರವು ರಾಜ್ಯ ಮಟ್ಟದ ಆಚರಣೆಯನ್ನು ನಡೆಸದೆ ಅವಮಾನ ಮಾಡಿದೆ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಬೆಂಗಳೂರಿನ ಬದಲು ಮಂಗಳೂರಿನಲ್ಲಿ ನಡೆಸಲಾಗಿದೆ. ನಮ್ಮ ಸಮಾಜದ ಸಚಿವರಿಗೆ ಈ ಕಾರ್ಯಕ್ರಮದ ಮಾಹಿತಿ ನೀಡಿಲ್ಲ. ಸರಕಾರವು ಜಯಂತಿ ದಿನದಂದು ಬ್ರಹ್ಮಶ್ರೀ ನಾರಾಯಣ ಗುರುಗಳ ನಿಗಮ ಸ್ಥಾಪನೆ ಮಾಡುತ್ತೇವೆ ಎಂದು ಹೇಳಿ ಮಾತು ತಪ್ಪಿದೆ. ಇದನ್ನು ನಮ್ಮ ಸಮಾಜ ಖಂಡನೆ ಮಾಡುತ್ತದೆ ಎಂದು ನಾರಾಯಣ ಗುರು ಶಕ್ತಿಪೀಠದ ಪ್ರಣಾವಾನಂದ ಸ್ವಾಮೀಜಿ ಹೇಳಿದ್ದಾರೆ.
ಈ ಬಾರಿ ನಾರಾಯಣ ಗುರು ಜಯಂತಿಯನ್ನು ರಾಜ್ಯ ಸರಕಾರದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಆದರೆ ಮಂಗಳೂರಿನಲ್ಲಿ ಕಾರ್ಯಕ್ರಮ ನಡೆಸುವುದಕ್ಕೂ ಮುನ್ನ ಸಮಾಜದ ಗಣ್ಯರನ್ನು, ಸಮಾಜದ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿರಲಿಲ್ಲ ಎಂಬ ಆಕ್ಷೇಪ ಕೇಳಿಬಂದಿದೆ.
Sri Narayana Guru Jayanti not held in Banquet hall Pranavanada swami angry
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm