ಬ್ರೇಕಿಂಗ್ ನ್ಯೂಸ್
13-10-20 01:00 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್.13 : ಖಾತೆ ಬದಲಾವಣೆಯಿಂದ ಪಕ್ಷದಲ್ಲಿ ಉಂಟಾಗಿದ್ದ ಅಸಮಾಧಾನವನ್ನ ಶಮನಗೊಳಿಸುವಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇಂದು ಸಚಿವ ಸುಧಾಕರ್ ಮತ್ತು ಶ್ರೀರಾಮುಲು ಇಬ್ಬರನ್ನ ಕಾವೇರಿ ನಿವಾಸಕ್ಕೆ ಕರೆಸಿಕೊಂಡಿದ್ದರು. ಈ ವೇಳೆ ಇಬ್ಬರು ಸಚಿವರ ಜೊತೆಗೆ ಮಾತುಕತೆ ನಡೆಸಿ ಸಂಪುಟ ವಿಸ್ತರಣೆ ವೇಳೆ ನೋಡಿಕೊಳ್ಳೋಣ ಎಂದ ಸಿಎಂ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಸಿಎಂ ಭರವಸೆ ಹಿನ್ನೆಲೆ ಶ್ರೀರಾಮುಲು ಸಮಾಜ ಕಲ್ಯಾಣ ಇಲಾಖೆ ಖಾತೆ ಒಪ್ಪಿಕೊಂಡಿದ್ದಾರೆ.
ಸಿಎಂ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀರಾಮುಲು, ಈ ಹಿಂದೆ ನನಗೆ ಸಮಾಜ ಕಲ್ಯಾಣ ಖಾತೆ ನೀಡಬೇಕೆಂದು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಂಡಿದ್ದೆ. ಅದರಂತೆ ಸಿಎಂ ಆ ಖಾತೆಯನ್ನ ನೀಡಿದ್ದಾರೆ. ಮಾಧ್ಯಮಗಳಲ್ಲಿ ಬಿತ್ತರವಾಗಿರುವಂತೆ ಯಾವುದೇ ಅಸಮಾಧಾನ ಇಲ್ಲ. ಕೊರೊನಾ ಕಾಲದಲ್ಲಿ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ಒಬ್ಬರೇ ಬಳಿ ಇರೋದು ಉತ್ತಮ. ಹಾಗಾಗಿ ಆರೋಗ್ಯ ಇಲಾಖೆ ಖಾತೆಯನ್ನ ಸೋದರರಾಗಿರುವ ಸುಧಾಕರ್ ಅವರಿಗೆ ನೀಡಲಾಗಿದೆ. ಸುಧಾಕರ್ ವೈದ್ಯರಾಗಿದ್ದು, ಆರೋಗ್ಯ ಇಲಾಖೆಯನ್ನ ಉತ್ತಮವಾಗಿ ನಿರ್ವಹಿಸಲಿದ್ದಾರೆ ಎಂದು ಹೇಳಿದರು
ಇದೇ ವೇಳೆ ಮಾತನಾಡಿದ ಸುಧಾಕರ್, ಬಿಹಾರ ಮತ್ತು ಉಪ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಗೆ ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಈ ಹಿನ್ನೆಲೆ ಕೆಲ ತಾಂತ್ರಿಕೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಖಾತೆಗಳ ಬದಲಾವಣೆಯಾಗಿದೆ. ಶ್ರೀರಾಮುಲು ಅಣ್ಣನವರು ರಾಜಕೀಯದಲ್ಲಿ ನನಗಿಂತ ಹಿರಿಯರು. ಸಮಾಜ ಕಲ್ಯಾಣ ಅನ್ನೋದು ಪ್ರಬಲ ಖಾತೆ. ಮುಖ್ಯಮಂತ್ರಿಗಳ ಖಾತೆಯ ಬದಲಾವಣೆ ಬಗ್ಗೆ ಒಂದು ತಿಂಗಳಿನಿಂದ ನಮ್ಮೊಂದಿಗೆ ಚರ್ಚೆ ನಡೆಸಿದ್ದರು. ಸಮಾಜದ ಸ್ವಾಸ್ಥ್ಯವನ್ನ ಚೆನ್ನಾಗಿ ಮಾಡಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಹೊಣೆಯನ್ನ ಶ್ರೀರಾಮುಲು ಅವರಿಗೆ ನೀಡಲಾಗಿದೆ ಎಂದು ತಿಳಿಸಿದರು.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm