ಬ್ರೇಕಿಂಗ್ ನ್ಯೂಸ್
12-10-22 04:44 pm HK News Desk ಕರ್ನಾಟಕ
ಕಾರವಾರ, ಅ.12 : ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸ ಬೆಳೆಸಿದ್ದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ರಾತ್ರಿ ವೇಳೆ ಭಟ್ಕಳದಲ್ಲಿ ತಂಗಿ ಯಕ್ಷಗಾನ ವೀಕ್ಷಿಸಿದ್ದಲ್ಲದೇ, ಯಕ್ಷಗಾನ ಪೋಷಾಕು ಧರಿಸಿ ಮಿಂಚಿದ್ದಾರೆ. ಚಿಕ್ಕಬಳ್ಳಾಪುರ ಮೂಲದ ಸುಧಾಕರ್ ಗೆ ಯಕ್ಷಗಾನ ಹೊಸತು. ಹೀಗಾಗಿ ಕರಾವಳಿಯ ಗಂಡುಕಲೆಯ ಬಗ್ಗೆ ಮೆಚ್ಚುಗೆ ತೋರಿದ್ದಲ್ಲದೆ ತಾನೇ ವೇಷ ಧರಿಸಿ ವರಸೆ ನೋಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ವೀಕ್ಷಣೆಗಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮತ್ತು ಅಧಿಕಾರಿಗಳು ಕಾರವಾರ, ಕುಮಟಾ ಹಾಗೂ ಭಟ್ಕಳಕ್ಕೆ ಭೇಟಿ ನೀಡಿದ್ದರು. ಭಟ್ಕಳದಲ್ಲಿ ಸಮುದಾಯ ಆಸ್ಪತ್ರೆಯ ವೀಕ್ಷಣೆ ಬಳಿಕ ನೇರವಾಗಿ ಭಟ್ಕಳ ಶಾಸಕ ಸುನಿಲ್ ನಾಯ್ಕ ಅವರ ಫಾರ್ಮ್ ಹೌಸ್ಗೆ ತೆರಳಿದ್ದರು. ಸಚಿವರಿಗೆ ಭರ್ಜರಿ ಸ್ವಾಗತ ನೀಡಿದ್ದ ಸುನಿಲ್ ನಾಯ್ಕ, ಸಚಿವರಿಗೆಂದೇ ಕರಾವಳಿಯ ಗಂಡು ಕಲೆಯಾದ ಯಕ್ಷಗಾನ ಆಯೋಜಿಸಿದ್ದರು.


ರಾತ್ರಿ ವೇಳೆ ಬಿರುಸಾದ ಮಳೆಯ ನಡುವೆಯೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಸುನಿಲ್ ನಾಯ್ಕರ ಜೊತೆ ಬಡಗುತಿಟ್ಟು ಶೈಲಿಯಲ್ಲಿ "ಭೀಷ್ಮ ವಿಜಯ" ಯಕ್ಷಗಾನ ನೋಡಿದ ಸಚಿವರು ಸಂತೋಷಪಟ್ಟರು. ಯಕ್ಷಗಾನ ನೋಡಿದ ಬಳಿಕ ಕಲಾವಿದರ ಪೋಷಾಕು ಧರಿಸಿ ಸಚಿವರು ಖುಷಿಪಟ್ಟರು. ಕಲಾವಿದರ ಅನುಭವ ಪಡೆದುಕೊಂಡಿದ್ದಲ್ಲದೆ, ಯಕ್ಷಗಾನ ಧಿರಿಸಿನಲ್ಲೇ ಸಚಿವ ಡಾ. ಸುಧಾಕರ್ ಅವರನ್ನು ಸನ್ಮಾನಿಸಲಾಯಿತು. ಯಕ್ಷಗಾನ ವೇದಿಕೆಯಲ್ಲಿ ಬಡಗುತಿಟ್ಟು ಶೈಲಿಯ ಪೋಷಾಕು ಧರಿಸಿ ಮಿಂಚಿದ ಆರೋಗ್ಯ ಸಚಿವ ಡಾ.ಸುಧಾಕರ್ ಅವರನ್ನು ಕಂಡು ಪಕ್ಷದ ಕಾರ್ಯಕರ್ತರು ಕೊಂಡಾಡಿದರಲ್ಲದೇ, ಹಲವರು ಸಚಿವರ ಜೊತೆ ಫೋಟೊ ಕ್ಲಿಕ್ಕಿಸಿಕೊಂಡರು.
Karwar Minister Sudhakar in Yakshagana costume.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm