ಬ್ರೇಕಿಂಗ್ ನ್ಯೂಸ್
28-09-22 10:42 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28 : ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಸೇರಿದ ಮನೆ, ಕಚೇರಿ ಮತ್ತು ಇತರ ಕಡೆಗಳಲ್ಲಿರುವ ಆಸ್ತಿಗಳಿಗೆ ಬುಧವಾರ ದಾಳಿ ನಡೆಸಿದ್ದಾರೆ.
ಡಿ.ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳ ಮೇಲೆ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಸಿಬಿಐ ಡಿಕೆ ಶಿವಕುಮಾರ್ ಅವರ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿದೆ.
ಕನಕಪುರ ತಹಶೀಲ್ದಾರ್ ವಿಶ್ವನಾಥ್ ಹಾಗೂ ಪೋಲೀಸರ ಜತೆಗೆ ತೆರಳಿದ್ದ ಕೇಂದ್ರ ತನಿಖಾ ದಳದ ಅಧಿಕಾರಿಗಳು, ಪರಿಶೀಲನೆ ವೇಳೆ ಕೆಲವು ದಾಖಲೆಗಳನ್ನು ತೆಗೆದುಕೊಂಡಿದ್ದಾರೆ ಎಂಬ ಮಾಹಿತಿಯಿದೆ.

ಕನಕಪುರದಲ್ಲಿ ಡಿಕೆ ಶಿವಕುಮಾರ್ ಅವರ ಸಂಬಂಧಿಕರ ಆಸ್ತಿ ವಿವರಗಳ ಮಾಹಿತಿಯನ್ನು ಸಿಬಿಐ ಪಡೆದುಕೊಂಡಿದೆ. ತನಿಖಾ ತಂಡದ ಅಧಿಕಾರಿಗಳು ಸುಮಾರು ಒಂದು ಗಂಟೆಗೂ ಅಧಿಕ ಕಾಲ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಸಿಬಿಐ ದಾಳಿ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿಬಿಐ ಅಧಿಕಾರಿಗಳು ತಹಶೀಲ್ದಾರ್ ಅವರನ್ನು ಜೊತೆಗೆ ಕರೆದುಕೊಂಡು ಬಂದು, ನಮ್ಮ ಊರಿನ ಆಸ್ತಿ ಪರಿಶೀಲನೆ ಮಾಡುತ್ತಿದ್ದಾರೆ. ಅವರು ಕೇಳಿದ ದಾಖಲೆ ನೀಡಿದ್ದೇನೆ. ನಮ್ಮ ತೋಟದ ಮನೆ, ಊರಿನ ಮನೆಗೆ ಬಂದು ಎಲ್ಲಾ ಆಸ್ತಿಗಳನ್ನು ನೋಡಿದ್ದಾರೆ ಅಂತ ಸಿಬ್ಬಂದಿ ತಿಳಿಸಿದ್ದಾರೆ. ಇಷ್ಟು ಮಾತ್ರ ನಂಗೆ ಗೊತ್ತು ಎಂದರು.
ಭಾರತ್ ಜೋಡೋ ಯಾತ್ರೆ ಹೊತ್ತಲ್ಲೇ ದಾಳಿ ನಡೆಸಿರುವ ಕುರಿತು ಮಾತನಾಡಿದ ಅವರು, "ಏನು ಮಾಡೋಕೆ ಆಗುತ್ತೆ.. ಇದು ಹಣೆಬರಹ. ಇದು ಟಾರ್ಗೆಟ್ ಅಂತ ನಾನು ಹೇಳುವುದಿಲ್ಲ. ಅವರು ನನ್ನ ಪ್ರೀತಿ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ.
The CBI sleuths on Wednesday visited Karnataka Congress president D K Shivakumar's properties at his hometown in Ramanagara district and verified the documents related to them, his office said.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm