ಬ್ರೇಕಿಂಗ್ ನ್ಯೂಸ್
01-11-22 10:17 pm Bangalore Correspondent ಕರ್ನಾಟಕ
ಬೆಂಗಳೂರು, ನ.1 : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ರಾಜ್ಯ ಸರ್ಕಾರದಿಂದ ಮರಣೋತ್ತರ ನೆಲೆಯಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿದೆ. ವಿಧಾನಸೌಧದ ಹೊರಗಿನ ಮೆಟ್ಟಿಲಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿದ್ದು ಪ್ರಶಸ್ತಿಯನ್ನು ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಗೆ ಪ್ರದಾನ ಮಾಡಲಾಯಿತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸೂಪರ್ ಸ್ಟಾರ್ ರಜನಿಕಾಂತ್, ಜೂ.ಎನ್ಟಿಆರ್ ಅವರು ಜೊತೆಯಾಗಿ ಪ್ರಶಸ್ತಿ ಪ್ರದಾನ ಮಾಡುತ್ತಿದ್ದಂತೆ ಹೊರಗೆ ಅದೇ ಸಮಯದಲ್ಲಿ ವರುಣ ಸಿಂಚನವಾಯಿತು. ಈ ಸಂದರ್ಭದಲ್ಲಿ ಅಭಿಮಾನಿಗಳಿಂದಲೂ ಹರ್ಷೋದ್ಗಾರ ಹೊರಹೊಮ್ಮಿತು. ಭಾರೀ ಸಂಖ್ಯೆಯಲ್ಲಿ ವಿಧಾನಸೌಧ ಹೊರ ಆವರಣದಲ್ಲಿ ಜನರು, ಅಭಿಮಾನಿಗಳು ಸೇರಿದ್ದರು.
ಇದೇ ವೇಳೆ, ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪುನೀತ್ ಅವರನ್ನು ಕನ್ನಡಿಗರು ಯಾವತ್ತಿಗೂ ಮರೆಯಲ್ಲ. ಕೇವಲ 46 ವರ್ಷಗಳಲ್ಲಿ ಅವರು ನೀಡಿದ ಕೊಡುಗೆ ಚಿರಸ್ಮರಣೀಯ. ನಾವು ಕನ್ನಡಿಗರು ಅಪ್ಪುವನ್ನು ದಿನವೂ ನೆನೆಯುತ್ತೇವೆ. ಮತ್ತೊಮ್ಮೆ ಹುಟ್ಟಿ ಬರುವಂತೆ ನಾವು ಅಪ್ಪು ಬಳಿ ಕೇಳಿಕೊಳ್ಳುತ್ತೇವೆ. ಇದೇ ಕನ್ನಡ ನಾಡಿನಲ್ಲಿ ಮತ್ತೆ ಹುಟ್ಟಿ ಬಾ ಅಪ್ಪು ಎಂದು ಭಾವುಕರಾಗಿ ಹೇಳಿದರು.
ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಕನ್ನಡದಲ್ಲಿಯೇ ಮಾತನಾಡಿ ಪುನೀತ್ ಮತ್ತು ರಾಜಕುಮಾರ್ ಜೊತೆಗಿನ ಒಡನಾಟವನ್ನು ಸ್ಮರಿಸಿದರು. ಶಿವ ರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಸೇರಿದಂತೆ ಚಿತ್ರರಂಗದ ಪ್ರಮುಖರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು. ಹೊರಗಡೆ ಮಳೆ ಹನಿಯುತ್ತಿದ್ದರೂ ಜನರು ಮಳೆಯ ನಡುವೆಯೇ ನಿಂತು ಕಾರ್ಯಕ್ರಮ ವೀಕ್ಷಿಸಿದರು.
Karnataka government conferred 'Karnataka Ratna' award to late Kannada superstar Puneeth Rajkumar on Tuesday at a grand function held in the premises of the Vidhana Soudha.Thousands of fans witnessed the programme amid rains and cheered the recognition to their favourite star in the presence of Tamil superstar Rajinikanth, Telugu superstar Jr NTR and Indian author, educator, philanthropist and chairperson of Infosys Foundation Sudha Murthy.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm