ಬ್ರೇಕಿಂಗ್ ನ್ಯೂಸ್
13-10-20 12:55 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 13: ಆರ್.ಆರ್. ನಗರ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ತುದಿಗಾಲಲ್ಲಿ ನಿಂತಿದ್ದ ಮಾಜಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ. ನಕಲಿ ಮತದಾನ ಪ್ರಕರಣದಲ್ಲಿ ಪ್ರತಿವಾದಿ ಬಿಜೆಪಿಯ ಅಭ್ಯರ್ಥಿ ಮುನಿರಾಜು ಗೌಡ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದ್ದು, ಮುನಿರತ್ನ ಮತ್ತೆ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ.
2018ರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದ ಕಾಂಗ್ರೆಸಿನ ಮುನಿರತ್ನ ವಿರುದ್ಧ ಬಿಜೆಪಿ ಅಭ್ಯರ್ಥಿ ಮುನಿರಾಜು, ಚುನಾವಣಾ ಆಯೋಗ ಮತ್ತು ಸುಪ್ರೀಂ ಕೋರ್ಟಿಗೆ ದೂರು ಸಲ್ಲಿಸಿದ್ದರು. ಮುನಿರತ್ನ 25 ಸಾವಿರ ನಕಲಿ ಮತಗಳ ಮೂಲಕ ಗೆದ್ದಿದ್ದಾಗಿ ಆರೋಪಿಸಿ ಬಿಜೆಪಿ ದಾವೆ ಹೂಡಿತ್ತು. ಈ ನಡುವೆ, 2019ರ ಮಾರ್ಚ್ ವೇಳೆಗೆ ಮುನಿರತ್ನ ಮತ್ತು ಇತರೇ 15 ಮಂದಿ ಕಾಂಗ್ರೆಸ್, ಜೆಡಿಎಸ್ ಶಾಸಕರ ಜೊತೆಗೆ ಬಿಜೆಪಿ ಬೆಂಬಲಿಸಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ವಿಧಾನಸಭೆ ಸ್ಪೀಕರ್ ಅವರನ್ನು ಅನರ್ಹಗೊಳಿಸಿದ್ದರು. ಅನರ್ಹ ಪ್ರಕರಣ ಮತ್ತೆ ಕೋರ್ಟ್ ಮೆಟ್ಟಿಲೇರಿ, ಇತ್ಯರ್ಥಗೊಂಡು ಇತರೇ ಶಾಸಕರು ಮತ್ತೆ ಚುನಾವಣೆ ಸ್ಪರ್ಧಿಸಿ ಗೆದ್ದು ಸಚಿವರಾಗಿದ್ದೂ ಆಗಿತ್ತು. ಆದರೆ ಮುನಿರತ್ನ ವಿರುದ್ಧ ಬಿಜೆಪಿಯೇ ಪ್ರಕರಣ ದಾಖಲಿಸಿದ್ದರಿಂದ ಆರ್.ಆರ್. ನಗರದ ಉಪ ಚುನಾವಣೆ ಕಗ್ಗಂಟಾಗಿತ್ತು.
ಇದೀಗ ಚುನಾವಣಾ ಆಯೋಗ ಆರ್.ಆರ್. ನಗರದ ಉಪ ಚುನಾವಣೆಗೆ ನ.3ರ ದಿನಾಂಕ ಘೋಷಿಸಿದ್ದರೂ, ಕೋರ್ಟ್ ತಗಾದೆ ಮುನಿರತ್ನ ಅವರನ್ನು ಕಂಗಾಲು ಮಾಡಿತ್ತು. ಇದೀಗ ಬಿಜೆಪಿಯೇ ಮುನಿರಾಜು ಗೌಡ ಅರ್ಜಿ ವಜಾ ಆಗುವಂತೆ ನೋಡಿಕೊಂಡಿದ್ದು, ಮುನಿರತ್ನ ಸ್ಪರ್ಧೆಗೆ ಪರೋಕ್ಷವಾಗಿ ಸಹಕರಿಸಿದೆ. ಈ ಮೂಲಕ ಮುನಿರತ್ನ ಮತ್ತೆ ಬಿಜೆಪಿಯಿಂದ ಸ್ಪರ್ಧಿಸುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಈ ನಡುವೆ ಕಳೆದ ಬಾರಿ ಬಿಜೆಪಿಯಿಂದ ಆರ್.ಆರ್. ನಗರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ತುಳಸಿ ಮುನಿರಾಜು ಗೌಡ ಅವರನ್ನು ಪಕ್ಷ ನಿರ್ದೇಶನ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಈವರೆಗೂ ಬಿ.ಎಲ್. ಸಂತೋಷ್ ಬಣದ ಮೂಲಕ ಮುನಿರಾಜು ಮತ್ತೆ ಟಿಕೆಟ್ ಪಡೆಯಲು ಲಾಬಿ ನಡೆಸಿದ್ದರು. ಆದರೆ, ಸಿಎಂ ಯಡಿಯೂರಪ್ಪ ಮಾತ್ರ ಮತ್ತೆ ಮುನಿರತ್ನಗೇ ಟಿಕೆಟ್ ನೀಡಲು ಹೈಕಮಾಂಡ್ ಮಟ್ಟದಲ್ಲಿ ಒತ್ತಡ ಹಾಕಿದ್ದರು. ಇದೀಗ ನಕಲಿ ಮತ ಪ್ರಕರಣದಲ್ಲಿ ಬಿಜೆಪಿ ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಮುನಿರತ್ನಗೆ ಸ್ಪರ್ಧೆಗೆ ಹಾದಿ ಸುಗಮ ಆದಂತಾಗಿದೆ.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm