ಬ್ರೇಕಿಂಗ್ ನ್ಯೂಸ್
27-10-22 10:27 pm HK News Desk ಕರ್ನಾಟಕ
ಮಂಡ್ಯ, ಅ.27 : ಮಳವಳ್ಳಿಯ ಹತ್ತು ವರ್ಷದ ಬಾಲಕಿಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಕಾಂತರಾಜು ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ 638 ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಪ್ರಕರಣದ ವಿಚಾರಣೆಯನ್ನು ಮಳವಳ್ಳಿ ಉಪ ವಿಭಾಗದ ಡಿವೈಎಸ್ಪಿ ನವೀನ್ಕುಮಾರ್ ನೇತೃತ್ವದ ತಂಡಕ್ಕೆ ಒಪ್ಪಿಸಲಾಗಿತ್ತು. ತುರ್ತಾಗಿ ವಿಚಾರಣೆ ನಡೆಸಿದ ಪೊಲೀಸರು ಕೇವಲ 15 ದಿನಗಳಲ್ಲೇ ಆರೋಪಿ ಕಾಂತರಾಜು ವಿರುದ್ಧ ನ್ಯಾಯಾಲಯಕ್ಕೆ 638 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದಾರೆ. ಕಳೆದ ಅಕ್ಟೋಬರ್ 11ರಂದು ಬೆಳಗ್ಗೆ 11 ಗಂಟೆ ಸಮಯದಲ್ಲಿ ಆರೋಪಿ ಕಾಂತರಾಜು ತಾನು ನಡೆಸುತ್ತಿದ್ದ ಟ್ಯೂಷನ್ ಸೆಂಟರಿಗೆ ಬಾಲಕಿಯನ್ನು ಬರುವಂತೆ ಹೇಳಿದ್ದ. ಆನಂತರ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಆಕೆಯ ಕತ್ತು ಹಿಸುಕಿ ಹತ್ಯೆಗೈದಿದ್ದ. ಬಳಿಕ ನಿರ್ಮಾಣ ಹಂತದ ಕಟ್ಟಡದಲ್ಲಿದ್ದ ನೀರಿನ ಸಂಪಿಗೆ ಆಕೆಯ ಶವವನ್ನು ಎಸೆದು ಪರಾರಿಯಾಗಿದ್ದ.
ಈ ನಡುವೆ, ಬಾಲಕಿ ಶವ ಪತ್ತೆಯಾಗಿ ಪೊಲೀಸರು ತನಿಖೆ ಆರಂಭಿಸಿದ್ದರು. ಕಿರಾತಕ ಆರೋಪಿ ಪೊಲೀಸರ ವಿಚಾರಣೆ ವೇಳೆಯೂ ದಿಕ್ಕು ತಪ್ಪಿಸಲು ಯತ್ನಿಸಿದ್ದ. ಆದರೆ ಸೂಕ್ತ ದಾಖಲೆ ಮುಂದಿಟ್ಟು ತನಿಖೆ ನಡೆಸಿದಾಗ, ಆರೋಪಿ ಶಿಕ್ಷಕ ಸಿಕ್ಕಿಬಿದ್ದಿದ್ದ. ಡಿವೈಎಸ್ಪಿ ನವೀನ್ಕುಮಾರ್ ನೇತೃತ್ವದ ವಿಶೇಷ ಪೊಲೀಸರ ತಂಡ ಸಮಗ್ರ ತನಿಖೆ ನಡೆಸಿದ್ದು 15 ದಿನಗಳಲ್ಲೇ ನ್ಯಾಯಾಲಯಕ್ಕೆ ಆರೋಪಿ ವಿರುದ್ಧ 638 ಪುಟಗಳ ದೋಷಾರೋಪಣಾ ಪಟ್ಟಿ ಸಲ್ಲಿಸಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷ ಎನ್. ಯತೀಶ್ ತಿಳಿಸಿದ್ದಾರೆ. ಪೊಲೀಸರ ಕಾರ್ಯವನ್ನು ಶ್ಲಾಘಿಸಿರುವ ಅಪರ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್, ಮಂಡ್ಯ ಪೊಲೀಸ್ ಅಧಿಕಾರಿಗಳ ತಂಡಕ್ಕೆ ಒಂದು ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.
Mandya student rape case, 638 pages of charge sheet filed by police in 15 days.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm