ಬ್ರೇಕಿಂಗ್ ನ್ಯೂಸ್
18-10-22 07:05 pm HK News Desk ಕರ್ನಾಟಕ
ಬೀದರ್, ಅ.18 : ಸರ್ಕಾರಿ ನೌಕರಿಗೆ ಕರ್ನಾಟಕದಲ್ಲಿ ಕಾಸು ಕೊಡಲೇಬೇಕು ಎಂಬ ರಾಹುಲ್ ಗಾಂಧಿ ಟೀಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಆಗಿರುವ ಹಗರಣ ಮತ್ತು ಅವ್ಯವಹಾರ ಸಂಬಂಧ ಎಲ್ಲ ಮಾಹಿತಿ, ದಾಖಲೆಗಳನ್ನು ರಾಹುಲ್ ಗಾಂಧಿಯವರಿಗೆ ಮುಟ್ಟಿಸುತ್ತೇನೆ. ಅವರು ಏನು ಶಿಕ್ಷೆ ಕೊಡುತ್ತಾರೆ ಕಾದು ನೋಡೋಣ ಎಂದು ಸವಾಲು ಹಾಕಿದ್ದಾರೆ.
ಔರಾದ್ ಪಟ್ಟಣದಲ್ಲಿ ಮಂಗಳವಾರ 'ಜನಸಂಕಲ್ಪ ಯಾತ್ರೆ'ಗೆ ಚಾಲನೆ ನೀಡಿ ಮಾತನಾಡಿದ ಅವರು, 2016ರ ಶಿಕ್ಷಕರ ನೇಮಕಾತಿ ಹಗರಣ, ಪ್ರಾಸಿಕ್ಯೂಟರ್ ಮತ್ತು ಪೊಲೀಸ್ ನೇಮಕಾತಿಯಲ್ಲಿನ ಹಗರಣ ಸೇರಿ ಎಲ್ಲ ದಾಖಲೆಗಳನ್ನು ರಾಹುಲ್ ಗಾಂಧಿಗೆ ತಲುಪಿಸಲಿದ್ದೇನೆ. ಅರ್ಜಿ ಹಾಕದೇ ಶಿಕ್ಷಕರ ನೇಮಕಾತಿ ನಡೆದಿದ್ದು, ಇದರಲ್ಲಿ ಎಷ್ಟು ಪರ್ಸಂಟೇಜ್ ಹೊಡೆದಿರಬಹುದು? ಇದು ಕಾಂಗ್ರೆಸ್ ಸರ್ಕಾರದ ಆಡಳಿತ. ಆದರೆ, ನಾವು ಪಿಎಸ್ಐ ನೇಮಕಾತಿ ಹಗರಣದಲ್ಲಿ ಉನ್ನತ ಅಧಿಕಾರಿಗಳು ಸೇರಿ ತಪ್ಪು ಮಾಡಿದ್ದವರನ್ನು ಯಾರಿಗೂ ಬಿಡಲಿಲ್ಲ ಎಂದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಹೆಚ್ಚಳ ಕಾಂಗ್ರೆಸ್ ಪಕ್ಷದ ಕೊಡುಗೆ ಎಂದು ಹೇಳಲು ರಾಹುಲ್ ಗಾಂಧಿಗೆ ಆತ್ಮಸಾಕ್ಷಿ ಬೇಕಲ್ಲವೇ ಎಂದು ಪ್ರಶ್ನಿಸಿದ ಸಿಎಂ ಬೊಮ್ಮಾಯಿ, ಮೀಸಲು ಹೆಚ್ಚಿಸಿ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದ್ದಾಗ ರಾಜ್ಯದಲ್ಲಿ ಯಾರ ಸರ್ಕಾರ ಇತ್ತು, ನಿರ್ಣಯ ತೆಗೆದುಕೊಂಡವರು ಯಾರು ಎನ್ನುವುದನ್ನೂ ರಾಹುಲ್ ಅರಿಯಬೇಕು. ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ದೀನ ದಲಿತರಿಗೆ ಶೂನ್ಯ ಕೊಡುಗೆ ನೀಡಿದೆ ಎಂದು ಹೇಳಿದರು.
ಸಮಾವೇಶದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯದ ಸಚಿವರಾದ ಗೋವಿಂದ ಕಾರಜೋಳ, ಪ್ರಭು ಚವ್ಹಾಣ, ಬಿ. ಶ್ರೀರಾಮಲು, ಭೈರತಿ ಬಸವರಾಜ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಸೇರಿದಂತೆ ಶಾಸಕರು, ಪ್ರಮುಖರು ಪಾಲ್ಗೊಂಡಿದ್ದರು.
CM Bommai at Bidar meeting, slams rahul and Siddaramaiah.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm