ಬ್ರೇಕಿಂಗ್ ನ್ಯೂಸ್
15-09-22 12:01 pm Bengalore Correspondent ಕರ್ನಾಟಕ
ಬೆಂಗಳೂರು, ಸೆ.15: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಆಯ್ಕೆ ಕುರಿತು ಸೆ.16 ರಂದು ಶುಕ್ರವಾರ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಆಂತರಿಕ ಚುನಾವಣೆ ನಡೆಯಲಿದ್ದು, ಡಿ.ಕೆ. ಶಿವಕುಮಾರ್ ಅವರೇ ಮತ್ತೊಂದು ಅವಧಿಗೆ ಪುನರಾಯ್ಕೆ ಆಗಲಿದ್ದಾರೆ ಎನ್ನಲಾಗುತ್ತಿದೆ.
ಚುನಾವಣೆ ನಡೆದಲ್ಲಿ ಶಾಸಕರು, ಪರಿಷತ್ ಸದಸ್ಯರು, ಕೆಪಿಸಿಸಿ ಸದಸ್ಯರು, ವಿವಿಧ ಘಟಕಗಳ ಅಧ್ಯಕ್ಷರು ಸೇರಿದಂತೆ 479 ಮಂದಿ ಮತದಾರರು ಮತದಾನಕ್ಕೆ ಅರ್ಹರಾಗಿದ್ದಾರೆ. ಇದಾಗದಿದ್ದರೆ, ಎಐಸಿಸಿ ನೀಡುವ ಸಂದೇಶದ ಅನುಸಾರ ಒಂದೇ ಸಾಲಿನಲ್ಲಿ ನಿರ್ಣಯ ತೆಗೆದುಕೊಂಡು ಡಿ.ಕೆ.ಶಿವಕುಮಾರ್ ಅವರನ್ನೇ ಮತ್ತೊಂದು ಅವಧಿಗೆ ಅಧ್ಯಕ್ಷರನ್ನಾಗಿ ಮುಂದುವರೆಸುವ ಸಾಧ್ಯತೆಯೂ ಇರುತ್ತದೆ.
ಈ ಬಗ್ಗೆ ಮಂಗಳವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಿದ್ದು, ಕೆಪಿಸಿಸಿ ಸದಸ್ಯರೆಲ್ಲರೂ ಸೆ.16 ರಂದು ನಡೆಯಲಿರುವ ಅಧ್ಯಕ್ಷ ಸ್ಥಾನದ ಚುನಾವಣೆ ವೇಳೆ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಮೂಲಗಳ ಪ್ರಕಾರ, ಸೆ.16 ರಂದು ಅವಿರೋಧವಾಗಿ ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ಪುನರ್ ಆಯ್ಕೆ ಮಾಡಲು ಈಗಾಗಲೇ ನಿರ್ಧರಿಸಲಾಗಿದೆ. ಒಂದು ವೇಳೆ ಅನಿರೀಕ್ಷಿತ ಬೆಳವಣಿಗೆಗಳು ನಡೆದು ಬೇರೆ ಯಾರಾದರೂ ಸ್ಪರ್ಧೆಗೆ ಆಸಕ್ತಿ ತೋರಿದರೆ ಮಾತ್ರ ಚುನಾವಣೆ ನಡೆಯಲಿದೆ. ಇಲ್ಲದಿದ್ದರೆ ಚುನಾವಣೆ ನಡೆಸದೆ ಅಧ್ಯಕ್ಷರ ಘೋಷಣೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ.
ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 2 ವರ್ಷ ಪೂರ್ಣಗೊಂಡಿದೆ. ಕಾಂಗ್ರೆಸ್ ಬೈಲಾ ಪ್ರಕಾರ, ನೂತನ ಕೆಪಿಸಿಸಿ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಬೇಕು. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಅಧ್ಯಕ್ಷರ ಬದಲಾವಣೆಗೆ ಕಾಂಗ್ರೆಸ್ಗೆ ಆಸಕ್ತಿ ಇಲ್ಲ. ಹೀಗಾಗಿ ಶಿವಕುಮಾರ್ ಅವರೇ ಮತ್ತೊಂದು ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
The election for the post of Karnataka Pradesh Congress Committee President (KPCC) will be held on September 16, chief of the party's state unit, D K Shivakumar said on Monday.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 04:36 pm
HK News Staffer
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm