ಬ್ರೇಕಿಂಗ್ ನ್ಯೂಸ್
25-09-22 04:04 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.25 : ಜನಸಾಮಾನ್ಯರ ಪಾಲಿಗೆ ತುರ್ತು ಸಂದರ್ಭದಲ್ಲಿ ಆಪದ್ಬಾಂಧವ ಎನಿಸಿಕೊಂಡಿರುವ 108 ಆ್ಯಂಬುಲೆನ್ಸ್ ಸೇವೆ ರಾಜ್ಯಾದ್ಯಂತ ಶನಿವಾರ ರಾತ್ರಿಯಿಂದಲೇ ಸ್ಥಗಿತಗೊಂಡಿದೆ. ಆರೋಗ್ಯ ಇಲಾಖೆಯ ಮಹಾ ಎಡವಟ್ಟಿನಿಂದಾಗಿ ಜನರು ಪರದಾಟ ನಡೆಸುವಂತಾಗಿದೆ.
ಸಹಾಯವಾಣಿ ನಂಬರ್ 108ಕ್ಕೆ ಕರೆ ಮಾಡಿದರೆ ಕರೆ ಸ್ವೀಕರಿಸುತ್ತಿಲ್ಲ. ರಿಂಗ್ ಆಗುತ್ತದೆಯೇ ಹೊರತು ಉತ್ತರ ಬರುತ್ತಿಲ್ಲ. ತುರ್ತು ಸಮಯದಲ್ಲಿ ಆಂಬುಲೆನ್ಸ್ ಸಿಗದೆ ಜನರು ಪರದಾಡುತ್ತಿದ್ದಾರೆ.
ರಾಜ್ಯದಲ್ಲಿ ಜಿವಿಕೆ ಏಜೆನ್ಸಿ 108 ಸರಕಾರಿ ಆಂಬುಲೆನ್ಸ್ ಸೇವೆಯನ್ನು ನೀಡುತ್ತಿದೆ. ತಾಂತ್ರಿಕ ದೋಷದಿಂದ ತುರ್ತು ಸೇವೆ ಬಂದ್ ಆಗಿದೆ ಎನ್ನಲಾಗುತ್ತಿದೆ. ರಾಜ್ಯದಾದ್ಯಂತ ತುರ್ತು ಆರೋಗ್ಯ ಸೇವೆ ವ್ಯತ್ಯಯ ಆಗಿದ್ದರೂ ಸರ್ಕಾರ ಮಾತ್ರ ನಿರ್ಲಕ್ಷ್ಯ ತೋರಿದೆ. ರಾಜ್ಯಾದ್ಯಂತ ಆಂಬುಲೆನ್ಸ್ ಸೇವೆ ಬಂದ್ ಆಗಿದ್ದರೂ ಬಗೆಹರಿಸಲು ಸರ್ಕಾರ ಮುಂದಾಗಿಲ್ಲ. 108ಕ್ಕೆ ನಿತ್ಯವೂ ಸುಮಾರು 20 ಸಾವಿರ ಕರೆ ಬರುತ್ತದೆ ಎನ್ನುವ ಲೆಕ್ಕಾಚಾರ ಇದೆ. ಗಂಟೆಗೆ ಅಂದಾಜು 500 ಕರೆಗಳು ಬರುತ್ತವೆ. ಆದರೆ, ಈಗ ಕರೆ ಬರುತ್ತಿದ್ದರೂ, 108 ಆಂಬ್ಯುಲೆನ್ಸ್ ಸಿಬ್ಬಂದಿ ಸ್ವೀಕರಿಸುತ್ತಿಲ್ಲ. ಮೇಲ್ನೋಟಕ್ಕೆ ತಾಂತ್ರಿಕ ದೋಷ ಎನ್ನಲಾಗುತ್ತಿದ್ದರೂ, ಅದನ್ನು ತುರ್ತು ಸರಿಪಡಿಸಬೇಕಾದವರು ನಿರ್ಲಕ್ಷ್ಯ ತೋರಿದ್ದಾರೆ.
ಭಾನುವಾರ ರಜೆ ದಿನವಾದ್ದರಿಂದ ತಾಂತ್ರಿಕ ಸಿಬ್ಬಂದಿ ದೂರ ಉಳಿದಿದ್ದಾರೆ. ಸರಕಾರಿ ತುರ್ತು ಸೇವೆಯ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದರ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸೆ.24ರ ಶನಿವಾರ ರಾತ್ರಿಯಿಂದ ಬಂದಿರುವ ಒಟ್ಟು 8000 ಕರೆಗಳಲ್ಲಿ 2000 ಸಾವಿರ ಕರೆಗಳು ಗಂಭೀರ ಕರೆಗಳಾಗಿರುವ ಸಾಧ್ಯತೆಯಿದೆ.

ತಕ್ಷಣಕ್ಕೆ ಆರಂಭಕ್ಕೆ ಸೂಚನೆ
ಆಂಬುಲೆನ್ಸ್ ಸೇವೆ ಸ್ಥಗಿತ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಆರೋಗ್ಯ ಇಲಾಖೆಯಲ್ಲಿ ಏನಾಗಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಸೇವೆಯನ್ನು ತಕ್ಷಣ ಆರಂಭಿಸುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಸರ್ವರ್ ಸಮಸ್ಯೆ ಆಗಿದೆ
ಜಿವಿಕೆ ರಾಜ್ಯ ಮುಖ್ಯಸ್ಥ ಹನುಮಂತಪ್ಪ ಆರ್. ಜಿ. ಮಾತನಾಡಿ, ಸರ್ವರ್ ವಿಭಾಗದ ಸಾಫ್ಟ್ ವೇರ್, ಹಾರ್ಡ್ವೇರ್ ನಲ್ಲಿ ತಾಂತ್ರಿಕ ದೋಷ ಉಂಟಾಗಿದೆ. ಹೀಗಾಗಿ ಸಾರ್ವಜನಿಕ ಕರೆಯನ್ನು ಮಾನಿಟರ್ ಮಾಡಲು ಸಾಧ್ಯವಾಗುತ್ತಿಲ್ಲ. ಕೇವಲ ಕರೆಯನ್ನು ಸ್ವೀಕಾರ ಮಾಡುತ್ತಿದ್ದೇವೆ. ಚೆನ್ನೈನಿಂದ ಸರ್ವರ್ ಹಾರ್ಡ್ವೇರ್ಗೆ ಕಾಯುತ್ತಿದ್ದೇವೆ. ಬಂದ ಬಳಿಕ ಟೆಕ್ನಿಕಲ್ ಸಮಸ್ಯೆ ಪರಿಹಾರ ಆಗಲಿದೆ. ತುರ್ತು ಸಂದರ್ಭಕ್ಕಾಗಿ 112 ಕ್ಕೆ ಕರೆ ಮಾಡಬಹುದು ಎಂದಿದ್ದಾರೆ.
Karnataka 108 ambulance service no more, people in trouble.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 06:22 pm
HK News Staffer
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 07:21 pm
HK News Staffer
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm