ಬ್ರೇಕಿಂಗ್ ನ್ಯೂಸ್
10-10-20 07:18 pm Mysore Reporter ಕರ್ನಾಟಕ
ಮೈಸೂರು: ದಸರಾ-2020 ಉದ್ಘಾಟಕರ ಆಯ್ಕೆ ಅಂತಿಮವಾಗಿದ್ದು, ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಬಾರಿಯ ದಸರಾದಲ್ಲಿ ಕೊರೊನಾ ವಾರಿಯರ್ಸ್ಗೆ ಗೌರವ ಸಲ್ಲಿಸಲಾಗುತ್ತಿದ್ದು, ಈ ಹಿನ್ನೆಲೆ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಮಂಜುನಾಥ್ ಅವರನ್ನು ಉದ್ಘಾಟಕರನ್ನಾಗಿ ಆಯ್ಕೆ ಮಾಡಲಾಗಿದೆ. ಕೊರೊನಾ ವಾರಿಯರ್ ಹಿನ್ನೆಲೆ ಡಾ.ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ಡಾ.ಮಂಜುನಾಥ್ ಹೆಸರನ್ನು ಅಂತಿಮಗೊಳಿಸಿದ್ದಾರೆ ಎಂದು ಸೋಮಶೇಖರ್ ತಿಳಿಸಿದ್ದಾರೆ.

ಅಲ್ಲದೆ ಮರಗಮ್ಮ (ಪೌರಕಾರ್ಮಿಕರು), ಡಾ.ನವೀನ್ (ಆರೋಗ್ಯ ಇಲಾಖೆ ವೈದ್ಯಾಧಿಕಾರಿ), ರುಕ್ಮಿಣಿ (ಸ್ಟಾಫ್ ನರ್ಸ್), ನೂರ್ ಜಾನ್ (ಆಶಾ ಕಾರ್ಯಕರ್ತೆ), ಕುಮಾರ್ (ಮೈಸೂರು ನಗರ ಪೊಲೀಸ್ ಪೇದೆ) ಹಾಗೂ ಅಯೂಬ್ ಅಹಮದ್ (ಸಾಮಾಜಿಕ ಕಾರ್ಯಕರ್ತ) ಇವರುಗಳಿಗೆ ಸನ್ಮಾನ ಮಾಡಲಾಗುತ್ತಿದೆ.
ಟಕ್ನಿಕಲ್ ಕಮಿಟಿ ವರದಿಯಂತೆ ದಸರಾ ಆಚರಣೆ ಮಾಡಲಾಗುವುದು. ಟೆಕ್ನಿಕಲ್ ಕಮಿಟಿ ನೀಡಿರುವ ವರದಿಯಂತೆ ದಸರಾ ಸಿದ್ಧತೆ ಮಾಡಿಕೊಳ್ಳುತ್ತೇವೆ. ಉದ್ಘಾಟನಾ ಕಾರ್ಯಕ್ರಮಕ್ಕೆ 200, ಜಂಬೂಸವಾರಿಗೆ 300 ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 50 ಮಂದಿಗೆ ಅವಕಾಶ ನೀಡಲಾಗಿದೆ. ನಾವು ಸಹ ಇಷ್ಟೇ ಜನಕ್ಕೆ ಅವಕಾಶ ಮಾಡಿಕೊಡುತ್ತೇವೆ. ಟೆಕ್ನಿಕಲ್ ಕಮಿಟಿ ಸಲಹೆ ಬಿಟ್ಟು ಪರ್ಯಾಯ ವ್ಯವಸ್ಥೆ ಮಾಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮದವರು 350 ಮಂದಿ ಇದ್ದಾರೆ. ಇದರಲ್ಲಿ 50 ಜನರಿಗೆ ಮಾತ್ರ ಅವಕಾಶ ಮಾಡಿಕೊಡುತ್ತೇವೆ. ಜನಪ್ರತಿನಿಧಿಗಳು 50 ಜನರ ಇದ್ದಾರೆ. ಈ ಸಂಖ್ಯೆಯನ್ನು ಸಹ 25ಕ್ಕೆ ಇಳಿಸುತ್ತೇವೆ. ಪೊಲೀಸರು 100 ಮಂದಿ ಇದ್ದಾರೆ ಇದನ್ನು ಸಹ ಅರ್ಧಕ್ಕೆ ಇಳಿಸುತ್ತೇವೆ. ಬೆಟ್ಟದಲ್ಲಿ ಸಹ 200 ಮಂದಿಯೊಳಗೆ ಕಾರ್ಯಕ್ರಮ ಮಾಡುತ್ತೇವೆ. ನಗರದಲ್ಲಿ ಎಲ್ಲಿಯೂ ಪಾರ್ಕಿಂಗ್ ವ್ಯವಸ್ಥೆ ಇರುವುದಿಲ್ಲ. ಜನ ಗುಂಪು ಸೇರಬಾರದು. ಎಲ್ಲಿಯೂ ಬಹಿರಂಗವಾಗಿ ಕಾರ್ಯಕ್ರಮ ನಡೆಸಬಾರದು ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಈ ಬಾರಿಯ ದಸರಾಗೆ ಒಂದು ರೂಪಾಯಿಯನ್ನು ಖರ್ಚು ಮಾಡಿಲ್ಲ. ಇನ್ನೂ ದಸರಾ ಬಜೆಟ್ ಬಗ್ಗೆ ಪ್ಲಾನಿಂಗ್ ಆಗಿಲ್ಲ. ಟೆಕ್ನಿಕಲ್ ಕಮಿಟಿ ವರದಿ ಕೊಟ್ಟಿದೆ. ಅದರ ಸೂಚನೆಯಂತೆ ಕಾರ್ಯಕ್ರಮ ರೂಪಿಸುತ್ತೇವೆ. ಕಾರ್ಯಕ್ರಮಗಳಿಗೆ ಎಷ್ಟು ಹಣ ಬೇಕು ಎಂಬುದನ್ನು ಈಗ ತೀರ್ಮಾನ ಮಾಡುತ್ತೇವೆ. ಕಳೆದ ಬಾರಿ ದಸರಾದ ಹಣ ಬಾಕಿ ಇದೆ. ಸರ್ಕಾರಕ್ಕೆ ಹಣಕಾಸು ಇಲಾಖೆಗೆ ಮನವಿ ಮಾಡಿದ್ದೇವೆ. ಶಿಘ್ರದಲ್ಲೇ ಆ ಹಣವನ್ನು ತಂದು ಬಾಕಿ ಇರುವ ಬಿಲ್ ಪಾವತಿಸುತ್ತೇವೆ ಎಂದು ತಿಳಿಸಿದ್ದಾರೆ.
The State Government has selected Dr C.N. Manjunath the Director, Sri Jayadeva Institute of Cardiovascular Sciences and Research, Bengaluru, to inaugurate Dasara-2020 atop Chamundi Hill in Mysuru on Oct. 17.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm