ಬ್ರೇಕಿಂಗ್ ನ್ಯೂಸ್
08-10-20 04:02 pm Mysore Correspondent ಕರ್ನಾಟಕ
ಮೈಸೂರು, ಅಕ್ಟೋಬರ್ 08: 1960ರ ವೇಳೆಗೆ ಆಹಾರಕ್ಕಾಗಿ ನಮ್ಮ ದೇಶ ಇತರರ ಬಳಿ ಭಿಕ್ಷೆ ಬೇಡುವ ಸ್ಥಿತಿ ಇತ್ತು. ಈಗ ಇಡೀ ಜಗತ್ತಿಗೆ ಆಹಾರ ಪೂರೈಸುವ ಶಕ್ತಿ ಹೊಂದಿದ್ದೇವೆ. ಆದರೆ, ಕಾಂಗ್ರೆಸ್ನವರು ಮಾತ್ರ ರೈತರ ಹಾದಿ ತಪ್ಪಿಸಿ ದೇಶದ್ರೋಹದ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
‘ಇದೇ ವಿಚಾರವನ್ನು ಹಿಂದೆ ಕಾಂಗ್ರೆಸ್ ತಮ್ಮ ಪ್ರಣಾಳಿಕೆಯಲ್ಲಿ ಅಳವಡಿಸಿತ್ತು. ಈಗ ಮಾತ್ರ ಟೀಕಿಸುತ್ತಿದ್ದಾರೆ. ಕಾಂಗ್ರೆಸ್ ದ್ವಂದ್ವದ ಬಗ್ಗೆ ಮತ್ತು ಮಸೂದೆಯ ಲಾಭದ ಬಗ್ಗೆ ಪ್ರತಿ ರೈತನ ಮನೆಗೆ ತೆರಳಿ ಹೇಳುತ್ತೇವೆ. ಕೃಷಿ ಮಸೂದೆಗಳ ಉದ್ದೇಶ ತಿಳಿಸಿಕೊಡಲಿದ್ದೇವೆ. ರೈತ ಮುಖಂಡರು ಚರ್ಚೆಗೆ ಬಂದರೂ ಸಿದ್ಧ ಎಂದು ಸುದ್ದಿಗೋಷ್ಠಿಯಲ್ಲಿ ಹರಿಹಾಯ್ದರು.
ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿ ಆಗಿದ್ದ ವೇಳೆ 49 ಕಾರ್ಪೊರೇಟ್ ಕಂಪನಿಗಳಿಗೆ ಪರವಾನಗಿ ಕೊಟ್ಟಿದ್ದರು. ವಿವಿಧ ಸ್ವರೂಪದಲ್ಲಿ ಲಾಭ ಮಾಡಿಕೊಟ್ಟಿದ್ದರು. ಈಗ ನಮ್ಮ ನಿಲುವನ್ನು ಪ್ರಶ್ನಿಸುತ್ತಿದ್ದಾರೆ. ಕೊಳಕಿನಲ್ಲಿ ಮಲಗಿದ ಕೋಣನಿಗೆ ಒಂದು ಏಟು ಬಿದ್ದರೆ ಎಲ್ಲೋ ಪೆಟ್ಟು ಬಿದ್ದ ರೀತಿ ಕೇಳುತ್ತದೆ. ಎರಡು ಮತ್ತು ಮೂರನೇ ಏಟು ಬಿದ್ದಾಗ ಚೂರು ಎಚ್ಚರ ಆಗುತ್ತದೆ. ನಾಲ್ಕನೇ ಏಟು ಬಿದ್ದಾಗ ತನಗೇ ಪೆಟ್ಟು ಬಿದ್ದಿರುವುದೆಂದು ಅರಿವಿಗೆ ಬರುತ್ತದೆ. ಕಾಂಗ್ರೆಸ್ನವರಿಗೆ ಈಗ ನಾಲ್ಕನೇ ಏಟು ಬಿದ್ದಿದೆ. ಈಗಷ್ಟೇ ಎಚ್ಚೆತ್ತುಕೊಂಡಿದ್ದಾರೆ’ ಎಂದು ವ್ಯಂಗ್ಯವಾಡಿದರು.

ಹಿಂದೆ ನಮಗೆ ಬೇಕಾದಷ್ಟು ಆಹಾರ ದೇಶದಲ್ಲಿ ಸಿಗುತ್ತಿರಲಿಲ್ಲ. ಇಷ್ಟಾದರೂ ಕಾಂಗ್ರೆಸ್ನವರು ಪರ್ಯಾಯ ಹುಡುಕಲಿಲ್ಲ. ಕಾನೂನಿನ ಅಂಶಕ್ಕೆ ತಿದ್ದುಪಡಿಯನ್ನೂ ತಂದಿರಲಿಲ್ಲ. 1990ರ ಉದಾರೀಕರಣ ಜಾರಿಗೆ ತಂದಾಗಲೂ ರೈತರಿಗೆ ನೆರವು ಸಿಗಲಿಲ್ಲ. ಈಗ ಕೃಷಿ ಮಸೂದೆಗಳನ್ನು ಪರಿವರ್ತಿಸಿ, ರೈತರಿಗೆ ಸ್ವಾಭಿಮಾನ ನೀಡುವ ಮಸೂದೆ ತಂದಿದ್ದೇವೆ ಎಂದು ಕೃಷಿ ಮಸೂದೆಗಳ ಪರವಾಗಿ ಬ್ಯಾಟಿಂಗ್ ಮಾಡಿದರು.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm