ಬ್ರೇಕಿಂಗ್ ನ್ಯೂಸ್
19-10-22 11:34 am HK News Desk ಕರ್ನಾಟಕ
ಚಿಕ್ಕಮಗಳೂರು, ಅ.19: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ವ್ಯಾಪಕವಾಗಿ ಹರಡುತ್ತಿರುವುದು ಪತ್ತೆಯಾಗಿದೆ. ತಾಲೂಕಿನ ಹಲವು ಗ್ರಾಮಗಳಲ್ಲಿ 900ಕ್ಕೂ ಹೆಚ್ಚು ಪ್ರಕರಣ ಪತ್ತೆಯಾಗಿರುವ ಬಗ್ಗೆ ಅಧಿಕಾರಿಗಳು ದೃಢಪಡಿಸಿದ್ದು ಆತಂಕ ಮೂಡಿಸಿದೆ.
ಮೂಡಿಗೆರೆ, ಕಡೂರು, ಬೇಲೂರು ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ರೈತರು ಹೈನುಗಾರಿಕೆಯನ್ನು ಅವಲಂಬಿಸಿದ್ದಾರೆ. ರೋಗದಿಂದಾಗಿ ಹಾಲು ಉತ್ಪಾದನೆಯ ಮೇಲೆ ಪರಿಣಾಮ ಎದುರಾಗಲಿದೆ. ಕಳೆದ ಜುಲೈ ತಿಂಗಳಲ್ಲಿಯೇ ದೇವನೂರು, ಬಿಸಿಲೇಹಳ್ಳಿ ಭಾಗದ ಕೆಲವೆಡೆ ರೋಗ ಕಾಣಿಸಿಕೊಂಡಿತ್ತು. ನಿಧಾನವಾಗಿ ವ್ಯಾಪಿಸಿದ ರೋಗ, ತಾಲ್ಲೂಕಿನಲ್ಲಿ 900ಕ್ಕೂ ಹೆಚ್ಚು ರಾಸುಗಳಿಗೆ ಹಬ್ಬಿದೆ. ಆದರೆ ಈವರೆಗೂ ತಾಲೂಕು ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮುಂಜಾಗ್ರತೆ ಕ್ರಮ ಕೈಗೊಂಡಿಲ್ಲ.
ಪ್ರಕರಣ ಹೆಚ್ಚುತ್ತಿದ್ದರೂ ರಾಜ್ಯ ಸರಕಾರದಿಂದ ಸೂಕ್ತ ಲಸಿಕೆ ಸರಬರಾಜಾಗಿಲ್ಲ. ಹೀಗಾಗಿ ಮೊದಲ ಹಂತದಲ್ಲಿ ತಾಲ್ಲೂಕು ಆಡಳಿತದಿಂದಲೇ 10,300 ಡೋಸ್ ಲಸಿಕೆಯನ್ನು ಖರೀದಿಸಲಾಗಿದೆ. ರೋಗ ಕಾಣಿಸಿಕೊಂಡ ಸ್ಥಳದಿಂದ ಸುತ್ತ ಮುತ್ತ ನಾಲ್ಕು ಕಿ.ಮೀ. ವ್ಯಾಪ್ತಿಯಲ್ಲಿ ಆರೋಗ್ಯವಂತ ಹಸುಗಳಿಗೂ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ರೋಗ ಪೀಡಿತ ದನಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಡೂರು ತಾಲೂಕು ವ್ಯಾಪ್ತಿಯ 32 ಹಳ್ಳಿಗಳಲ್ಲಿ 982 ಪ್ರಕರಣ ಪತ್ತೆಯಾಗಿದೆ. ಸದ್ಯ ರೋಗ ಪೀಡಿತ ರಾಸುಗಳು ಚಿಕಿತ್ಸೆಗೆ ಸ್ಪಂದಿಸುತ್ತಿವೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.
ರೋಗದಿಂದಾಗಿ ಎರಡು ಹಸುಗಳು ಮರಣ ಹೊಂದಿವೆ. ಎರಡನೇ ಹಂತದಲ್ಲಿ 20 ಸಾವಿರ ಡೋಸ್ ಲಸಿಕೆ ತರಿಸಲು ಸಿದ್ಧತೆ ನಡೆಸಲಾಗಿದೆ. ರೋಗ ಪೀಡಿತ ಹಸುಗಳ ಹಾಲು ಕುಡಿಯುವುದರಿಂದ ರೋಗ ಮಾನವನಿಗೆ ಹರಡುವುದಿಲ್ಲ. ರೋಗದ ಕಾರಣಕ್ಕೆ ಜನರು ಆತಂಕ ಪಡಬೇಕಾಗಿಲ್ಲ ಎಂದು ಪಶು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೆಲವೆಡೆ ರೋಗ ಕಾಣಿಸಿಕೊಂಡಿರುವ ಮಾಹಿತಿಯಿದ್ದು ಜಿಲ್ಲಾಡಳಿತ 20 ಸಾವಿರ ಡೋಸ್ ಲಸಿಕೆ ತರಿಸಿಕೊಂಡಿದೆ. ಈಗಾಗಲೇ ಲಸಿಕೆ ನೀಡಲಾಗುತ್ತಿದೆ ಎನ್ನುವ ಮಾಹಿತಿಯನ್ನು ಮಂಗಳೂರಿನ ಪಶು ಇಲಾಖೆ ಅಧಿಕಾರಿಗಳು ನೀಡಿದ್ದಾರೆ.
Lumpy skin disease in cattle found in Chikkamagaluru, more than 900 cases found.
30-06-25 02:55 pm
HK News Desk
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
ಕರ್ಣಾಟಕ ಬ್ಯಾಂಕ್ ಸಿಇಓ, ಎಂಡಿ ಶ್ರೀಕೃಷ್ಣನ್ ಹರಿಹರ...
29-06-25 10:48 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 03:20 pm
Mangalore Correspondent
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm