ಬ್ರೇಕಿಂಗ್ ನ್ಯೂಸ್
12-10-22 04:44 pm HK News Desk ಕರ್ನಾಟಕ
ಕಾರವಾರ, ಅ.12 : ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸ ಬೆಳೆಸಿದ್ದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ರಾತ್ರಿ ವೇಳೆ ಭಟ್ಕಳದಲ್ಲಿ ತಂಗಿ ಯಕ್ಷಗಾನ ವೀಕ್ಷಿಸಿದ್ದಲ್ಲದೇ, ಯಕ್ಷಗಾನ ಪೋಷಾಕು ಧರಿಸಿ ಮಿಂಚಿದ್ದಾರೆ. ಚಿಕ್ಕಬಳ್ಳಾಪುರ ಮೂಲದ ಸುಧಾಕರ್ ಗೆ ಯಕ್ಷಗಾನ ಹೊಸತು. ಹೀಗಾಗಿ ಕರಾವಳಿಯ ಗಂಡುಕಲೆಯ ಬಗ್ಗೆ ಮೆಚ್ಚುಗೆ ತೋರಿದ್ದಲ್ಲದೆ ತಾನೇ ವೇಷ ಧರಿಸಿ ವರಸೆ ನೋಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ವೀಕ್ಷಣೆಗಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮತ್ತು ಅಧಿಕಾರಿಗಳು ಕಾರವಾರ, ಕುಮಟಾ ಹಾಗೂ ಭಟ್ಕಳಕ್ಕೆ ಭೇಟಿ ನೀಡಿದ್ದರು. ಭಟ್ಕಳದಲ್ಲಿ ಸಮುದಾಯ ಆಸ್ಪತ್ರೆಯ ವೀಕ್ಷಣೆ ಬಳಿಕ ನೇರವಾಗಿ ಭಟ್ಕಳ ಶಾಸಕ ಸುನಿಲ್ ನಾಯ್ಕ ಅವರ ಫಾರ್ಮ್ ಹೌಸ್ಗೆ ತೆರಳಿದ್ದರು. ಸಚಿವರಿಗೆ ಭರ್ಜರಿ ಸ್ವಾಗತ ನೀಡಿದ್ದ ಸುನಿಲ್ ನಾಯ್ಕ, ಸಚಿವರಿಗೆಂದೇ ಕರಾವಳಿಯ ಗಂಡು ಕಲೆಯಾದ ಯಕ್ಷಗಾನ ಆಯೋಜಿಸಿದ್ದರು.


ರಾತ್ರಿ ವೇಳೆ ಬಿರುಸಾದ ಮಳೆಯ ನಡುವೆಯೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಸುನಿಲ್ ನಾಯ್ಕರ ಜೊತೆ ಬಡಗುತಿಟ್ಟು ಶೈಲಿಯಲ್ಲಿ "ಭೀಷ್ಮ ವಿಜಯ" ಯಕ್ಷಗಾನ ನೋಡಿದ ಸಚಿವರು ಸಂತೋಷಪಟ್ಟರು. ಯಕ್ಷಗಾನ ನೋಡಿದ ಬಳಿಕ ಕಲಾವಿದರ ಪೋಷಾಕು ಧರಿಸಿ ಸಚಿವರು ಖುಷಿಪಟ್ಟರು. ಕಲಾವಿದರ ಅನುಭವ ಪಡೆದುಕೊಂಡಿದ್ದಲ್ಲದೆ, ಯಕ್ಷಗಾನ ಧಿರಿಸಿನಲ್ಲೇ ಸಚಿವ ಡಾ. ಸುಧಾಕರ್ ಅವರನ್ನು ಸನ್ಮಾನಿಸಲಾಯಿತು. ಯಕ್ಷಗಾನ ವೇದಿಕೆಯಲ್ಲಿ ಬಡಗುತಿಟ್ಟು ಶೈಲಿಯ ಪೋಷಾಕು ಧರಿಸಿ ಮಿಂಚಿದ ಆರೋಗ್ಯ ಸಚಿವ ಡಾ.ಸುಧಾಕರ್ ಅವರನ್ನು ಕಂಡು ಪಕ್ಷದ ಕಾರ್ಯಕರ್ತರು ಕೊಂಡಾಡಿದರಲ್ಲದೇ, ಹಲವರು ಸಚಿವರ ಜೊತೆ ಫೋಟೊ ಕ್ಲಿಕ್ಕಿಸಿಕೊಂಡರು.
Karwar Minister Sudhakar in Yakshagana costume.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm