ಬ್ರೇಕಿಂಗ್ ನ್ಯೂಸ್
21-09-22 08:02 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.21: ಶಿವಮೊಗ್ಗದಲ್ಲಿ ಬಂಧಿತರಾಗಿರುವ ಇಬ್ಬರು ಶಂಕಿತ ಉಗ್ರರು ದೇಶಾದ್ಯಂತ ವಿಧ್ವಂಸಕ ಕೃತ್ಯ ಎಸಗಲು ಯೋಜನೆ ರೂಪಿಸಿದ್ದರು. ಇದಕ್ಕಾಗಿ ತುಂಗಭದ್ರಾ ನದಿ ತಟದ ನಿರ್ಜನ ಪ್ರದೇಶದಲ್ಲಿ ಬಾಂಬ್ ತಯಾರಿಸಿ ಪ್ರಯೋಗ ನಡೆಸುತ್ತಿದ್ದರು ಎನ್ನುವ ಮಾಹಿತಿ ತನಿಖೆಯಲ್ಲಿ ಕಂಡುಬಂದಿದ್ದು, ಬಂಧಿತರನ್ನು ಅಲ್ಲಿನ ವಿವಿಧ ಪ್ರದೇಶಗಳಿಗೆ ಕರೆದೊಯ್ದು ಮಹಜರು ನಡೆಸಿದ್ದಾರೆ.
ಸೈಯದ್ ಯಾಸಿನ್ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಷಯದಲ್ಲಿ ತಾಂತ್ರಿಕ ಪರಿಣತಿ ಪಡೆದಿದ್ದರೆ, ಮಾಝ್ ಮುನೀರ್ ಅಹ್ಮದ್ ಎಂಟೆಕ್ ಪದವೀಧರನಾಗಿದ್ದು ಆಧುನಿಕ ರೀತಿಯ ಸ್ಫೋಟಕಗಳನ್ನು ತಯಾರಿಸುವ ಬಗ್ಗೆ ಪ್ರಯೋಗ ನಡೆಸುತ್ತಿದ್ದರು. ಇವರಿಬ್ಬರು ಕೂಡ ತುಂಗಭದ್ರಾ ದಡ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಬಾಂಬ್ ತಯಾರಿಗಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ, ಈ ಬಗ್ಗೆ ಬೇರೆಯವರಿಗೂ ತರಬೇತಿ ನೀಡುತ್ತಿದ್ದರು. ತುಂಗಭದ್ರಾ ನದಿಯ ಹಳೇ ಗುರುಪುರ ವಲಯದ 17 ಕಡೆಗಳಲ್ಲಿ ಇಂಥ ಶಿಬಿರಗಳನ್ನು ನಡೆಸುತ್ತಿದ್ದರು. ಮತ್ತು ಅಲ್ಲಿ ವಿವಿಧ ಮಾದರಿಯ ಸ್ಫೋಟಕಗಳನ್ನು ಅಡಗಿಸಿಟ್ಟಿರುವುದು ಮಹಜರು ವೇಳೆ ಪತ್ತೆಯಾಗಿದೆ ಎನ್ನುವ ಮಾಹಿತಿಗಳಿವೆ. ದಾವಣಗೆರೆ ಮತ್ತು ಬೆಂಗಳೂರಿನಿಂದ ಬಂದಿದ್ದ ಎಫ್ಎಸ್ಎಲ್ ತಜ್ಞರ ತಂಡ ಚನ್ನಗಿರಿ ರಸ್ತೆಯ ಗುರುಪುರ- ಪುರಲೆ ಪ್ರದೇಶದಲ್ಲಿ ಸ್ಫೋಟಕಗಳನ್ನು ಅಡಗಿಸಿದ್ದಾರೆಂಬ ಶಂಕೆ ಮೇರೆಗೆ ಸ್ಥಳ ಮಹಜರು ನಡೆಸಿದ್ದಾರೆ.
ಆರೋಪಿಗಳು ತಮ್ಮೊಳಗೆ ಸಂವಹನ ನಡೆಸುವುದಕ್ಕೆ Wire App ಎನ್ನುವ ಅಪ್ಲಿಕೇಶನ್ ಬಳಸುತ್ತಿದ್ದರು. ಇದರಲ್ಲಿ ನೂರಕ್ಕೂ ಹೆಚ್ಚು ಮಂದಿ ತಂಡವಾಗಿ ಇದೇ ಏಪ್ ಬಳಕೆ ಮಾಡುತ್ತಿದ್ದುದು ತನಿಖೆಯಲ್ಲಿ ಪತ್ತೆಯಾಗಿದೆ. ಇತ್ತೀಚೆಗೆ ಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣದಲ್ಲಿ ಬಂಧನವಾಗಿದ್ದ ಜಬೀವುಲ್ಲಾ ನೀಡಿದ್ದ ಮಾಹಿತಿ ಅನುಸರಿಸಿ ಪೊಲೀಸರು ತನಿಖೆ ನಡೆಸಿದಾಗ ಉಗ್ರರ ಜಾಲ ಬಯಲಾಗಿತ್ತು. ಇವರೆಲ್ಲ ಐಸಿಸ್ ಉಗ್ರರ ಪರವಾಗಿ ಕೆಲಸ ಮಾಡುತ್ತಿದ್ದರು ಎನ್ನುವ ಬಗ್ಗೆ ಮಾಹಿತಿ ಲಭಿಸಿದೆ.
ಐಸಿಸ್ ಉಗ್ರರ ಲಿಂಕ್ ; ಶಿವಮೊಗ್ಗ ಪೊಲೀಸರಿಂದ ಮೂವರ ಬಂಧನ, ಮಂಗಳೂರಿನ ಗೋಡೆ ಬರಹ ಪ್ರಕರಣಕ್ಕೆ ನಂಟು !
Shivamogga terror suspects, explosives were made near Tungabhadra River side. Shivamogga police are investigating the activities of two persons arrested on the charge of having links with Islamic State (ISIS), which is a banned terror organisation. Police suspect the accused were in possession of explosives and intended to damage public property.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm