ಬ್ರೇಕಿಂಗ್ ನ್ಯೂಸ್
21-09-22 10:25 am Bangalore Correspondent ಕರ್ನಾಟಕ
ಬೆಂಗಳೂರು, ಸೆ.21 : ಪಿಎಸ್ಐ ನೇಮಕಾತಿ ಹಗರಣದ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸದನದಲ್ಲಿ ಒತ್ತಾಯಿಸಿದ್ದಾರೆ.
ಪಿಎಸ್ಐ ನೇಮಕಾತಿಯಲ್ಲಾಗಿರುವ ಅವ್ಯವಹಾರಗಳ ಬಗ್ಗೆ ಮಂಗಳವಾರ ವಿಧಾನಸಭೆ ಅಧಿವೇಶನದಲ್ಲಿ ಸುದೀರ್ಘ ಚರ್ಚೆ ನಡೆಸಿದ ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಅಲ್ಲದೆ, ಈವರೆಗೂ ಕೇವಲ ಒಂದಷ್ಟು ಅಧಿಕಾರಿಗಳು ಮತ್ತು ಅಭ್ಯರ್ಥಿಗಳನ್ನು ಬಂಧಿಸಿದ್ದೀರಿ. ರಾಜಕಾರಣಿಗಳ ಕೈವಾಡ ಇಲ್ವಾ.. ಯಾಕೆ ಅವರನ್ನು ವಿಚಾರಣೆಗೆ ಒಳಪಡಿಸಿಲ್ಲ. ಬಂಧನ ಮಾಡಿಲ್ಲ. ಒಟ್ಟು ಹಗರಣದ ಬಗ್ಗೆ ಗೃಹ ಸಚಿವರು ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದರು.

ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಲ್ಲಿಗೆ ಹೋಗಿದ್ದೆ. ಅಲ್ಲಿ ಎಸ್ಡಿಎ, ಎಫ್ಡಿಎ, ಇಂಜಿನಿಯರ್ಗಳು, ಪೊಲೀಸ್ ಕಾನ್ಸ್ಟೇಬಲ್, ಕೆಪಿಟಿಸಿಎಲ್ ಪರೀಕ್ಷೆ ಬರೆದವರು ಹಾಗೂ ಪಿಎಸ್ಐ ನೇಮಕಾತಿ ಪ್ರಕ್ರಿಯೆ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಕೆಲಸ ಕಳೆದುಕೊಂಡುವರು ಇದ್ದರು. ಅವರು ತಮ್ಮಿಂದ ಲಂಚ ನೀಡಿ ಕೆಲಸ ತೆಗೆದುಕೊಳ್ಳಲು ಆಗಲ್ಲ, ಹಾಗಾಗಿ ನಮ್ಮ ತಂದೆ ತಾಯಂದಿರು ಬೆಳೆದಿರುವ ಹೆಸರು, ಉದ್ದು, ಕಡ್ಲೆ, ಗೋಧಿ, ಅಕ್ಕಿ ಮುಂತಾದವುಗಳನ್ನು ಚೀಲದಲ್ಲಿ ಕಟ್ಟಿ ನನಗೆ ಕೊಟ್ಟು ಕಳಿಸಿದ್ದಾರೆ, ಅದನ್ನು ಸಭಾಧ್ಯಕ್ಷರ ಮೂಲಕ ಸರ್ಕಾರಕ್ಕೆ ತಲುಪಿಸುವುದು ನನ್ನ ಜವಾಬ್ದಾರಿ ಎಂದು ಸಿದ್ದರಾಮಯ್ಯ ಹೇಳಿದರು. ಇದಕ್ಕೆ ಪೂರಕವಾಗಿ ಪ್ರಿಯಾಂಕ ಖರ್ಗೆ ಕೂಡ ಸರಕಾರಕ್ಕೆ ಛಾಟಿ ಬೀಸಿದರು.
ಆದರೆ, ವಿಪಕ್ಷ ನಾಯಕರ ತರಾಟೆಗೆ ಮುಖ್ಯಮಂತ್ರಿ ಬೊಮ್ಮಾಯಿ ಅಷ್ಟೇ ಸಮರ್ಥವಾಗಿ ಪ್ರತಿ ಏಟು ಕೊಡುತ್ತಾ ಬಂದರು. ಬಿಜೆಪಿ ನಾಯಕರ ಸಮರ್ಥನೆಗೆ ಜೆಡಿಎಸ್ ನಾಯಕ ಕುಮಾರಸ್ವಾಮಿ ಬೆಂಬಲಕ್ಕೆ ಬಂದು ಹಗರಣದ ಬಗ್ಗೆ ತನಿಖೆ ನಡೆಸಿದ್ದೇ ಸಾಧನೆಯೆಂದು ಬಿಂಬಿಸಿದರು. ಇದರಿಂದ ಕೆರಳಿದ ಸಿದ್ದರಾಮಯ್ಯ, ನೀವು ಏನೇ ತನಿಖೆಯ ನಾಟಕ ಮಾಡಿ. ಮೊನ್ನೆ ನಿಮ್ಮ ಶಾಸಕನೇ 15 ಲಕ್ಷ ತಗೊಂಡಿದ್ದು ಹೌದು ಎಂದಿದ್ದಾನೆ. ನೀವು ಏನು ಮಾಡಿದ್ರಿ. ಯಾವ ತನಿಖೆ ಕೈಗೊಂಡಿದ್ರಿ. ನೀವು ಆಡಳಿತ ಪಕ್ಷದವರು ಎಲ್ಲ ಸೇರಿಕೊಂಡಿದ್ದೀರಿ ಎಂದರ್ಥ ತಾನೇ. ನಿಮಗೆ ನೈತಿಕತೆ ಇದ್ದರೆ ಗೃಹ ಸಚಿವರ ರಾಜಿನಾಮೆ ಪಡೆದು ತನಿಖೆ ನಡೆಸಿ ಎಂದು ಸವಾಲು ಹಾಕಿದರು. ಇದೇ ವೇಳೆ, ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರ ನಡುವೆ ವಾಗ್ಯುದ್ಧವೇ ನಡೆಯಿತು. ಕಾಂಗ್ರೆಸ್ ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದು ಗದ್ದಲ ಎಬ್ಬಿಸಿದ್ದರು. ಕೊನೆಗೆ ಸದನವನ್ನು ಸ್ಪೀಕರ್ ಮುಂದೂಡಿರುವುದಾಗಿ ಪ್ರಕಟಿಸಿ ಎದ್ದು ಹೋದರು.
The alleged scam in recruitment of police sub-inspectors generated heat in the Legislative Assembly on Tuesday with the Opposition Congress members staging a dharna in the House seeking a judicial probe and demanding the resignation of Home Minister Araga Jnanendra.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 01:26 pm
HK News Staffer
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm