ಬ್ರೇಕಿಂಗ್ ನ್ಯೂಸ್
16-09-22 11:40 am Bangalore Correspondent ಕರ್ನಾಟಕ
ಬೆಂಗಳೂರು, ಸೆ.16: ಕರ್ನಾಟಕದ ಕೋಟ್ಯಂತರ ಅಭಿಮಾನಿಗಳ ದೇವರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಬಿರುದು ನೀಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಂದು ವಿಶೇಷ ಗೌರವ ನೀಡಿದೆ.
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಜನ್ಮದಿನವನ್ನು (ಮಾರ್ಚ್ 17) ಸ್ಫೂರ್ತಿ ದಿನ ಎಂದು ಸರ್ಕಾರದ ವತಿಯಿಂದಲೇ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಸಿಎಂ ಬೊಮ್ಮಾಯಿ ಅವರ ಈ ನಿರ್ಧಾರಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಧನ್ಯವಾದ ಸಲ್ಲಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಸುನೀಲ್ ಕುಮಾರ್, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರ್ಕಾರದ ವತಿಯಿಂದಲೇ ನಡೆಸಬೇಕೆಂಬ ನನ್ನ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳು. ಅಪ್ಪು ಜನ್ಮದಿನ, ಮಾರ್ಚ್ 17 ಇನ್ನು ಮುಂದೆ ಸ್ಫೂರ್ತಿ ದಿನವೆಂದು ಆಚರಿಸುವ ಮೂಲಕ ನಾಡಿನ ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಲಿದೆ ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ಬ್ರಹ್ಮರ್ಷಿ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಕನ್ನಡ, ಸಂಸ್ಕ್ರತಿ ಹಾಗೂ ಇಂಧನ ಸಚಿವ ವಿ. ಸುನೀಲ್ ಕುಮಾರ್, ಪುನೀತ್ ದಿನಾಚರಣೆಯನ್ನು ಸ್ಫೂರ್ತಿ ದಿನವಾಗಿ ಆಚರಣೆ ಮಾಡಬೇಕೆಂಬುದು ಸೇರಿದಂತೆ ಹಲವು ಮನವಿಗಳನ್ನು ಮುಖ್ಯಮಂತ್ರಿ ಮುಂದಿಟ್ಟಿದ್ದರು. ಇದಕ್ಕೆ ಸ್ಪಂದಿಸಿದ ಸಿಎಂ ಈ ಭರವಸೆ ನೀಡಿದ್ದಾರೆ. ಪುನೀತ್ ರಾಜ್ ಕುಮಾರ್ ಅಕಾಲಿಕವಾಗಿ ನಮ್ಮನ್ನು ಅಗಲಿದ್ದಾರೆ. ವೈಯಕ್ತಿಕವಾಗಿ ನನಗೆ ಅತ್ಯಂತ ಪ್ರೀತಿ ಪಾತ್ರ ವ್ಯಕ್ತಿಯಾಗಿದ್ದರು. ನಾಡಿನ ಕೋಟ್ಯಂತರ ಯುವಕರಿಗೆ ಅವರು ಸ್ಫೂರ್ತಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪುನೀತ್ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರ್ಕಾರದ ವತಿಯಿಂದಲೇ ಆಚರಣೆ ಮಾಡಲಾಗುವುದು ಎಂದು ಹೇಳಿದರು.
It has been 10 months since Sandalwood Famous Actor, Power Star Puneeth Rajkumar left us physically. But Kannadigas, especially his fans, have not forgotten him for a single moment and will never forget him. Appu is always alive in the hearts of Kannadigas. Even though Dodmane Rajkumar is not physically present, fans are somehow living with his memories. The fans never thought that he is not with us. Thus Yuvaratna is an inspiration to fans, to so many youths, to young actors and actresses every day and every moment. Now the state government has decided to celebrate his birthday as 'Inspiration Day'.
06-05-25 01:35 pm
HK News Desk
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 12:32 pm
Mangalore Correspondent
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm