ಬ್ರೇಕಿಂಗ್ ನ್ಯೂಸ್
16-10-22 11:24 pm HK News Desk ಕರ್ನಾಟಕ
ಬೆಂಗಳೂರು, ಅಕ್ಟೋಬರ್ 16: ಕರ್ನಾಟಕ ಹೈಕೋರ್ಟ್ ಆದೇಶದ ಬೆನ್ನಲ್ಲೇ ಊಬರ್ ಕಂಪನಿ ಆಟೋ ಪ್ರಯಾಣದ ದರ ಇಳಿಸುವ ಮೂಲಕ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ.
ಮೊಬೈಲ್ ಅಪ್ಲಿಕೇಷನ್ ಆಧಾರಿತ ಓಲಾ, ಊಬರ್ ಕಂಪನಿಗಳು ಆಟೋಗಳ ಪ್ರಯಾಣಿಕರಿಂದ ಹೆಚ್ಚುವರಿ ಹಣ ಪಡೆಯುತ್ತಿವೆ ಎಂಬ ದೂರುಗಳು ಕೇಳಿ ಬಂದಿದ್ದವು. ಈ ಸಂಬಂಧ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಹೈಕೋರ್ಟ್ ಆದೇಶದ ಬೆನ್ನಲ್ಲೇ ಶನಿವಾರದಿಂದ ಅನ್ವಯವಾಗುವಂತೆ ಊಬರ್ ಕಂಪನಿ ಮಾತ್ರ ಆಟೋರಿಕ್ಷಾಗಳ ಪ್ರಯಾಣ ದರ ಇಳಿಕೆ ಮಾಡಿದೆ.
ಭಾರೀ ಮಳೆಯಿಂದ ದೂಧ್ ಸಾಗರ್ ಜಲಪಾತದ ಸೇತುವೆ ಕುಸಿತ: ಪ್ರವಾಹದಲ್ಲಿ ಸಿಲುಕಿದ 40 ಪ್ರವಾಸಿಗರು
ಊಬರ್ ಕಂಪನಿಯು ಎರಡು ಕಿಲೋ ಮೀಟರ್ ಪ್ರಯಾಣಕ್ಕೆ 40ರಿಂದ 45 ರೂಪಾಯಿ ನಿಗದಿಪಡಿಸಿದೆ. ಇದರಿಂದ ಆಟೋ ಪ್ರಯಾಣದ ದರ ಮೊದಲಿಗಿಂತ ಶೇ.25ರಿಂದ 30ರಷ್ಟು ದರದಲ್ಲಿ ಇಳಿಕೆ ಆಗಿದೆ. ಊಬರ್ ಹೊರತು ಓಲಾ ಕಂಪನಿ ಎರಡು ಕಿಲೋ ಮೀಟರ್ಗೆ 75ರಿಂದ 80ರೂ.ವರೆಗೆ ಹೆಚ್ಚುವರಿ ಹಣ ಪಡೆಯುವುದನ್ನು ಮುಂದುವರಿಸಿವೆ ಎಂದು ತಿಳಿದು ಬಂದಿದೆ.

ಓಲಾದಿಂದ ಅಧಿಕ ಹಣ ವಸೂಲಿ; ಆಟೋರಿಕ್ಷಾ ಅನುಮತಿ ಹಾಗೂ ಹೆಚ್ಚು ದರ ವಿಧಿಸುವ ಪ್ರಕರಣ ವಿಚಾರವಾಗಿ ರಾಜ್ಯ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಆದೇಶದನ್ವಯ ರಾಜ್ಯ ಸರ್ಕಾರ ಮುಂದಿನ 15ದಿನದಲ್ಲಿ ಆಟೋ ರಿಕ್ಷಾಗಳ ಪ್ರಯಾಣದ ದರವನ್ನು ಹೊಸದಾಗಿ ನಿಗದಿಪಡಿಸಬೇಕು. ಈ ಸಂಬಂಧ ಕಂಪನಿಗಳ ಜತೆ ಚರ್ಚಿಸಿ ಎಂದಿರುವ ಹೈಕೋರ್ಟ್ ಸರ್ಕಾರದ ದರ ನಿಗದಿವರೆಗೆ ಓಲಾ, ಊಬರ್ ಕಂಪನಿಗಳು ನಿಗದಿತ ದರ ಮತ್ತು ಹೆಚ್ಚುವರಿ ಶೇ. 10ರಷ್ಟು ಹಣ, ಸೇವಾ ತೆರಿಗೆ ಮಾತ್ರ ಪಡೆಯಬೇಕು ಎಂದು ತಿಳಿಸಿದೆ. ಇದರಿಂದ ಕೂಡಲೇ ಎಚ್ಚೆತ್ತಿರುವ ಊಬರ್ ಪ್ರಯಾಣದ ದರ ಇಳಿಕೆ ಮಾಡಿದೆ.

ಮೆಜೆಸ್ಟಿಕ್ ಮತ್ತು ಶಿವಾನಂದ ವೃತ್ತದಿಂದ ನಡುವೆ ಎರಡು ಕಿಲೋ ಮೀಟರ್ಗಿಂತಲೂ ಕಡಿಮೆ ದೂರ ಇದೆ. ಇಷ್ಟು ದೂರದ ಪ್ರಯಾಣಕ್ಕೆ ಶನಿವಾರ ಉಬರ್ ಆಪ್ನಲ್ಲಿ 36ರೂ. ದರ ತೋರಿಸಿದರೆ, ಓಲಾ ಆಪ್ ನಲ್ಲಿ 64ರೂ. ದರ ನಿಗದಿ ಇರುವುದನ್ನು ಕಾಣಬಹುದು.
ಹೈಕೋರ್ಟ್ಗೆ ಪ್ರತ್ಯೇಕ 2 ಪಿಐಎಲ್ ಸಲ್ಲಿಕೆ: ವಿಚಾರಣೆ
ಆ್ಯಪ್ ಆಧಾರಿತ ಓಲಾ ಹಾಗೂ ಉಬರ್ ಆಟೋರಿಕ್ಷಾಗಳ ಸೇವೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರ ಇತ್ತೀಚೆಗೆ ಹೊರಡಿಸಿದ ಆದೇಶವನ್ನು ರದ್ದು ಮಾಡುವಂತೆ ಕೋರಿ ಎಎನ್ಐ ಟೆಕ್ನಾಲಜೀಸ್ ಕಂಪನಿಯೊಂದು ಮತ್ತು ಉಬರ್ ಇಂಡಿಯಾ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಈ ಎರಡು ಕಂಪನಿಗಳು ಹೈಕೋರ್ಟ್ಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಗಳನ್ನು ಈ ಹಿಂದೆಯೆ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ಪೀಠ ನ್ಯಾಯ ಸಮ್ಮತವಾಗಿ ದರ ನಿಗದಿಪಡಿಸಬೇಕು. ಅದಕ್ಕಾಗಿ ಓಲಾ ಮತ್ತು ಉಬರ್ ಕಂಪನಿಗಳ ಜತೆ ಚರ್ಚೆ ನಡೆಸಿ ಎಂದು ಸೂಚಿಸಿತ್ತು.
ನಂತರ ಗುರುವಾರ ವಿಚಾರ ನಡೆಸಿದ ಹೈಕೋರ್ಟ್ ಓಲಾ ಮತ್ತು ಉಬರ್ ಆಟೋರಿಕ್ಷಾಗಳ ಸಂಬಂಧಿಸಿದಂತೆ ಎದ್ದಿರುವ ಸಮಸ್ಯೆಗಳನ್ನು ಜನರಿಗೆ ತೊಂದರೆ ಆಗದಂತೆ ಪರಿಹರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಿಳಿಸಿ ಶುಕ್ರವಾರಕ್ಕೆ ವಿಚಾರಣೆ ಮುಂದೂಡಿತ್ತು. ಅದರಂತೆ ಶುಕ್ರವಾರ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠವು ಮುಂದಿನ 15ದಿನದಲ್ಲಿ ರಾಜ್ಯ ಸರ್ಕಾರ ಕಂಪನಿಗಳ ಜತೆ ಚರ್ಚಿಸಿ ಹೊಸ ದರ ನಿಗದಿ ಮಾಡಿ ಎಂದು ಹೇಳಿತು. ಜತೆಗೆ ಕಂಪನಿಗಳಿಗೆ ಕೆಲವು ಸಲಹೆಗಳನ್ನು ನೀಡಿತು. ಇದರ ಬೆನ್ನಲ್ಲೆ ಉಬರ್ ಕಂಪನಿ ಮಾತ್ರ ಆಟೋ ರಿಕ್ಷಾಗಳ ಪ್ರಯಾಣದ ದರವನ್ನು ಶನಿವಾರದಿಂದಲೇ ಜಾರಿಗೆ ಬರುವಂತೆ ಇಳಿಕೆ ಮಾಡಿದೆ.
After karnataka high court orderu ber cuts auto travel price.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm