ಬ್ರೇಕಿಂಗ್ ನ್ಯೂಸ್
17-10-22 01:23 pm Bangalore Correspondent ಕರ್ನಾಟಕ
ಬೆಂಗಳೂರು, ಅ.17 : ಬೆಂಗಳೂರು ಡಿಸಿಪಿ ನಿಶಾ ಜೇಮ್ಸ್ ತಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆಂದು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ಸಿಬಂದಿ ಪೊಲೀಸ್ ಇಲಾಖೆಯ ಆಡಳಿತ ವಿಭಾಗದ ಎಡಿಜಿಪಿ ಡಾ.ಎಂ.ಎ.ಸಲೀಂಗೆ ದೂರು ಸಲ್ಲಿಸಿದ್ದಾರೆ.
ಕಚೇರಿಯ 25ಕ್ಕೂ ಹೆಚ್ಚು ಎಫ್ ಡಿಎ, ಎಸ್ಡಿಎಗಳಿಂದ ಎಡಿಜಿಪಿಗೆ ದೂರು ನೀಡಲಾಗಿದೆ. ಸೆಪ್ಟೆಂಬರ್ 3ರಂದು ಈ ಬಗ್ಗೆ ಎಡಿಜಿಪಿಗೆ ನೀಡಿದ್ದ ದೂರಿನ ಪ್ರತಿ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾನ್ಯ ವಿಷಯಗಳನ್ನ ದೊಡ್ಡದು ಮಾಡಿ ಶಿಸ್ತುಕ್ರಮಕ್ಕೆ ಮುಂದಾಗುತ್ತಾರೆ. ಉದ್ದೇಶಪೂರ್ವಕ ಸಿಬ್ಬಂದಿಗಳನ್ನ ತಡರಾತ್ರಿ ವರೆಗೂ ಕಚೇರಿಯಲ್ಲಿ ಉಳಿಸಿಕೊಳ್ಳುತ್ತಾರೆ. ನಿಶಾ ಜೇಮ್ಸ್ ಸಂಜೆ 6ರ ನಂತರ ಕೆಲಸ ಶುರುಮಾಡಿ ರಾತ್ರಿ 3ಕ್ಕೆ ಮುಗಿಸ್ತಾರೆ. ಇದರಿಂದ ಪತ್ನಿ ಮಕ್ಕಳು ಪೋಷಕರ ಜೊತೆ ಸಮಯ ಕಳೆಯಲು ಆಗ್ತಿಲ್ಲ. ನಿಶಾ ಜೇಮ್ಸ್ ಕಿರುಕುಳದಿಂದಾಗಿ ನಮಗೆ ನಿದ್ದೆ ಮಾಡಲು ಆಗುತ್ತಿಲ್ಲ. ನಿದ್ರಾಹೀನತೆಯಿಂದ ಕಾಯಿಲೆ ಎದುರಾಗುತ್ತಿವೆ ಎಂದು ಸಿಬ್ಬಂದಿ ನೀಡಿದ್ದ ದೂರಿನ ಪ್ರತಿ ಜಾಲತಾಣದಲ್ಲಿ ವೈರಲ್ ಆಗಿದೆ.
ಸಿಬ್ಬಂದಿಯನ್ನು ತುಚ್ಛವಾಗಿ ಕಾಣ್ತಾರೆ ನಿಶಾ ಜೇಮ್ಸ್ !
ನಿಶಾ ಜೇಮ್ಸ್ ಅವರ ನಡೆಯಿಂದ ಕಿರುಕುಳಕ್ಕೊಳಗಾದ 25 ಸಿಬ್ಬಂದಿಗೆ ವೇತನ ಬಡ್ತಿಯನ್ನ ತಡೆ ಹಿಡಿಯಲಾಗಿದೆ. ನಿಶಾ ಅವರು ಕಡತಗಳನ್ನ ಸಮಯಕ್ಕೆ ಸರಿಯಾಗಿ ನೋಡದೆ, ತಿಂಗಳ ಕಾಲ ಸಹಿ ಮಾಡದೇ ಪೆಂಡಿಂಗ್ ಇಡ್ತಾರೆ. ಇದರಿಂದ ಕಡತ ವಿಲೇವಾರಿ ತಡವಾಗ್ತಿದೆ. ನಿಶಾ ಜೇಮ್ಸ್ ಕಚೇರಿಯಲ್ಲಿ ಹಿಂದೂ ದೇವರ ಫೋಟೋ ಇಡಲಿಕ್ಕೆ ಅವಕಾಶ ನೀಡುವುದಿಲ್ಲ. ಕನ್ನಡದಲ್ಲಿ ವ್ಯವಹರಿಸುವುದಿಲ್ಲ, ಕನ್ನಡ ಮಾತಾಡುವ ಸಿಬ್ಬಂದಿಯನ್ನ ತುಚ್ಛವಾಗಿ ಕಾಣ್ತಾರೆ. ಕಚೇರಿಯಲ್ಲಿ ತೊಂದರೆ ಕಷ್ಟಗಳನ್ನ ಹೇಳಲಿಕ್ಕೆ ಸಿಬ್ಬಂದಿ ಬಂದ್ರೆ ಭಿಕ್ಷುಕರಂತೆ ಕಾಣ್ತಾರೆ. ಮಹಿಳಾ ಟೈಪಿಸ್ಟ್ ತಾನು ಗರ್ಭಿಣಿ ಎಂದು ತಿಳಿಸಿದ್ರು ಕಚೇರಿಯಲ್ಲಿ 9 ಗಂಟೆಗೂ ಹೆಚ್ಚು ಕಾಲ ಕಾಯುವಂತೆ ಮಾಡಿದ್ದರು. ಇದರಿಂದ ಗರ್ಭಿಣಿ ಟೈಪಿಸ್ಟ್ ಸಿಬ್ಬಂದಿಗೆ ಮಾನಸಿಕ ಹಿಂಸೆಯಾಗಿ ಗರ್ಭಪಾತವಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ಸಿಬ್ಬಂದಿ ದೂರಿನಲ್ಲಿ ತಿಳಿಸಿದ್ದಾರೆ.
Bangalore DCP Nisha James is alleged of giving Mental torture to police staffs, a complaint has been filed to the Bangalore Commissioner of Police.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm