ಬ್ರೇಕಿಂಗ್ ನ್ಯೂಸ್
01-10-22 01:59 pm Bangalore Correspondent ಕರ್ನಾಟಕ
ಬೆಂಗಳೂರು, ಅ.1: ದಸರಾ ಹಿನ್ನೆಲೆಯಲ್ಲಿ ಅ.1ರಿಂದ 5 ದಿನಗಳ ರಜೆ ಇರುವುದರಿಂದ ರಾಜಧಾನಿ ಬೆಂಗಳೂರಿನಿಂದ ರಾಜ್ಯದ ಇತರೇ ಉಪ ನಗರಗಳಿಗೆ ತೆರಳುವ ಖಾಸಗಿ ಬಸ್ಸುಗಳ ದರವನ್ನು ದಿಢೀರ್ ಹೆಚ್ಚಳ ಮಾಡಲಾಗಿದೆ. ರಜೆಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಕೆಲಸದಲ್ಲಿರುವ ಮಂದಿ ಊರಿಗೆ ತೆರಳುವುದರಿಂದ ಜನಸಾಮಾನ್ಯರನ್ನು ದರೋಡೆ ಮಾಡಲು ಖಾಸಗಿ ಬಸ್ ಮಾಲಕರು ಮುಂದಾಗಿದ್ದಾರೆ.
ಬೆಂಗಳೂರಿನಿಂದ ಮಂಗಳೂರು, ಕುಂದಾಪುರ, ಬೆಳಗಾವಿ, ಶಿವಮೊಗ್ಗ, ಹುಬ್ಬಳ್ಳಿ ಹೀಗೆ ರಾಜ್ಯದ ಹಲವೆಡೆ ತೆರಳುವ ಖಾಸಗಿ ಬಸ್ಸುಗಳ ದರವನ್ನು ಒಂದೇ ಬಾರಿಗೆ ಡಬಲ್ ಮಾಡಲಾಗಿದೆ. ಖಾಸಗಿ ಬಸ್ಸುಗಳ ಟಿಕೆಟ್ ಬುಕ್ಕಿಂಗ್ ಏಪ್ ಗಳಲ್ಲಿ ಅ.1ರಿಂದ 5ರ ವರೆಗಿನ ಬಸ್ ದರವನ್ನು ಎರಡು ಪಟ್ಟು, ಮೂರು ಪಟ್ಟು ಏರಿಸಿದ್ದು ಕಂಡುಬಂದಿದೆ.
ಸಾಮಾನ್ಯ ದಿನಗಳಲ್ಲಿ ಬೆಂಗಳೂರು- ಉಡುಪಿ ದರವು 700-750 ಇದ್ದರೆ, ಈ ದಿನಗಳಲ್ಲಿ ಅದನ್ನು 1400-1500 ರೂಪಾಯಿಗೆ ಏರಿಕೆ ಮಾಡಲಾಗಿದೆ. ಬೆಳಗಾವಿಗೆ ಇತರೇ ದಿನಗಳಲ್ಲಿ 800-900 ರೂ. ಇದ್ದರೆ, ಈಗ ಅದನ್ನು 1100ರಿಂದ 1500 ರೂ.ಗೆ ಏರಿಸಲಾಗಿದೆ. ಹುಬ್ಬಳ್ಳಿ ಬಸ್ ಗಳ ದರವೂ ಇದೇ ರೀತಿಯಾಗಿದ್ದು, ಸಾಮಾನ್ಯ ದಿನಗಳಲ್ಲಿ 800 ರೂ. ಇದ್ದುದ್ದನ್ನು 1200ರಿಂದ 1500ಕ್ಕೆ ಏರಿಸಲಾಗಿದೆ. ಕಲಬುರ್ಗಿಯ ಬಸ್ ದರವನ್ನೂ 900 ರೂ. ಇದ್ದುದನ್ನು 1500 ಮಾಡಲಾಗಿದೆ.
ಟಿಕೆಟ್ ದರವನ್ನು ದುಪ್ಪಟ್ಟು ಮಾಡಿದ್ದರೂ, ಹೆಚ್ಚಿನ ಟ್ರಾವೆಲ್ ಬಸ್ ಗಳಲ್ಲಿ ಟಿಕೆಟ್ ಭರ್ತಿಯಾಗಿವೆ. ಹೀಗಾಗಿ ಈ ದಿನಗಳಲ್ಲಿ ಹೆಚ್ಚುವರಿಯಾಗಿ ಬಸ್ ಓಡಿಸಲು ಬಸ್ ಮಾಲೀಕರು ಮುಂದಾಗಿದ್ದಾರೆ. ಹಬ್ಬದ ಸೀಸನ್ ಸಂದರ್ಭದಲ್ಲಿ ಪ್ರತಿ ಬಾರಿಯೂ ಖಾಸಗಿ ಮತ್ತು ಸರಕಾರಿ ಬಸ್ ಗಳ ದರವನ್ನು ಏರಿಸುವುದು ಮಾಮೂಲಿ ಆಗಿದೆ. ಆದರೆ ಈ ರೀತಿ ಜನರನ್ನು ಸುಲಿಯುವುದಕ್ಕೆ ಭಾರೀ ವಿರೋಧ ಬಂದಿದ್ದು ಸಾರಿಗೆ ಸಚಿವ ಶ್ರೀರಾಮುಲು ಖಾಸಗಿ ಬಸ್ ಗಳ ವಿರುದ್ಧ ದೂರು ನೀಡುವಂತೆ ಹೇಳಿದ್ದಾರೆ. ಸಾರಿಗೆ ಇಲಾಖೆಯಿಂದ ದೂರು ಪಡೆಯುವುದಕ್ಕಾಗಿಯೇ ಹೆಲ್ಪ್ ಲೈನ್ ನಂಬರ್ ಗಳನ್ನು ಕೊಡಲಾಗಿದ್ದು, 9449863249, 9449863426 ನಂಬರಿಗೆ ಕರೆ ಮಾಡಿ ದೂರು ನೀಡುವಂತೆ ಸಾರ್ವಜನಿಕರಲ್ಲಿ ಕೋರಿದೆ.
Private Bus fares zoom for festival season, public can lodge complaint if they are found looting.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm