ಬ್ರೇಕಿಂಗ್ ನ್ಯೂಸ್
15-09-22 02:35 pm Bengalore Correspondent ಕರ್ನಾಟಕ
ಬೆಂಗಳೂರು, ಸೆ.15: ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿನ ರೋಗಿಗಳ ದುರಂತ ಸಾವು ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಮೂವರು ರೋಗಿಗಳ ಸಾವಿಗೆ ಸರ್ಕಾರವೇ ನೇರ ಹೊಣೆ, ಆರೋಗ್ಯ ಮತ್ತು ವೈದ್ಯಕೀಯ ಸಚಿವರೇ ಜವಾಬ್ದಾರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸಿದ್ದರಾಮಯ್ಯ, ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತಗೊಂಡ ಪರಿಣಾಮ ನಿನ್ನೆ ರಾತ್ರಿ ಮೂವರು ರೋಗಿಗಳು ಸಾವನ್ನಪ್ಪಿದ್ದಾರೆ. ವಿದ್ಯುತ್ ಇಲ್ಲದ ಸಂದರ್ಭದಲ್ಲಿ ಜನರೇಟರ್ ಕಾರ್ಯ ನಿರ್ವಹಿಸಿಲ್ಲ. ಹಾಗಾಗಿ ವೆಂಟಿಲೇಟರ್ ಸಮಸ್ಯೆಯಾಗಿದೆ. ಐಸಿಯುನಲ್ಲಿದ್ದ ಮೂವರು ರೋಗಿಗಳು ಮೃತಪಟ್ಟಿದ್ದಾರೆ. ಈ ದುರಂತಕ್ಕೆ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು, ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರೇ ನೇರ ಜವಾಬ್ದಾರಿ. ಸರ್ಕಾರದ ಬೇಜವಾಬ್ದಾರಿಯಿಂದಾಗಿಯೇ ಈ ದುರಂತ ಸಂಭವಿಸಿದೆ. ಘಟನೆ ಹೊಣೆ ಹೊತ್ತು ಮೊದಲು ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದರು.



ಸಿದ್ದರಾಮಯ್ಯ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಸಚಿವ ಮಾಧುಸ್ವಾಮಿ ಹಾಗೂ ಶ್ರೀರಾಮುಲು, ಸರ್ಕಾರ ಹೇಗೆ ಜವಾಬ್ದಾರಿಯಾಗಲು ಸಾಧ್ಯ? ನಿಮ್ಮ ಕಾಲದಲ್ಲಿ ನಡೆದ ರೋಗಿಗಳ ಸಾವಿಗೆ ನಿಮ್ಮ ಸರ್ಕಾರ ಯಾವ ಕ್ರಮ ಕೈಗೊಂಡಿತ್ತು ಎಂದು ಪ್ರಶ್ನಿಸಿದರು. ವಿದ್ಯುತ್ ಸಮಸ್ಯೆಯಿಂದ ರೋಗಿಗಳು ಸಾವನ್ನಪ್ಪಿಲ್ಲ ಎಂದು ಸಮಜಾಯಿಷಿ ನೀಡಿದರು. ಇದಕ್ಕೆ ಕೆಂಡಾಮಂಡಲರಾದ ಸಿದ್ದರಾಮಯ್ಯ, ಕರೆಂಟ್ ಹೋಗಿದ್ದರಿಂದ ಜನರೇಟರ್ ಕೂಡ ಕಾರ್ಯ ನಿರ್ವಹಿಸಿಲ್ಲ. ಇದರಿಂದಾಗಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ಸಾಧ್ಯವಾಗಿಲ್ಲ. ಸಾವಿನ ಜೊತೆ ಚೆಲ್ಲಾಟವಾಡುತ್ತಿದ್ದೀರಾ? ಮೊದಲು ತಪ್ಪನ್ನು ಒಪ್ಪಿಕೊಳ್ಳಿ ಎಂದು ಗುಡುಗಿದರು. ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿದರು.
Two patients admitted to the Intensive Care Unit (ICU) of Vijayanagar Institute of Medical Sciences (VIMS) in Karnataka’s Ballari died Wednesday, reportedly after a power cut in the hospital.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm