ಬ್ರೇಕಿಂಗ್ ನ್ಯೂಸ್
18-10-22 07:05 pm HK News Desk ಕರ್ನಾಟಕ
ಬೀದರ್, ಅ.18 : ಸರ್ಕಾರಿ ನೌಕರಿಗೆ ಕರ್ನಾಟಕದಲ್ಲಿ ಕಾಸು ಕೊಡಲೇಬೇಕು ಎಂಬ ರಾಹುಲ್ ಗಾಂಧಿ ಟೀಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಆಗಿರುವ ಹಗರಣ ಮತ್ತು ಅವ್ಯವಹಾರ ಸಂಬಂಧ ಎಲ್ಲ ಮಾಹಿತಿ, ದಾಖಲೆಗಳನ್ನು ರಾಹುಲ್ ಗಾಂಧಿಯವರಿಗೆ ಮುಟ್ಟಿಸುತ್ತೇನೆ. ಅವರು ಏನು ಶಿಕ್ಷೆ ಕೊಡುತ್ತಾರೆ ಕಾದು ನೋಡೋಣ ಎಂದು ಸವಾಲು ಹಾಕಿದ್ದಾರೆ.
ಔರಾದ್ ಪಟ್ಟಣದಲ್ಲಿ ಮಂಗಳವಾರ 'ಜನಸಂಕಲ್ಪ ಯಾತ್ರೆ'ಗೆ ಚಾಲನೆ ನೀಡಿ ಮಾತನಾಡಿದ ಅವರು, 2016ರ ಶಿಕ್ಷಕರ ನೇಮಕಾತಿ ಹಗರಣ, ಪ್ರಾಸಿಕ್ಯೂಟರ್ ಮತ್ತು ಪೊಲೀಸ್ ನೇಮಕಾತಿಯಲ್ಲಿನ ಹಗರಣ ಸೇರಿ ಎಲ್ಲ ದಾಖಲೆಗಳನ್ನು ರಾಹುಲ್ ಗಾಂಧಿಗೆ ತಲುಪಿಸಲಿದ್ದೇನೆ. ಅರ್ಜಿ ಹಾಕದೇ ಶಿಕ್ಷಕರ ನೇಮಕಾತಿ ನಡೆದಿದ್ದು, ಇದರಲ್ಲಿ ಎಷ್ಟು ಪರ್ಸಂಟೇಜ್ ಹೊಡೆದಿರಬಹುದು? ಇದು ಕಾಂಗ್ರೆಸ್ ಸರ್ಕಾರದ ಆಡಳಿತ. ಆದರೆ, ನಾವು ಪಿಎಸ್ಐ ನೇಮಕಾತಿ ಹಗರಣದಲ್ಲಿ ಉನ್ನತ ಅಧಿಕಾರಿಗಳು ಸೇರಿ ತಪ್ಪು ಮಾಡಿದ್ದವರನ್ನು ಯಾರಿಗೂ ಬಿಡಲಿಲ್ಲ ಎಂದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಹೆಚ್ಚಳ ಕಾಂಗ್ರೆಸ್ ಪಕ್ಷದ ಕೊಡುಗೆ ಎಂದು ಹೇಳಲು ರಾಹುಲ್ ಗಾಂಧಿಗೆ ಆತ್ಮಸಾಕ್ಷಿ ಬೇಕಲ್ಲವೇ ಎಂದು ಪ್ರಶ್ನಿಸಿದ ಸಿಎಂ ಬೊಮ್ಮಾಯಿ, ಮೀಸಲು ಹೆಚ್ಚಿಸಿ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದ್ದಾಗ ರಾಜ್ಯದಲ್ಲಿ ಯಾರ ಸರ್ಕಾರ ಇತ್ತು, ನಿರ್ಣಯ ತೆಗೆದುಕೊಂಡವರು ಯಾರು ಎನ್ನುವುದನ್ನೂ ರಾಹುಲ್ ಅರಿಯಬೇಕು. ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ದೀನ ದಲಿತರಿಗೆ ಶೂನ್ಯ ಕೊಡುಗೆ ನೀಡಿದೆ ಎಂದು ಹೇಳಿದರು.
ಸಮಾವೇಶದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯದ ಸಚಿವರಾದ ಗೋವಿಂದ ಕಾರಜೋಳ, ಪ್ರಭು ಚವ್ಹಾಣ, ಬಿ. ಶ್ರೀರಾಮಲು, ಭೈರತಿ ಬಸವರಾಜ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಸೇರಿದಂತೆ ಶಾಸಕರು, ಪ್ರಮುಖರು ಪಾಲ್ಗೊಂಡಿದ್ದರು.
CM Bommai at Bidar meeting, slams rahul and Siddaramaiah.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm