ಬ್ರೇಕಿಂಗ್ ನ್ಯೂಸ್
08-10-20 01:46 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 08: ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಗರ್ಭಿಣಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ನಿನ್ನೆ ರಾತ್ರಿ 7.40ರ ಸುಮಾರಿಗೆ ಘಟನೆ ನಡೆದಿದ್ದು, ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಯನ್ನು ಸಹ ಪ್ರಯಾಣಿಕರಾಗಿದ್ದ ಗೈನಕಾಲಜಿಸ್ಟ್ ವೈದ್ಯರೊಬ್ಬರು ಮತ್ತು ಜೊತೆಗಿದ್ದ ಮಹಿಳೆಯರು ಸೇರಿ ಹೆರಿಗೆ ಮಾಡಿಸಿದ್ದಾರೆ.
ಮಹಿಳೆಗೆ 9 ತಿಂಗಳು ಪೂರ್ತಿಯಾಗಿರಲಿಲ್ಲ. ಆದರೆ, ಹೆರಿಗೆ ಹತ್ತಿರ ಬಂದಿರುವ ವೇಳೆ ಗರ್ಭಿಣಿಯರನ್ನು ವಿಮಾನದಲ್ಲಿ ಪ್ರಯಾಣಿಸಲು ಅನುಮತಿ ನೀಡುವುದಿಲ್ಲ. ವಿಮಾನ ನಿಲ್ದಾಣದ ಅಧಿಕಾರಿಗಳು ಇಲ್ಲಿ ಹೇಗೆ ಅವಕಾಶ ನೀಡಿದ್ದಾರೆ ಎಂದು ವೈದ್ಯರು ಪ್ರಶ್ನೆ ಮಾಡಿದ್ದಾರೆ. ಮಗು ಮತ್ತು ತಾಯಿ ಆರೋಗ್ಯದಲ್ಲಿದ್ದು, 8 ಗಂಟೆ ಸುಮಾರಿಗೆ ವಿಮಾನ ಬೆಂಗಳೂರು ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ತಾಯಿ, ಮಗುವನ್ನು ಆಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿಮಾನ ಪ್ರಯಾಣ ಸಂದರ್ಭದಲ್ಲಿನ ಏರಿಳಿತದಿಂದಾಗಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು.
ವಿಮಾನದಲ್ಲಿ ಹೆರಿಗೆಯಾಗಿದ್ದರಿಂದ ಮಗುವಿಗೆ ಉಚಿತ ಪ್ರಯಾಣದ ಸೌಲಭ್ಯ ಸಿಕ್ಕಿದೆ. ಹೀಗಾಗಿ ಆ ಮಗುವಿಗೆ ಜೀವಮಾನ ಪೂರ್ತಿ ಉಚಿತ ವಿಮಾನ ಪ್ರಯಾಣದ ಅವಕಾಶ ನೀಡಬೇಕೆಂದು ಜಾಲತಾಣದಲ್ಲಿ ಕೆಲವರು ಟ್ವೀಟ್ ಮಾಡಿದ್ದಾರೆ. ಹಿಂದೊಮ್ಮೆ ಎರಡು ಬಾರಿ ಇಂತಹ ನಿದರ್ಶನ ಆಗಿತ್ತು. 2017ರಲ್ಲಿ ಸೌದಿ ಅರೇಬಿಯಾದಿಂದ ಭಾರತಕ್ಕೆ ಬರುತ್ತಿದ್ದ ಜೆಟ್ ಏರ್ವೇಸ್ ವಿಮಾನದಲ್ಲಿ ಮಹಿಳೆಗೆ ಹೆರಿಗೆ ಆಗಿತ್ತು. ಆ ಸಂದರ್ಭದಲ್ಲಿ ಜೆಟ್ ಏರ್ವೇಸ್ ವಿಮಾನ ಕಂಪೆನಿ, ಮಗುವಿನ ಜೀವಮಾನ ಪೂರ್ತಿ ಉಚಿತ ಪ್ರಯಾಣದ ಆಫರ್ ನೀಡಿತ್ತು. 20009ರಲ್ಲಿ ಏರ್ ಏಶ್ಯಾ ವಿಮಾನ ಕಂಪೆನಿ, ಮಲೇಶ್ಯಾದ ಮಹಿಳೆಯೊಬ್ಬಳು ಹೆರಿಗೆಯಾದ ಸಂದರ್ಭದಲ್ಲಿ ಮಗುವಿಗೆ ಇಂಥದ್ದೇ ಆಫರ್ ನೀಡಿತ್ತು.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 07:10 pm
Mangalore Correspondent
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm