ಬ್ರೇಕಿಂಗ್ ನ್ಯೂಸ್
29-09-22 01:58 pm HK News Desk ಕರ್ನಾಟಕ
ಬೆಳಗಾವಿ, ಸೆ.29 : ಈ ದೇಶದಲ್ಲಿ ಮೊದಲಿಗೆ ನಿಷೇಧ ಮಾಡಬೇಕಿರುವುದು ಕಾಂಗ್ರೆಸ್ ಪಕ್ಷವನ್ನು. ದೇಶದಲ್ಲಿ ಇವತ್ತು ಪಿಎಫ್ಐ, ಎಸ್ ಡಿ ಪಿ ಐ ಅಂತಹ ಸಂಘಟನೆಗಳಿಗೆ ಭಯೋತ್ಪಾದನೆ ಚಟುವಟಿಕೆ ನಡೆಸಲು ಶಕ್ತಿ ಕೊಟ್ಟಿದ್ದೇ ಕಾಂಗ್ರೆಸ್ ಪಕ್ಷ. ಅದಕ್ಕಾಗಿ ಕಾಂಗ್ರೆಸನ್ನು ಮೊದಲು ನಿಷೇಧ ಮಾಡಬೇಕೆಂದು ಹೇಳ್ತೀನಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಹೇಳಿದ್ದಾರೆ.
ಮಹಾತ್ಮ ಗಾಂಧಿಯವರಿಗೆ ಮೊದಲೇ ಗೊತ್ತಿತ್ತು. ಕಾಂಗ್ರೆಸ್ ಸ್ವಾತಂತ್ರ್ಯಾ ನಂತರ ದೇಶದಲ್ಲಿ ಆಡಳಿತ ಮಾಡಿದ್ರೆ ದೇಶವನ್ನ ಹಾಳು ಮಾಡುತ್ತದೆ ಅಂತ. ಹಾಗಾಗಿ ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಅನ್ನ ವಿಸರ್ಜನೆ ಮಾಡಲಿ ಅಂತ ಹೇಳಿದ್ದರು. ಆದರೆ ಇವರು ಮಾಡಿರಲಿಲ್ಲ. ಸಿದ್ದರಾಮಯ್ಯ ತಮ್ಮ ಸರಕಾರದ ಅವಧಿಯಲ್ಲಿ ಎಷ್ಟು ಜನ ಪಿಎಫ್ಐ ಕಾರ್ಯಕರ್ತರನ್ನ ರಕ್ಷಣೆ ಮಾಡಿದ್ದಾರೆ ಅಂತ ಹಿಂದೆ ತಿರುಗಿ ನೋಡಲಿ. ಕಾಂಗ್ರೆಸ್ ನವರು ಹಂತಕರನ್ನ ರಕ್ಷಣೆ ಮಾಡಿದ್ದಾರೆ. ಆ ಬಗ್ಗೆ ಒಮ್ಮೆ ಅಧ್ಯಯನ ಮಾಡಿದರೆ ಒಳ್ಳೆಯದು. ಆಗ ಅವರೇ ಕಾಂಗ್ರೆಸ್ ನಿಷೇಧ ಮಾಡಬೇಕೆಂದು ಹೇಳ್ತಾರೆ ಎಂದು ಟಾಂಗ್ ನೀಡಿದ್ದಾರೆ.

ಅವಧಿ ಪೂರ್ವ ಚುನಾವಣೆ ಇಲ್ಲ
ಗುಜರಾತ್ ಜೊತೆಗೆ ಕರ್ನಾಟಕದಲ್ಲೂ ಡಿಸೆಂಬರ್ ನಲ್ಲಿ ಚುನಾವಣೆ ಆಗುತ್ತೆ ಎನ್ನುವ ವದಂತಿ ಕುರಿತ ಪ್ರಶ್ನೆಗೆ, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಬರಲ್ಲ. ನಮ್ಮ ಸರ್ಕಾರ ಪೂರ್ಣ ಅವಧಿ ಪೂರೈಸುತ್ತವೆ. ನಮಗೆ ಯಾವುದೇ ಚುನಾವಣೆ ಧಾವಂತ ಇಲ್ಲ. ಸಿಎಂ ಆಗೋ ಧಾವಂತ ಇರೋದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ. ನಮ್ಮ ಪಾರ್ಟಿಯಲ್ಲಿ ಅಂತಹ ಧಾವಂತಗಳು ಇಲ್ಲ ಎಂದರು.

ರಮೇಶ್ ಜಾರಕಿಹೊಳಿ ನಾಯಕತ್ವದಲ್ಲಿ ಬೆಳಗಾವಿ ಜಿಲ್ಲೆ ಚುನಾವಣೆ ಎದುರಿಸುತ್ತಿರಾ ಪ್ರಶ್ನೆಗೆ, ನಾವು ಎಲ್ಲರನ್ನೂ ಇಟ್ಟುಕೊಂಡು ಚುನಾವಣೆ ಗೆ ಹೋಗ್ತಿವಿ. ಸ್ಪಷ್ಟವಾಗಿ ಚುನಾವಣೆ ಎದುರಿಸಿ ಗೆಲ್ಲುತ್ತೇವೆ. ನಮ್ಮ ಗುರಿ ಸತೀಶ್ ಜಾರಕಿಹೊಳಿ. ನಮ್ಮದು ಮತ್ತು ಬಾಲಚಂದ್ರ ಜಾರಕಿಹೊಳಿ, ರಮೇಶ್ ಜಾರಕಿಹೊಳಿ ಗುರಿ ಒಂದೇ ಇದೆ. ಮುಂದಿನ ಚುನಾವಣೆಯಲ್ಲಿ ಬೆಳಗಾವಿಯಲ್ಲಿ18 ಸ್ಥಾನದ ಗೆಲುವು. ರಾಜ್ಯದಲ್ಲಿ 150 ಸ್ಥಾನ ಗೆಲ್ಲುವ ಗುರಿಯಿದೆ. ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರನ್ನ ರಾಜಕೀಯ ಸನ್ಯಾಸತ್ವ ಕೊಡಿಸುವ ಸವಾಲನ್ನ ರಮೇಶ್ ಜಾರಕಿಹೊಳಿ ತೆಗೆದುಕೊಂಡಿದ್ದಾರೆ ಎಂದು ನಳಿನ್ ಹೇಳಿದರು. ಹಾಲಿ ಬಿಜೆಪಿ ಶಾಸಕರ ಮತಕ್ಷೇತ್ರದಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ ಎಂಬ ಪ್ರಶ್ನೆಗೆ, ಹಾಲಿ ಶಾಸಕರನ್ನ ಬದಲಾಯಿಸುವ ಪ್ರಶ್ನೆಯಿಲ್ಲ. ಆಕಾಂಕ್ಷಿಗಳು ಹೆಚ್ಚಾಗಿದ್ದರೆ ಅದು ನಮ್ಮ ಪಕ್ಷದ ಶಕ್ತಿ. ಹಾಲಿ ಶಾಸಕರನ್ನ ಬದಲಾಯಿಸುವ ಬಗ್ಗೆ ಯಾವುದೇ ಯೋಚನೆ, ಚರ್ಚೆ ನಮ್ಮ ಮುಂದಿಲ್ಲ ಎಂದರು.
First congress should be banned, growth of PFI was by congress slams Nalin Kumar Kateel.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm