ಬ್ರೇಕಿಂಗ್ ನ್ಯೂಸ್
18-09-22 09:31 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.18 : ಕಾಞಂಗಾಡು- ಕಾಣಿಯೂರು ರೈಲು ಮಾರ್ಗ ಸೇರಿದಂತೆ ಉದ್ದೇಶಿತ ರೈಲು ಯೋಜನೆಗಳಿಂದ ಕರ್ನಾಟಕದ ಪರಿಸರ ಸೂಕ್ಷ್ಮ ಪ್ರದೇಶಗಳಿಗೆ ಧಕ್ಕೆಯಾಗುತ್ತದೆ. ಇದರಿಂದ ಕೇರಳಕ್ಕೆ ಲಾಭ ಹೊರತು ಕರ್ನಾಟಕಕ್ಕೆ ಇಲ್ಲ. ಹೀಗಾಗಿ ಪರಿಸರ ಮತ್ತು ವನ್ಯಜೀವಿ ಅಭಯಾರಣ್ಯಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭಾನುವಾರ ಬೆಂಗಳೂರು ನಗರದಲ್ಲಿ ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ದಕ್ಷಿಣ ವಲಯ ಕೌನ್ಸಿಲ್ ಸಭೆಯಲ್ಲಿ ನಿರ್ಧರಿಸಿದಂತೆ ಕೇರಳ ಸಿಎಂ ಪಿಣರಾಯಿ ವಿಜಯನ್, ಕರ್ನಾಟಕದ ಸಿಎಂ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಲು ಆಗಮಿಸಿದ್ದಾರೆ ಎಂದರು.
ಮಾತುಕತೆ ಸಂದರ್ಭದಲ್ಲಿ ಕೇರಳ ಸರ್ಕಾರವು ಕಾಞಂಗಾಡ್- ಕಾಣಿಯೂರು(ಪುತ್ತೂರು) ರೈಲು ಮಾರ್ಗ ಮತ್ತು ಇತರ ಹೆದ್ದಾರಿ ಮತ್ತು ರೈಲು ಯೋಜನೆಗಳಿಗೆ ಕರ್ನಾಟಕ ಸರಕಾರದ ಸಹಕಾರವನ್ನು ಕೋರಿತ್ತು. ಉದ್ದೇಶಿತ ಕಾಞಂಗಾಡ್- ಕಾಣಿಯೂರು ರೈಲು ಮಾರ್ಗ ಯೋಜನೆಯು ಕೇರಳದಲ್ಲಿ 40 ಕಿ.ಮೀ ಮತ್ತು ಕರ್ನಾಟಕದಲ್ಲಿ 31 ಕಿ.ಮೀ ಮಾರ್ಗವನ್ನು ಹೊಂದಿದೆ. ಆದಾಗ್ಯೂ, ಈ ಯೋಜನೆಯು ಕರ್ನಾಟಕಕ್ಕೆ ಹೆಚ್ಚು ಪ್ರಯೋಜನಕಾರಿಯಾಗಿಲ್ಲ. ಇದಲ್ಲದೆ, ಇದು ಪಶ್ಚಿಮ ಘಟ್ಟಗಳ ಸಮೃದ್ಧ ಜೀವವೈವಿಧ್ಯತೆ ಮತ್ತು ಪರಿಸರ ಸೂಕ್ಷ್ಮ ಪ್ರದೇಶಗಳ ಮೂಲಕ ಹಾದುಹೋಗುತ್ತದೆ. ಆದ್ದರಿಂದ, ಈ ಯೋಜನೆಗೆ ಕರ್ನಾಟಕ ರಾಜ್ಯವು ವಿಸ್ತೃತ ಸಹಕಾರವನ್ನು ನೀಡಲು ಸಾಧ್ಯವಿಲ್ಲ ಎಂದು ಕೇರಳ ಸಿಎಂಗೆ ತಿಳಿಸಿದ್ದಾಗಿ ಬೊಮ್ಮಾಯಿ ಹೇಳಿದ್ದಾರೆ.
ತೆಲ್ಲಿಚೆರಿ-ಮೈಸೂರು ರೈಲು ಮಾರ್ಗದ ಹಳೆಯ ಯೋಜನೆಯ ಬಗ್ಗೆಯೂ ವಿಜಯನ್ ಚರ್ಚಿಸಿದರು ಮತ್ತು ಉದ್ದೇಶಿತ ರೈಲು ಮಾರ್ಗವು ಬಂಡೀಪುರ- ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳ ಮೂಲಕ ಹಾದುಹೋಗುವುದರಿಂದ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಅವರಿಗೆ ಕಟ್ಟುನಿಟ್ಟಾಗಿ ತಿಳಿಸಲಾಗಿದೆ ಮತ್ತು ಇದು ಸಸ್ಯ ಮತ್ತು ಪ್ರಾಣಿಗಳಿಗೆ ಹೆಚ್ಚಿನ ಹಾನಿಯನ್ನುಂಟು ಮಾಡುತ್ತದೆ ಎಂದು ಸಿಎಂ ಹೇಳಿದರು.
ಇದೇ ವೇಳೆ, ಕೇರಳ ಸಿಎಂ ಭೂಗತ ರೈಲು ಮಾರ್ಗವನ್ನು ನಿರ್ಮಿಸಲು ಪ್ರಸ್ತಾಪಿಸಿದ್ದು ನಿರ್ಮಾಣ ಚಟುವಟಿಕೆಗಳ ಸಮಯದಲ್ಲಿ ಪರಿಸರಕ್ಕೆ ಹಾನಿಯಾಗುತ್ತದೆ ಎಂಬ ಕಾರಣಕ್ಕೆ ಅದನ್ನು ಸಹ ತಿರಸ್ಕರಿಸಲಾಗಿದೆ. ಪ್ರಸ್ತುತ, ಬಂಡೀಪುರ ರಾಷ್ಟ್ರೀಯ ಹೆದ್ದಾರಿಯ ಮೂಲಕ ರಾತ್ರಿ ಸಮಯದಲ್ಲಿ ಎರಡು ಬಸ್ಸುಗಳನ್ನು ಓಡಿಸಲಾಗುತ್ತಿದೆ. ಆದರೆ ಅವರು ನಾಲ್ಕು ಬಸ್ಸುಗಳಿಗೆ ಅನುಮತಿ ನೀಡುವಂತೆ ಕೋರಿದ್ದಾರೆ ಎಂದು ಬೊಮ್ಮಾಯಿ ಗಮನಸೆಳೆದರು.
Karnataka Chief Minister Basavaraj Bommai on 18 September refused to accept proposals by neighbouring Kerala that involved meddling with eco-sensitive zones for development.Kerala Chief Minister Pinarayi Vijayan had met Bommai in Bengaluru to hold bilateral talks, as decided in the Southern Region Council meeting.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 12:07 pm
HK News Desk
Gold Loan Scam at Paduva Society, ShaktiNagar...
30-06-25 06:12 pm
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm