ಬ್ರೇಕಿಂಗ್ ನ್ಯೂಸ್
09-11-22 01:56 pm Bangalore Correspondent ಕರ್ನಾಟಕ
ಬೆಂಗಳೂರು, ನ.9: ಪ್ರಧಾನಿ ನರೇಂದ್ರ ಮೋದಿ ನ.11ರಂದು ಬೆಂಗಳೂರಿಗೆ ಆಗಮಿಸಲಿದ್ದು ಆ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಕರೆತರುವಂತೆ ರಾಜ್ಯ ಶಿಕ್ಷಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ, ಅನುದಾನಿತ ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಿದ್ದು ತೀವ್ರ ಆಕ್ಷೇಪಕ್ಕೆ ಗುರಿಯಾಗಿದೆ. ಮೋದಿ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಕರೆತನ್ನಿ, ಇಲ್ಲದಿದ್ದರೆ ಪರಿಣಾಮ ಎದುರಿಸಿ ಎಂದು ಪರೋಕ್ಷವಾಗಿ ಬೆದರಿಸುವ ರೀತಿ ಸುತ್ತೋಲೆ ಕಳುಹಿಸಲಾಗಿದೆ.
ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಕರೆತರಬೇಕು ಎಂದು ಎಲ್ಲ ಕಾಲೇಜು ಪ್ರಾಂಶುಪಾಲರಿಗೆ ಸೂಚಿಸಿ ಹೊರಡಿಸಿದ್ದ ಶಿಕ್ಷಣ ಇಲಾಖೆಯ ಸುತ್ತೋಲೆ ವಿವಾದಕ್ಕೆ ಕಾರಣವಾಗಿದೆ. ನ.11ರಂದು ಪ್ರಧಾನ ಮಂತ್ರಿಯವರು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರಲು ನ. 2ರಂದು ನಡೆದ ಪ್ರಾಂಶುಪಾಲರ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿದ್ದು ಅದರಲ್ಲಿ ತೀರ್ಮಾನಿಸಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಸರ್ಕಾರಿ/ ಅನುದಾನಿತ/ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಕಾಲೇಜಿನಿಂದ ನಿಗದಿಪಡಿಸಿದಷ್ಟು ವಿದ್ಯಾರ್ಥಿಗಳನ್ನು ಕರೆತರಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ಇಂಥ ಕಾಲೇಜಿನಿಂದ ಇಷ್ಟೇ ವಿದ್ಯಾರ್ಥಿಗಳನ್ನೂ ಕರೆ ತರಬೇಕು ಎಂದು ಪಟ್ಟಿಯನ್ನೂ ನೀಡಲಾಗಿದೆ.
ಆಯಾ ಕಾಲೇಜುಗಳಿಗೆ ನೇಮಕ ಮಾಡಿರುವ ಬಸ್ನ ನೋಡಲ್ ಅಧಿಕಾರಿಗಳು ಹಾಗೂ ಪ್ರಾಂಶುಪಾಲರು ನಿಗದಿತ ಸಮಯಕ್ಕೆ ಸರಿಯಾಗಿ ಕಾಲೇಜಿನಿಂದ ಹೊರಡುವ ಬಸ್ನಲ್ಲಿ ಕಾರ್ಯಕ್ರಮಕ್ಕೆ ಕ್ಷೇಮವಾಗಿ ಕರೆತರಲು ಹಾಗೂ ಕಾರ್ಯಕ್ರಮ ಮುಗಿದ ನಂತರ ವಾಪಸ್ ಕರೆದುಕೊಂಡು ಹೋಗಲು ಸೂಚಿಸಿದೆ. ತಪ್ಪಿದ್ದಲ್ಲಿ ಮುಂದಿನ ಆಗು ಹೋಗುಗಳಿಗೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರೇ ಜವಾಬ್ದಾರರಾಗಿರುತ್ತಾರೆ ಎಂದೂ ಎಚ್ಚರಿಕೆ ನೀಡಿ ಪದವಿಪೂರ್ವ ಶಿಕ್ಷಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
Colleges across Bangalore issued circulars to get students to PM Modi program in Bangalore, sparks controversy. Or else the principal of the college should face the consequences says the education department circular to colleges.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm