ಬ್ರೇಕಿಂಗ್ ನ್ಯೂಸ್
13-09-22 03:44 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.13: ಬೆಂಗಳೂರಿನ ಇಬ್ಬರು ಯುವಕರು ಶಿಕ್ಷಣ ಮತ್ತು ಪರಿಸರದ ಕುರಿತ ಜಾಗೃತಿಗಾಗಿ 20 ರಾಜ್ಯಗಳನ್ನು ಸುತ್ತಿ 24,000 ಕಿಮೀ ಸೈಕಲ್ ಜಾಥಾ ನಡೆಸಿ ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಮಾಡಿದ್ದಾರೆ.
ಬೆಂಗಳೂರಿನ ಧನುಷ್ ಮಂಜುನಾಥ್ ಮತ್ತು ಹೇಮಂತ್ ಈ ಸಾಧನೆ ಮಾಡಿದ ಯುವಕರು. ಏನಾದರು ಸಾಧನೆ ಮಾಡಬೇಕು, ಸಮಾಜಕ್ಕೆ ಸಂದೇಶ ನೀಡಬೇಕು ಎನ್ನುವ ಉದ್ದೇಶದಿಂದ ಮೊದಲಿಗೆ 15,000 ಕಿಮೀ ಸೈಕಲ್ ಜಾಥಾ ಮಾಡಲು ಯೋಜನೆ ಹಾಕಿದ್ದರು. ಇದೇ ವೇಳೆ, 19,400 ಕಿಮೀ ಸೈಕಲ್ ಜಾಥಾ ನಡೆಸಿದರೆ, ಗಿನ್ನೆಸ್ ರೆಕಾರ್ಡ್ ಮಾಡುವ ಬಗ್ಗೆ ಮಾಹಿತಿ ತಿಳಿದ ಯುವಕರು ಹೊಸ ದಾಖಲೆಗೆ ಮುಂದಾಗಿದ್ದರು.

ಜುಲೈ 11, 2021 ರಂದು ಬೆಂಗಳೂರಿನಿಂದ ಶಿಕ್ಷಣ ಮತ್ತು ಪರಿಸರ ಜಾಗೃತಿ ಹೆಸರಲ್ಲಿ ಆರಂಭಿಸಿದ್ದ ಸೈಕಲ್ ಜಾಥಾ ಆಂಧ್ರಪ್ರದೇಶ, ತೆಲಂಗಾಣ , ಗುಜರಾತ್, ಮಧ್ಯಪ್ರದೇಶ , ಉತ್ತರಾಖಂಡ್, ಹಿಮಾಚಲ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಲ, ಉತ್ತರ ಪ್ರದೇಶ, ಹರಿಯಾಣ, ಒರಿಸ್ಸಾ, ಜಾರ್ಖಂಡ್, ರಾಜಸ್ಥಾನ, ಮಣಿಪುರ, ನಾಗಲ್ಯಾಂಡ್, ದೆಹಲಿ, ಪಂಜಾಬ್, ಮಹಾರಾಷ್ಟ್ರ, ಗೋವಾ, ತಮಿಳುನಾಡು ರಾಜ್ಯ ಗಳಿಗೆ ಭೇಟಿ ನೀಡಿ ಮಾರ್ಚ್ 12, 2022 ಕ್ಕೆ ಸುದೀರ್ಘ 8 ತಿಂಗಳ 2400 ಕಿ.ಮೀ ಪ್ರಯಾಣ ಮುಗಿಸಿದ್ದಾರೆ.
ಜಾಥಾ ಸಂದರ್ಭದಲ್ಲಿ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದಾರೆ. ಉತ್ತರಾಖಂಡ್, ಮಧ್ಯಪ್ರದೇಶ, ಗುಜರಾತ್ , ಗೋವಾದ ಮುಖ್ಯಮಂತ್ರಿಗಳು ಹಾಗು ಹಿಮಾಚಲ ಪ್ರದೇಶದ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಜಾಥಾದಲ್ಲಿ ಭೇಟಿ ನೀಡಿದ ಪ್ರದೇಶದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಮಾಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಧನುಷ್, ನಾವು ಪ್ರತಿದಿನ ಬೆಳಗ್ಗೆ 6.30ರಿಂದ ಸಂಜೆ 6.30ರ ತನಕ ಸೈಕ್ಲಿಂಗ್ ಮಾಡುತ್ತಿದ್ದೆವು. ಒಂದು ದಿನಕ್ಕೆ 100-120 ಕಿಮೀ ದೂರ ಕ್ರಮಿಸುತ್ತಿದ್ದೆವು. ನಾವು ಹೋದಲೆಲ್ಲಾ ರೋಟರಿ ಕ್ಲಬ್ ನಮಗೆ ತುಂಬಾ ಸಹಕಾರ ನೀಡಿದೆ. ಸಾಮಾನ್ಯ ಜನರು 2ರಿಂದ 5 ಕಿಮೀ ವ್ಯಾಪ್ತಿಗೆ ಸೈಕಲ್ ಬಳಸಿದರೆ ಒಂದಷ್ಟು ಮಾಲಿನ್ಯ ತಪ್ಪಿಸಬಹುದು ಎಂದಿದ್ದಾರೆ.
ಪ್ರತಿ ದಿನದ ಜಾಥಾಕ್ಕೆ ದಾಖಲೆ ಪತ್ರ
ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯಿಂದ ಒಪ್ಪಿಗೆ ದೊರೆತ ನಂತರ ಜಾಥಾ ಆರಂಭಿಸಿದ್ದರು. ಪ್ರತಿ ದಿನ ಜಾಥಾ ಸಂದರ್ಭದಲ್ಲಿ ನಾಲ್ಕು ಜನರ ದಾಖಲೆ ಪತ್ರ, ಇಬ್ಬರು ಸರಕಾರಿ ಉದ್ಯೋಗಿಗಳ ಸಾಕ್ಷಿ ಹಾಗೂ ಪ್ರತಿ ಗಂಟೆಗೆ ವಿಡಿಯೋ ಮಾಡಬೇಕು ಎಂಬ ಸವಾಲು ಇತ್ತು. ಹಾಗಾಗಿ ತಮ್ಮ ಜಾಥಾಕ್ಕೆ ಜನರನ್ನೇ ಸಾಕ್ಷಿ ಮಾಡಬೇಕಾಗಿತ್ತು.
Bangalore 24 thousand km cycle raid, 20 states travelled in eight months by two youths, Guinness World record
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm