ಬ್ರೇಕಿಂಗ್ ನ್ಯೂಸ್
04-11-22 09:46 pm HK News Desk ಕರ್ನಾಟಕ
ಕಾರವಾರ, ನ.4 : ಸೇನಾ ಸಮವಸ್ತ್ರ ಧರಿಸಿಕೊಂಡು ತಾನು ಲೆಫ್ಟಿನೆಂಟ್ ಕರ್ನಲ್ ದರ್ಜೆಯ ಅಧಿಕಾರಿಯೆಂದು ಹೇಳಿ ಜನರಿಗೆ ಮೋಸ ಮಾಡುತ್ತಿದ್ದ ವ್ಯಕ್ತಿಯನ್ನು ನೇವಿ ಇಂಟೆಲಿಜೆನ್ಸ್ ಹಾಗೂ ಕಾರವಾರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಕಾರವಾರ ಸಿದ್ಧರ ನಿವಾಸಿ ವಿನಾಯಕ ಮಹಾಲೆ ಬಂಧಿತ ವ್ಯಕ್ತಿ.
ಪ್ರತೀ ದಿನ ಸೇನಾ ಸಮವಸ್ತ್ರ ಧರಿಸಿಕೊಂಡು ಬೈಕ್ನಲ್ಲೇ ಕಾರವಾರ, ಸೌತ್ ಗೋವಾ ಸುತ್ತಾಡುತ್ತಿದ್ದ ಈ ವ್ಯಕ್ತಿ ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಹಲವರಿಂದ ಹಣ ಪಡೆದಿದ್ದಾನೆ. ಹಲವರಿಂದ 65,000 ರೂ., 35,000 ರೂ. ಹೀಗೆ ಹಣ ಪಡೆದು ವಂಚಿಸಿರುವ ಹಾಕಿರುವ ಈ ವ್ಯಕ್ತಿ ಬಗ್ಗೆ ಪೊಲೀಸರು ಕಣ್ಣಿಟ್ಟಿದ್ದರು. ಒಬ್ಬರಿಂದಂತೂ 4 ಲಕ್ಷ ರೂ. ಪಡೆದಿದ್ದ. ಕಾರವಾರ ಕಡವಾಡ ಮಾರುತಿ ನಗರದ ಪ್ರಸಾದ್ ಎಂಬಾತನಿಗೆ ನೇವಿಯಲ್ಲಿ ಪಿಯೋನ್ ಕೆಲಸ ಕೊಡಿಸುವುದಾಗಿ 35,000 ರೂ. ಪಡೆದಿದ್ದ.
ಈತನ ಚಟುವಟಿಕೆಯನ್ನು ಗಮನಿಸುತ್ತಿದ್ದ ನೇವಿ ಇಂಟೆಲಿಜೆನ್ಸ್ ಹಾಗೂ ಕಾರವಾರ ಪೊಲೀಸರು ನಿಗಾ ಇರಿಸಿದ್ದರು. ನಕಲಿ ಅನ್ನುವುದು ತಿಳಿಯುತ್ತಿದ್ದಂತೆ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ಮನೆಯಲ್ಲಿ 66,000 ರೂ. ನಗದು ಸಿಕ್ಕಿದ್ದು, ಆರೋಪಿ ವಿರುದ್ಧ ಕಾರವಾರ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Karwar Man cheats people stating that he is a Military officer and has been arrested by the police.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm