ಬ್ರೇಕಿಂಗ್ ನ್ಯೂಸ್
12-11-22 11:06 am Bangalore Correspondent ಕರ್ನಾಟಕ
ಬೆಂಗಳೂರು, ನ.12 : ವೇದಗಳ ಅಧ್ಯಯನ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದ, ಪದ್ಮಶ್ರೀ ಪುರಸ್ಕೃತ ಗಣಿತ ತಜ್ಞ ಡಾ.ಆರ್.ಎಲ್. ಕಶ್ಯಪ್ (ರಂಗಸ್ವಾಮಿ ಲಕ್ಷ್ಮೀನಾರಾಯಣ ಕಶ್ಯಪ್) ಅವರು ಶುಕ್ರವಾರ ನಿಧನರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಆರ್.ಎಲ್.ಕಶ್ಯಪ್ (85) ಅವರು ಉತ್ತರಹಳ್ಳಿ ಸಮೀಪದ ಗುಬ್ಬಲಾಳದ ತಮ್ಮ ಸ್ವಗೃಹದಲ್ಲಿ ನಿಧನರಾದರು. ಶನಿವಾರ ಜಯನಗರದ ಸಾಕ್ಷಿ ಕಚೇರಿಯಲ್ಲಿ ಬೆಳಗ್ಗೆ 8 ರಿಂದ 10ರ ವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಮೈಸೂರು ಮೂಲದ ಕಶ್ಯಪ್, ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಬಿ.ಎಸ್ಸಿ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ನಲ್ಲಿ ಎಂಎಸ್ಸಿ, ಹಾರ್ವರ್ಡ್ ವಿವಿಯಿಂದ ಕಂಪ್ಯೂಟರ್ ವಿಷಯದಲ್ಲಿ ಪಿ.ಎಚ್.ಡಿ. ಪಡೆದಿದ್ದರು. ಅಮೇರಿಕದ ಆಕ್ಸ್ ಫರ್ಡ್ ವಿ.ವಿ.ಯಲ್ಲಿ ಮೂರು ದಶಕಗಳ ಕಾಲ ಎಲೆಕ್ಟ್ರಿಕಲ್ ಹಾಗೂ ಕಂಪ್ಯೂಟರ್ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. 350ಕ್ಕೂ ಅಧಿಕ ಸಂಶೋಧನಾ ಪ್ರಬಂಧಗಳನ್ನು ಬರೆದಿದ್ದಾರೆ. ಐವತ್ತು ಸಂಶೋಧನಾ ವಿದ್ಯಾರ್ಥಿಗಳಿಗೂ ಮಾರ್ಗದರ್ಶಿ ಆಗಿದ್ದರು.
ವೇದಗಳ ಸಂಶೋಧನ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ವೇದಗಳಲ್ಲಿ 25 ಸಾವಿರದಷ್ಟು ಮಂತ್ರಗಳಿಗೆ ಅರ್ಥ ಬರೆದು ಪ್ರಕಟಿಸಿದ್ದಾರೆ. ಋಗ್ವೇದದ 12 ಸಂಪುಟಗಳು, ಕೃಷ್ಣ ಯಜುರ್ವೇದದ 4 ಸಂಪುಟಗಳು, ಅಥರ್ವ ವೇದದ 6 ಸಂಪುಟಗಳು, ಸಾಮವೇದದ 2 ಸಂಪುಟಗಳು ಹಾಗೂ ಶುಕ್ಲ ಯಜುರ್ವೇದದ 2 ಸಂಪುಟಗಳು ವೇದಾಸಕ್ತರ ಅಪಾರ ಜನಮನ ಸೆಳೆದಿವೆ.
ಕಶ್ಯಪ್ ಅವರ “ಋಗ್ವೇದವನ್ನು ಯಾಕೆ ಓದಬೇಕು” ಎಂಬ ಕೃತಿ ಸಾಹಿತ್ಯ ಲೋಕದಲ್ಲಿ ಬಹಳಷ್ಟು ಮೆಚ್ಚುಗೆ ಪಡೆದಿದೆ. ಕನ್ನಡ, ಇಂಗ್ಲಿಷ್, ಹಿಂದಿ, ಮರಾಠಿ ಭಾಷೆಗಳಲ್ಲಿ ಪ್ರಕಟವಾಗಿದೆ. ಇವರು ರಚಿಸಿರುವ “ಋಗ್ವೇದದ ಅರ್ಥಾನುಸಂಧಾನ, “ಸೃಷ್ಟಿ ಹಾಗೂ ಮೃತ್ಯು ಸೂಕ್ತಗಳು, “ಸಂಕಲ್ಪದ ಅಧಿದೇವತೆ-ಅಗ್ನಿ, “ಆಧುನಿಕರಿಗಾಗಿ ವೇದ ಜ್ಞಾನ’ ಸೇರಿ ಹಲವು ಮಧ್ಯಮ ಗಾತ್ರದ ಪುಸ್ತಕಗಳು ವೇದಾಧ್ಯಯನಕ್ಕೆ ದಿಕ್ಸೂಚಿಯಂತಿವೆ. ಈಗಾಗಲೇ ಕನ್ನಡ, ತಮಿಳು, ತೆಲುಗು, ಮರಾಠಿ, ಮಲೆಯಾಳಂ ಭಾಷೆಗಳಲ್ಲಿ ಇವರ ಕೃತಿಗಳು ಪ್ರಕಟಗೊಂಡಿವೆ.
Mathematician R.L., who has made significant contributions in the field of study of Vedas, was awarded Padma Shri . Kashyap (RL Kashyap) (Rangaswamy Lakshminarayan Kashyap) passed away on Friday. He was 85 years old. He was the founder of the spiritual organization Sakshi Trust and was honored with the Padma Shri by the central government in 2021.
19-01-26 05:04 pm
Bangalore Correspondent
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಸರ್ಕಾರ...
18-01-26 03:34 pm
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
19-01-26 04:16 pm
HK News Desk
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm