ಬ್ರೇಕಿಂಗ್ ನ್ಯೂಸ್
18-09-22 12:10 pm HK News Desk ಕರ್ನಾಟಕ
ಮಂಡ್ಯ, ಸೆ.17 : ನವಜಾತ ಶಿಶುವೊಂದು ಪಾಳು ಬಾವಿಯಲ್ಲಿ ಪತ್ತೆಯಾಗಿದ್ದು 30 ಅಡಿ ಆಳದ ಬಾವಿಗೆ ಬಿದ್ದರೂ ಪವಾಡ ಸದೃಶ ಬದುಕುಳಿದ ಘಟನೆ ಪಾಂಡವಪುರ ತಾಲೂಕಿನ ಚಂದ್ರೆ ಗ್ರಾಮದಲ್ಲಿ ನಡೆದಿದೆ.
ರಸ್ತೆ ಬದಿಯ ಪಾಳುಬಾವಿಯಲ್ಲಿ ಅಳುತ್ತಿದ್ದ ಮಗುವಿನ ಶಬ್ದ ಕೇಳಿ ರೈತ ಮಹಿಳೆಯರು ಬಂದು ಇಣುಕಿದಾಗ ಬಾವಿಯಲ್ಲಿ ಮಗು ಕಂಡುಬಂದಿದೆ. ತಕ್ಷಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಗುವನ್ನು ಪಾಂಡವಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಸ ಕಡ್ಡಿಯೇ ತುಂಬಿದ್ದ ಪಾಳುಬಾವಿಯಲ್ಲಿ ಬಿದ್ದಿದ್ದರೂ ಪವಾಡ ಸದೃಶ ರೀತಿಯಲ್ಲಿ ಶಿಶು ಬದುಕುಳಿದಿದೆ. ಆಗ ತಾನೇ ಜನಿಸಿರುವ ಗಂಡು ಮಗು ಇದಾಗಿದ್ದು ಅದನ್ನು ಪಾಳು ಬಾವಿಗೆ ಎಸೆದವರು ಯಾರು ಎಂಬ ಬಗ್ಗೆ ತನಿಖೆ ಆರಂಭಗೊಂಡಿದೆ. ಶಿಶುವಿನ ಮುಖ ಮತ್ತು ದೇಹದ ಕೆಲವು ಭಾಗಗಳಲ್ಲಿ ಇರುವೆ ಕಚ್ಚಿರುವ ಗುರುತುಗಳಿವೆ. ಬಾವಿಯಲ್ಲಿ ಪ್ಲಾಸ್ಟಿಕ್, ಪೇಪರ್ ಇನ್ನಿತರ ಕಸಗಳನ್ನು ಎಸೆಯಲಾಗಿದ್ದು ಹೀಗಾಗಿ ಕೆಳಕ್ಕೆ ಬಿದ್ದ ಮಗುವಿಗೆ ಹೆಚ್ಚೇನು ಗಾಯಗಳಾಗದೆ ಬದುಕುಳಿದಿದೆ. ಬೆಳಗ್ಗಿನ ಹೊತ್ತಿಗೆ ಮಗುವನ್ನು ಬಾವಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕೃತ್ಯ ಎಸಗಿದವರ ಬಗ್ಗೆ ಹುಡುಕಾಟ ನಡೆದಿದೆ.
Newborn baby thrown into 30 feet well in Mandya, luckily survives.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 01:35 pm
Mangaluru Correspondent
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm