ಬ್ರೇಕಿಂಗ್ ನ್ಯೂಸ್
10-10-20 10:53 am Headline Karnataka News Network ಕರ್ನಾಟಕ
ಮೈಸೂರು, ಅಕ್ಟೋಬರ್ .10 : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಯ ಕಾಡಿನ ದುರ್ಗಮ ಹಾದಿಯಲ್ಲಿ ಪತಿಯೊಂದಿಗೆ ಆಸ್ಪತ್ರೆಗೆ ನಡೆದು ಹೋಗುತ್ತಿದ್ದ ಗರ್ಭಿಣಿ ಕಾಡಿನ ಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ.
ಕಾಡಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ ಪತಿ ವಾಹನ ಕರೆ ತರಲು ಹೋಗಿ ಬರುವಷ್ಟು ಕಾಲ ಕಾಡಿನಲ್ಲೇ ಹಸುಗೂಸಿನ ಜತೆ ಕಳೆದಿದ್ದಾಳೆ..!
ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ಅಣ್ಣೇಹೊಲ ಗ್ರಾಮದ ವೀರಣ್ಣ ಎಂಬವರ ಪತ್ನಿ ಕಮಲ(22) ಈ ಗಟ್ಟಿಗಿತ್ತಿ ತಾಯಿ. ಗುರುವಾರ ರಾತ್ರಿ ಕಮಲನಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕಾಡಂಚಿನ ಗ್ರಾಮ ಆಗಿರುವುದರಿಂದ ವಾಹನ ಸೌಲಭ್ಯ ಸಿಗದೆ ವೀರಣ್ಣ ತನ್ನ ಪತ್ನಿಯನ್ನು ನಡೆಸಿಕೊಂಡೇ ಸುಮಾರು 5 ಕಿ.ಮೀ ದೂರದಲ್ಲಿರುವ ಮಹದೇಶ್ವರ ಬೆಟ್ಟದ ಸಾರ್ವಜನಿಕ ಆಸ್ಪತ್ರೆಗೆ ಹೊರಟಿದ್ದ.

ಹೊಟ್ಟೆ ನೋವಿನೊಂದಿಗೆ ಭಾರದ ಹೆಜ್ಜೆ ಇಡುತ್ತಿದ್ದ ಗರ್ಭಿಣಿಗೆ ಕಾಡಿನ ಮಧ್ಯೆ ದಾರಿಯಲ್ಲೇ ಹೆರಿಗೆಯಾಗಿದ್ದು ಹೆಣ್ಣು ಮಗು ಜನಿಸಿದೆ.
ಕೊನೆಗೆ, ತಾಯಿ ಮತ್ತು ಮಗುವನ್ನು ಅರ್ಧ ದಾರಿಯಲ್ಲೇ ಬಿಟ್ಟು ವಾಹನ ಕರೆತರಲೆಂದು ವೀರಣ್ಣ ಗ್ರಾಮದತ್ತ ತೆರಳಿದ್ದಾನೆ. ಈ ವೇಳೆ ಕಗ್ಗತ್ತಲಲ್ಲಿ, ಕಾಡು ಪ್ರಾಣಿಗಳ ಭಯದ ನಡುವೆ ತಾಯಿ ಮಗುವಿನೊಂದಿಗೆ ಸಮಯ ಕಳೆದಿದ್ದಾಳೆ. ಬಳಿಕ ಪತಿ ವೀರಣ್ಣ ನೆರೆ ಹೊರೆಯವರ ಬಳಿ ಹೇಳಿ ಸರಕು ಸಾಗಣೆ ವಾಹನವನ್ನು ಕರೆತಂದಿದ್ದು ಅದರಲ್ಲಿ ತಾಯಿ ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ. ಚಿಕಿತ್ಸೆ ನೀಡಿದ ವೈದ್ಯರು ಮಗು ಮತ್ತು ತಾಯಿ ಆರೋಗ್ಯವಾಗಿರುವುದಾಗಿ ತಿಳಿಸಿದ್ದಾರೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm