ಬ್ರೇಕಿಂಗ್ ನ್ಯೂಸ್
29-10-22 07:01 pm HK News Desk ಕರ್ನಾಟಕ
ಧಾರವಾಡ, ಅ.29: 2023 ರ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ಬಗ್ಗೆ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಸುಳಿವು ನೀಡಿದ್ದಾರೆ.
ಬೆಳಗಾವಿ, ಬಾಗಲಕೋಟೆ, ಮಂಗಳೂರು, ಉಡುಪಿ ಜಿಲ್ಲೆಯಿಂದ ಸ್ಪರ್ಧೆಗೆ ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಬೆಳಗಾವಿ ನಗರದ ಎರಡು ಕ್ಷೇತ್ರ, ಬಾಗಲಕೋಟೆಯ ತೇರದಾಳ, ಜಮಖಂಡಿ, ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ, ಪುತ್ತೂರು, ಚಿಕ್ಕಮಗಳೂರಿನ ಶೃಂಗೇರಿಯಿಂದ ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಒಂದು ಕ್ಷೇತ್ರದ ಬಗ್ಗೆ ನಿರ್ಣಯ ಮಾಡುತ್ತೇನೆ. ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಮುತಾಲಿಕ್ ಹೇಳಿದ್ದಾರೆ.

2014 ರಿಂದ ಬಿಜೆಪಿ ತನಗೆ ಟಿಕೇಟ್ ಕೊಡುತ್ತೆ ಎಂದು ಭಾವಿಸಿದ್ದೆ. ಬಿಜೆಪಿ ಪಕ್ಷವನ್ನು ಕಟ್ಟಿದವರು ನಾವು. ಆದರೆ ಬಿಜೆಪಿ ನನಗೆ ನಿರಂತರ ತೊಂದರೆ ಕೊಟ್ಟಿದೆ. ಹಿಂದುಗಳ ಹೆಸರಲ್ಲಿ ಗೆದ್ದು ಬಂದು ಅವರ ಮೇಲೆ ದೌರ್ಜನ್ಯಗಳನ್ನು ಎಸಗಿದೆ. ಇದಕ್ಕಾಗಿ ಚುನಾವಣೆಗೆ ನಿಲ್ಲುವ ತೀರ್ಮಾನಕ್ಕೆ ಬಂದಿದ್ದೇನೆ. ನಾನು ಕಟ್ಟರ್ ಹಿಂದುತ್ವವಾದಿ. ಚುನಾವಣೆಯಲ್ಲಿ ಗೆದ್ದರೆ, ನಾನು ಹಿಂದುತ್ವ ಪರ ಇರುವ ಬಿಜೆಪಿಗೆ ಬೆಂಬಲಿಸುತ್ತೇನೆ. ಆದರೆ ಬಿಜೆಪಿಗೆ ಹಿಂದುತ್ವ ಬೇಕಾಗಿಲ್ಲ.

ಬಿಜೆಪಿಯಲ್ಲಿ ಸದ್ಯ ಕಾಂಗ್ರೆಸ್ಸಿಗರೇ ತುಂಬಿದ್ದಾರೆ. ಹಿಂದುತ್ವದ ಹಿನ್ನೆಲೆ ಹೊಂದಿದವರಿಗೆ ಬಿಜೆಪಿಯಲ್ಲಿ ಮರ್ಯಾದೆ ಇಲ್ಲ. ಹೊಸ ಪಕ್ಷ ಮಾಡುವ ಗೋಜಿಗೆ ಹೋಗಲ್ಲ. ಸ್ವತಂತ್ರವಾಗಿ ಸ್ಪರ್ಧಿಸಲು ಹಿಂದು ಕಾರ್ಯಕರ್ತರು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ಡಿಸೆಂಬರ ಮೊದಲ ವಾರದಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಅನ್ನೋದನ್ನ ಪ್ರಕಟಿಸುತ್ತೇನೆ ಎಂದು ಪ್ರಮೋದ ಮುತಾಲಿಕ್ ಹೇಳಿದ್ದಾರೆ.
Pramod Muthalik all set to join politics, yet to choose constituency.
19-01-26 03:08 pm
Bangalore Correspondent
88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಸರ್ಕಾರ...
18-01-26 03:34 pm
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm