ಬ್ರೇಕಿಂಗ್ ನ್ಯೂಸ್
10-10-20 10:53 am Headline Karnataka News Network ಕರ್ನಾಟಕ
ಮೈಸೂರು, ಅಕ್ಟೋಬರ್ .10 : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಯ ಕಾಡಿನ ದುರ್ಗಮ ಹಾದಿಯಲ್ಲಿ ಪತಿಯೊಂದಿಗೆ ಆಸ್ಪತ್ರೆಗೆ ನಡೆದು ಹೋಗುತ್ತಿದ್ದ ಗರ್ಭಿಣಿ ಕಾಡಿನ ಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ.
ಕಾಡಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ ಪತಿ ವಾಹನ ಕರೆ ತರಲು ಹೋಗಿ ಬರುವಷ್ಟು ಕಾಲ ಕಾಡಿನಲ್ಲೇ ಹಸುಗೂಸಿನ ಜತೆ ಕಳೆದಿದ್ದಾಳೆ..!
ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ಅಣ್ಣೇಹೊಲ ಗ್ರಾಮದ ವೀರಣ್ಣ ಎಂಬವರ ಪತ್ನಿ ಕಮಲ(22) ಈ ಗಟ್ಟಿಗಿತ್ತಿ ತಾಯಿ. ಗುರುವಾರ ರಾತ್ರಿ ಕಮಲನಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕಾಡಂಚಿನ ಗ್ರಾಮ ಆಗಿರುವುದರಿಂದ ವಾಹನ ಸೌಲಭ್ಯ ಸಿಗದೆ ವೀರಣ್ಣ ತನ್ನ ಪತ್ನಿಯನ್ನು ನಡೆಸಿಕೊಂಡೇ ಸುಮಾರು 5 ಕಿ.ಮೀ ದೂರದಲ್ಲಿರುವ ಮಹದೇಶ್ವರ ಬೆಟ್ಟದ ಸಾರ್ವಜನಿಕ ಆಸ್ಪತ್ರೆಗೆ ಹೊರಟಿದ್ದ.

ಹೊಟ್ಟೆ ನೋವಿನೊಂದಿಗೆ ಭಾರದ ಹೆಜ್ಜೆ ಇಡುತ್ತಿದ್ದ ಗರ್ಭಿಣಿಗೆ ಕಾಡಿನ ಮಧ್ಯೆ ದಾರಿಯಲ್ಲೇ ಹೆರಿಗೆಯಾಗಿದ್ದು ಹೆಣ್ಣು ಮಗು ಜನಿಸಿದೆ.
ಕೊನೆಗೆ, ತಾಯಿ ಮತ್ತು ಮಗುವನ್ನು ಅರ್ಧ ದಾರಿಯಲ್ಲೇ ಬಿಟ್ಟು ವಾಹನ ಕರೆತರಲೆಂದು ವೀರಣ್ಣ ಗ್ರಾಮದತ್ತ ತೆರಳಿದ್ದಾನೆ. ಈ ವೇಳೆ ಕಗ್ಗತ್ತಲಲ್ಲಿ, ಕಾಡು ಪ್ರಾಣಿಗಳ ಭಯದ ನಡುವೆ ತಾಯಿ ಮಗುವಿನೊಂದಿಗೆ ಸಮಯ ಕಳೆದಿದ್ದಾಳೆ. ಬಳಿಕ ಪತಿ ವೀರಣ್ಣ ನೆರೆ ಹೊರೆಯವರ ಬಳಿ ಹೇಳಿ ಸರಕು ಸಾಗಣೆ ವಾಹನವನ್ನು ಕರೆತಂದಿದ್ದು ಅದರಲ್ಲಿ ತಾಯಿ ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ. ಚಿಕಿತ್ಸೆ ನೀಡಿದ ವೈದ್ಯರು ಮಗು ಮತ್ತು ತಾಯಿ ಆರೋಗ್ಯವಾಗಿರುವುದಾಗಿ ತಿಳಿಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm