ಬ್ರೇಕಿಂಗ್ ನ್ಯೂಸ್
29-10-22 04:18 pm Bangalore Correspondent ಕರ್ನಾಟಕ
ಬೆಂಗಳೂರು, ಅ.29: ದೀಪಾವಳಿ ಹಬ್ಬದ ನೆಪದಲ್ಲಿ ಪ್ರಮುಖ ಪತ್ರಿಕೆಗಳು ಮತ್ತು ಸುದ್ದಿ ವಾಹಿನಿಗಳ ಕೆಲವು ಆಯ್ದ ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯಿಂದ ಸ್ವೀಟ್ ಬಾಕ್ಸ್ ಜೊತೆಗೆ ಲಕ್ಷ ಲಕ್ಷ ಹಣ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿರುವ ನಡುವೆಯೇ ಈ ಬಗ್ಗೆ ಜನಾಧಿಕಾರ ಸಂಘರ್ಷ ಪರಿಷತ್ ಲೋಕಾಯುಕ್ತಕ್ಕೆ ದೂರು ನೀಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಧ್ಯಮ ಸಂಯೋಜಕ ಶಂಕರ ಪಾಗೋಜಿ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ತನಿಖೆ ನಡೆಸಬೇಕೆಂದು ಲೋಕಾಯುಕ್ತಕ್ಕೆ ಇಮೇಲ್ ಮೂಲಕ ದೂರು ಸಲ್ಲಿಸಿದೆ. ಬೆಂಗಳೂರಿನ ಪ್ರಮುಖ ಪತ್ರಿಕೆಗಳು ಮತ್ತು ಪ್ರಮುಖ ಸುದ್ದಿ ವಾಹಿನಿಗಳ ರಾಜಕೀಯ ವಿಭಾಗದಲ್ಲಿ ವರದಿ ಮಾಡುವ ಪತ್ರಕರ್ತರಿಗೆ ದೀಪಾವಳಿ ಗಿಫ್ಟ್ ನೀಡಲಾಗಿತ್ತು. ಒಂದು ಲಕ್ಷದಿಂದ 5 ಲಕ್ಷದ ವರೆಗೆ ಪತ್ರಕರ್ತರ ಗ್ರೇಡ್ ಆಧರಿಸಿ ಗಿಫ್ಟ್ ನೀಡಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದ್ದು, ಪತ್ರಕರ್ತರ ಒಳಗೆ ಭಾರೀ ಚರ್ಚೆಗೂ ಕಾರಣವಾಗಿದೆ.

ಈ ಪೈಕಿ ಹಣದ ಕಂತೆಯುಳ್ಳ ಗಿಫ್ಟ್ ಪಡೆದ ಪ್ರಜಾವಾಣಿ ವಿಭಾಗದ ಇಂಗ್ಲಿಷ್ ಮತ್ತು ಕನ್ನಡ ಪತ್ರಿಕೆಗಳ ಇಬ್ಬರು ಪತ್ರಕರ್ತರು, ತಮ್ಮ ಪತ್ರಿಕಾ ಸಂಸ್ಥೆಯ ಮುಖ್ಯಸ್ಥರಿಗೆ ವಿಷಯ ತಿಳಿಸಿ ಹಣದ ಕಂತೆಯನ್ನು ನೇರವಾಗಿ ಮುಖ್ಯಮಂತ್ರಿ ಕಚೇರಿಗೆ ಹಿಂತಿರುಗಿಸಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ, ಪತ್ರಿಕಾ ಸಂಸ್ಥೆಯ ಮುಖ್ಯಸ್ಥರು ಈ ಬಗ್ಗೆ ಮುಖ್ಯಮಂತ್ರಿಗೆ ಖಂಡನಾ ಪತ್ರವನ್ನು ಬರೆದಿದ್ದಾರೆ ಎನ್ನುವ ಮಾಹಿತಿಗಳಿವೆ.
ಪತ್ರಕರ್ತರಿಗೆ ಲಂಚ ನೀಡಿರುವ ಆರೋಪದ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಇದು ನಲ್ವತ್ತು ಪರ್ಸೆಂಟ್ ಕಮಿಷನ್ ಪಡೆದಿರುವ ಹಣವೇ..? ಅಥವಾ ನಲ್ವತ್ತು ಪರ್ಸೆಂಟ್ ಕಮಿಷನ್ ಹಗರಣವನ್ನು ಮುಚ್ಚಿಡಲು ನೀಡಿದ ಲಂಚವೇ..? ಮಾಧ್ಯಮಗಳನ್ನು ಖರೀದಿಸುವ ವ್ಯವಹಾರವೇ ಎಂದು ಪ್ರಶ್ನೆ ಮಾಡಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರೇ ಈ ಬಗ್ಗೆ ಉತ್ತರ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹ ಮಾಡಿದೆ.
Allegations of Chief Minister’s Office (CMO) ‘gifting’ Rs 1 lakh in cash in Deepavali gift boxes to some journalists has left the state government embarrassed and red-faced. Sources in the CMO have said Chief Minister Basavaraj Bommai has apologised and said he was ignorant about the cash ‘gifted’ to journalists. He is likely to order a probe, the sources said.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm