ಬ್ರೇಕಿಂಗ್ ನ್ಯೂಸ್
01-11-22 09:33 pm HK News Desk ಕರ್ನಾಟಕ
ತುಮಕೂರು, ನ.1 : ಗೃಹ ಸಚಿವ ಆರಗ ಜ್ಞಾನೇಂದ್ರ ಬಳಿ ಪಿಎಸ್ಐ ಹಗರಣದಿಂದಾಗಿ ತಮಗೆ ತೊಂದರೆಯಾಗಿದೆ ಎಂದು ಅಳಲು ತೋಡಿಕೊಳ್ಳಲು ಬಂದಿದ್ದ ಪಿಎಸ್ಐ ಅಭ್ಯರ್ಥಿಗೆ ಡಿವೈಎಸ್ಪಿ ಅಧಿಕಾರಿಯೊಬ್ಬರು ಕಪಾಳಮೋಕ್ಷ ಮಾಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.
ಸಚಿವರು ಮತ್ತು ಸಾರ್ವಜನಿಕರ ಎದುರಲ್ಲೇ ತುಮಕೂರು ಡಿವೈಎಸ್ಪಿ ಪಿ. ಶ್ರೀನಿವಾಸ್ ಪೊಲೀಸ್ ಉದ್ಯೋಗಾಂಕ್ಷಿಗೆ ಕಪಾಳಮೋಕ್ಷ ಮಾಡಿ ದರ್ಪ ತೋರಿದ್ದು ಈ ಬಗ್ಗೆ ಸಾರ್ವಜನಿಕ ವಲಯದಿಂದ ಆಕ್ರೋಶ ವ್ಯಕ್ತವಾಗಿದೆ. ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪೊಲೀಸ್ ಉದ್ಯೋಗಾಂಕ್ಷಿಗಳು, ಗೃಹ ಸಚಿವರ ಬಳಿ ಮನವಿ ಹೇಳಿಕೊಳ್ಳಲು ಬಂದಿದ್ದರು. ಪಿಎಸ್ಐ ಪರೀಕ್ಷೆ ರದ್ದು ಮಾಡಿರುವುದರಿಂದ ತಮಗೆ ಸಮಸ್ಯೆಯಾಗಿದೆ, ನೇಮಕಾತಿ ವಯೋಮಿತಿಯನ್ನು ಹೆಚ್ಚಳ ಮಾಡುವಂತೆ ಸಚಿವರ ಬಳಿ ಮನವಿ ಮಾಡಲು ಬಂದಿದ್ದರು. ಆದರೆ ಗೃಹ ಸಚಿವರು ಇದ್ದ ವೇದಿಕೆ ಬಳಿ ತೆರಳಲು ಅಭ್ಯರ್ಥಿಗಳಿಗೆ ಅಲ್ಲಿದ್ದ ಪೊಲೀಸರು ಅವಕಾಶ ನೀಡಲಿಲ್ಲ. ಪ್ರಶ್ನಿಸಿದ ಅಭ್ಯರ್ಥಿ ಒಬ್ಬನಿಗೆ ಡಿವೈಎಸ್ಪಿ ದರ್ಪ ತೋರಿ ಕಪಾಳ ಮೋಕ್ಷ ಮಾಡಿದ್ದಾರೆ. ಇದರ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಅಧಿಕಾರಿ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.
ಮನುಷ್ಯತ್ವವಿಲ್ಲದ ಸರ್ಕಾರ ; ಸಿದ್ದರಾಮಯ್ಯ
ಈ ಕುರಿತು ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಮನುಷ್ಯತ್ವವಿಲ್ಲದ ಸರ್ಕಾರ, ಈ ರೀತಿಯ ಘಟನೆಗಳು ಯಾವಾಗಲೂ ನಡೆಯುತ್ತಿವೆ. ವಾರದ ಹಿಂದಷ್ಟೇ ವಸತಿ ಸಚಿವ ವಿ. ಸೋಮಣ್ಣ ಮಹಿಳೆಯರೊಬ್ಬರಿಗೆ ಕಪಾಳ ಮೋಕ್ಷ ಮಾಡಿದ್ದರು. ಈ ರೀತಿಯ ಸಚಿವರು ರಾಜ್ಯದಲ್ಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
#WATCH | Karnataka: Tumakuru Dy SP P Srinivas slapped & sent away victims of the PSI (police sub-inspector) recruitment scam, today. Victims had come to speak with the State Home Minister Araga Jnanendra about the difficulties they faced due to the scam. pic.twitter.com/UfmGzARilv
— ANI (@ANI) November 1, 2022
A shocking video of deputy SP slapping the victims of a police sub-inspector recruitment scam in Karnataka's Tumakuru went viral on social media. Victims of Karnataka PSI recruitment came to speak to state home minister Araga Jnanendra about the difficulties being faced by the candidates due to the scam in the recruitment drive. In the video going viral on social media, Tumakuru Deputy SP P Srinivas is seen slapping and sending the victims of the PSI recruitment scam away.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm