ಬ್ರೇಕಿಂಗ್ ನ್ಯೂಸ್
30-10-22 10:39 pm HK News Desk ಕರ್ನಾಟಕ
ಅಹ್ಮದಾಬಾದ್, ಅ.30:ಗುಜರಾತಿನ ಮೋರ್ಬಿ ನಗರದಲ್ಲಿ ತೂಗು ಸೇತುವೆ ಮುರಿದು ಬಿದ್ದು 60ಕ್ಕೂ ಹೆಚ್ಚು ಜನರು ಮೃತಪಟ್ಟ ದುರಂತ ನಡೆದಿದೆ. ಭಾನುವಾರ ಸಂಜೆ ಮುಚ್ಚು ನದಿಯ ಅಡ್ಡಲಾಗಿರುವ ಸೇತುವೆ ಕುಸಿದು ನೀರಿಗೆ ಬಿದ್ದಿದೆ.
ಸ್ಥಳೀಯ ಶಾಸಕ ಮತ್ತು ಗುಜರಾತ್ ಸರಕಾರದಲ್ಲಿ ಪಂಚಾಯತ್ ರಾಜ್ ಸಚಿವನಾಗಿರುವ ಬ್ರಿಜೇಶ್ ಮೆರ್ಜಾ ಸ್ಥಳಕ್ಕೆ ಆಗಮಿಸಿದ್ದು 60ಕ್ಕು ಹೆಚ್ಚು ಜನರು ಸಾವಿಗೀಡಾದ ಶಂಕೆ ವ್ಯಕ್ತಪಡಿಸಿದ್ದಾರೆ. ರಾಜಕೋಟ್ ಸಂಸದ ಮೋಹನ್ ಕುಂದರಿಯಾ, 60 ಶವಗಳನ್ನು ಪತ್ತೆ ಮಾಡಲಾಗಿದೆ ಎಂದಿದ್ದಾರೆ.
ಎನ್ ಡಿ ಆರ್ ಎಫ್ ಮತ್ತು ಇತರ ರಕ್ಷಣಾ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಮೃತರಲ್ಲಿ ಹಲವರು ಪ್ರವಾಸಿಗರು ಆಗಿರುವ ಸಾಧ್ಯತೆಯಿದೆ ಎಂದು ಸ್ಥಳೀಯ ವಾಹಿನಿಗಳು ವರದಿಯ ಮಾಡಿವೆ. ಪ್ರಧಾನಿ ನರೇಂದ್ರ ಮೋದಿ ತುರ್ತು ಪರಿಹಾರ ಕಾರ್ಯಕ್ಕೆ ಸೂಚನೆ ನೀಡಿದ್ದಾರೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮೃತರ ಕುಟುಂಬಕ್ಕೆ ತಲಾ ನಾಲ್ಕು ಲಕ್ಷ ಪರಿಹಾರ ಘೋಷಿಸಿದ್ದಾರೆ.
ಭಾನುವಾರ ಸಂಜೆ 6.30ರ ವೇಳೆಗೆ ದುರಂತ ನಡೆದಿದೆ. ತೇಲುವ ಸೇತುವೆ ಎಂದು ಪ್ರಸಿದ್ಧಿ ಪಡೆದಿದ್ದ ಕಾರಣ ಟೂರಿಸ್ಟ್ ಸ್ಪಾಟ್ ಆಗಿತ್ತು. ಸೇತುವೆ ನೋಡುವುದಕ್ಕಾಗಿಯೇ ಜನರು ಬರುತ್ತಿದ್ದರು. ಘಟನೆ ಸಂದರ್ಭದಲ್ಲಿ 150ಕ್ಕೂ ಹೆಚ್ಚು ಜನರಿದ್ದರು. ಇದರ ಭಾರದಿಂದಾಗಿ ಒಂದು ಪಾರ್ಶ್ವ ಕುಸಿದು ಬಿದ್ದಿದೆ ಎನ್ನಲಾಗಿದೆ. 79 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಆ ಪೈಕಿ 60 ಮಂದಿಯ ಸ್ಥಿತಿ ಗಂಭೀರ ಇದೆ. ಕೆಲವರು ನೀರಿನಲ್ಲಿ ಈಜಿ ದಡ ಸೇರುವುದು, ಅವರನ್ನು ರಕ್ಷಣೆ ಮಾಡುವ ವಿಡಿಯೋ ವೈರಲ್ ಆಗಿದೆ.
At least 60 people have died after a cable bridge collapsed in Gujarat on Sunday evening, state minister Brijesh Merja said. The incident took place on the Machhu river in Morbi district.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm