ಬ್ರೇಕಿಂಗ್ ನ್ಯೂಸ್
10-11-22 07:15 pm Bangalore Correspondent ಕರ್ನಾಟಕ
ಬೆಂಗಳೂರು, ನ.10: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜನವರಿ ಒಂದರಿಂದಲೇ ಕುಚಲಕ್ಕಿ ಪಡಿತರ ಇಲಾಖೆಯಿಂದ ಪೂರೈಕೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸುದ್ದಿಗಾರರಿಗೆ ಮಾಹಿತಿ ನೀಡಿದ ಸಚಿವರು, ಈ ಮೂರು ಜಿಲ್ಲೆಗಳಲ್ಲಿ ಕುಚಲಕ್ಕಿ ವಿತರಿಸಲು ಒಟ್ಟು 13 ಲಕ್ಷ ಕ್ವಿಂಟಾಲ್ ಅಕ್ಕಿಯ ಅಗತ್ಯವಿದೆ ಎಂದು ಹೇಳಿದರು. ಇದಕ್ಕಾಗಿ ಡಿಸೆಂಬರ್ 1ರಿಂದಲೇ ಕರಾವಳಿ ಜಿಲ್ಲೆಗಳಲ್ಲಿ ಭತ್ತ ಖರೀದಿಗೆ ತೊಡಗಲಾಗುವುದು. ಸ್ಥಳೀಯವಾಗಿ ಕೆಂಪಕ್ಕಿ ಭತ್ತ ಖರೀದಿಸಿ ಸಂಸ್ಕರಣೆ ಮಾಡಲಾಗುವುದು. ಇದಕ್ಕಾಗಿ ಭತ್ತ ಖರೀದಿ ಕೇಂದ್ರ ತೆರೆಯಲಿದ್ದು, 2540 ರೂ. ಬೆಂಬಲ ಬೆಲೆಗೆ ಭತ್ತ ಖರೀದಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರತಿ ಕುಟುಂಬಕ್ಕೆ ಐದು ಕಿಲೋ ಕುಚಲಕ್ಕಿ ಪಡಿತರ ಮೂಲಕ ವಿತರಿಸಲಾಗುವುದು. ನಮ್ಮಲ್ಲಿ ಸಿಗುವ ಕುಚಲಕ್ಕಿ ಪಡಿತರ ಇಲಾಖೆಯಿಂದ ನೀಡುವುದಕ್ಕೆ ಸಾಕಾಗದು. ಅದಕ್ಕಾಗಿ ಬೇರೆ ರಾಜ್ಯಗಳಿಂದಲೂ ಕುಚಲಕ್ಕಿ ಖರೀದಿ ಮಾಡಲಾಗುವುದು ಎಂದರು. ನಾವು ಊಟ ಮಾಡುವ ಅಕ್ಕಿಯನ್ನು ಪಡಿತರದಲ್ಲಿ ನೀಡಬೇಕೆಂದು ಕರಾವಳಿ ಜಿಲ್ಲೆಗಳ ಜನರು ಬೇಡಿಕೆ ಇರಿಸಿದ್ದರು. ನಾನಾ ಕಾರಣಗಳಿಂದ ಅಕ್ಕಿ ಪೂರೈಕೆ ಸಾಧ್ಯವಾಗಿರಲಿಲ್ಲ. ಮುಖ್ಯಮಂತ್ರಿ ಕುಚಲಕ್ಕಿ ಬೇಡಿಕೆಗೆ ಒಪ್ಪಿಗೆ ನೀಡಿದ್ದು, ಕೂಡಲೇ ಭತ್ತ ಖರೀದಿಯನ್ನು ಮಾಡಲಾಗುವುದು. ಬೆಂಬಲ ಬೆಲೆ ಕೊಟ್ಟು ಭತ್ತ ಖರೀದಿಸಿ, ಸರಕಾರದ ಕಡೆಯಿಂದಲೇ ಸಂಸ್ಕರಿಸಿ ಪಡಿತರ ನೀಡಲಾಗುವುದು ಎಂದು ಹೇಳಿದರು.
ಮೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ 13 ಲಕ್ಷ ಕ್ವಿಂಟಾಲ್ ಭತ್ತ ಖರೀದಿಸುವ ಗುರಿಯಿದ್ದು, ಅದರಲ್ಲಿ 8.50 ಲಕ್ಷ ಕ್ವಿಂಟಾಲ್ ಅಕ್ಕಿ ಸಂಗ್ರಹದ ಅಂದಾಜಿದೆ. ಕೇಂದ್ರ ಸರಕಾರ ಕೊಡುವ ಬೆಂಬಲ ಬೆಲೆಗೆ ಭತ್ತ ಸಿಗದೇ ಇರುವುದರಿಂದ ಪ್ರತೀ ಕ್ವಿಂಟಾಲ್ ಗೆ 500 ರೂ. ಹೆಚ್ಚುವರಿ ಕೊಟ್ಟು ರಾಜ್ಯ ಸರಕಾರದಿಂದ ಖರೀದಿಸಲಾಗುವುದು. ಇದಕ್ಕೆ 132 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಈ ಕುರಿತು ಆಹಾರ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
Boiled rice supply in Karvalai districts from Jan 1st 2023, 2450 per quintal.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm