ಬ್ರೇಕಿಂಗ್ ನ್ಯೂಸ್
01-11-22 10:17 pm Bangalore Correspondent ಕರ್ನಾಟಕ
ಬೆಂಗಳೂರು, ನ.1 : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ರಾಜ್ಯ ಸರ್ಕಾರದಿಂದ ಮರಣೋತ್ತರ ನೆಲೆಯಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿದೆ. ವಿಧಾನಸೌಧದ ಹೊರಗಿನ ಮೆಟ್ಟಿಲಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿದ್ದು ಪ್ರಶಸ್ತಿಯನ್ನು ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಗೆ ಪ್ರದಾನ ಮಾಡಲಾಯಿತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸೂಪರ್ ಸ್ಟಾರ್ ರಜನಿಕಾಂತ್, ಜೂ.ಎನ್ಟಿಆರ್ ಅವರು ಜೊತೆಯಾಗಿ ಪ್ರಶಸ್ತಿ ಪ್ರದಾನ ಮಾಡುತ್ತಿದ್ದಂತೆ ಹೊರಗೆ ಅದೇ ಸಮಯದಲ್ಲಿ ವರುಣ ಸಿಂಚನವಾಯಿತು. ಈ ಸಂದರ್ಭದಲ್ಲಿ ಅಭಿಮಾನಿಗಳಿಂದಲೂ ಹರ್ಷೋದ್ಗಾರ ಹೊರಹೊಮ್ಮಿತು. ಭಾರೀ ಸಂಖ್ಯೆಯಲ್ಲಿ ವಿಧಾನಸೌಧ ಹೊರ ಆವರಣದಲ್ಲಿ ಜನರು, ಅಭಿಮಾನಿಗಳು ಸೇರಿದ್ದರು.





ಇದೇ ವೇಳೆ, ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪುನೀತ್ ಅವರನ್ನು ಕನ್ನಡಿಗರು ಯಾವತ್ತಿಗೂ ಮರೆಯಲ್ಲ. ಕೇವಲ 46 ವರ್ಷಗಳಲ್ಲಿ ಅವರು ನೀಡಿದ ಕೊಡುಗೆ ಚಿರಸ್ಮರಣೀಯ. ನಾವು ಕನ್ನಡಿಗರು ಅಪ್ಪುವನ್ನು ದಿನವೂ ನೆನೆಯುತ್ತೇವೆ. ಮತ್ತೊಮ್ಮೆ ಹುಟ್ಟಿ ಬರುವಂತೆ ನಾವು ಅಪ್ಪು ಬಳಿ ಕೇಳಿಕೊಳ್ಳುತ್ತೇವೆ. ಇದೇ ಕನ್ನಡ ನಾಡಿನಲ್ಲಿ ಮತ್ತೆ ಹುಟ್ಟಿ ಬಾ ಅಪ್ಪು ಎಂದು ಭಾವುಕರಾಗಿ ಹೇಳಿದರು.


ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಕನ್ನಡದಲ್ಲಿಯೇ ಮಾತನಾಡಿ ಪುನೀತ್ ಮತ್ತು ರಾಜಕುಮಾರ್ ಜೊತೆಗಿನ ಒಡನಾಟವನ್ನು ಸ್ಮರಿಸಿದರು. ಶಿವ ರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಸೇರಿದಂತೆ ಚಿತ್ರರಂಗದ ಪ್ರಮುಖರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು. ಹೊರಗಡೆ ಮಳೆ ಹನಿಯುತ್ತಿದ್ದರೂ ಜನರು ಮಳೆಯ ನಡುವೆಯೇ ನಿಂತು ಕಾರ್ಯಕ್ರಮ ವೀಕ್ಷಿಸಿದರು.
Karnataka government conferred 'Karnataka Ratna' award to late Kannada superstar Puneeth Rajkumar on Tuesday at a grand function held in the premises of the Vidhana Soudha.Thousands of fans witnessed the programme amid rains and cheered the recognition to their favourite star in the presence of Tamil superstar Rajinikanth, Telugu superstar Jr NTR and Indian author, educator, philanthropist and chairperson of Infosys Foundation Sudha Murthy.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm