ಬ್ರೇಕಿಂಗ್ ನ್ಯೂಸ್
15-11-22 03:08 pm HK News Desk ಕರ್ನಾಟಕ
ಹುಬ್ಬಳ್ಳಿ,ನ 15: ಹುಬ್ಬಳ್ಳಿಯಿಂದ ದೆಹಲಿಗೆ ಇಂಡಿಗೋ ವಿಮಾನಯಾನ ಸೇವೆ ಸೋಮವಾರದಿಂದ ಆರಂಭವಾಗಿದೆ. ಈ ವಿಮಾನದಲ್ಲಿ ಉತ್ತರ ಕರ್ನಾಟಕ ಭಾಷೆ ಕಂಪು ಸೂಸಿದೆ. ಫ್ಲೈಟ್ ಅನೌನ್ಸ್ಮೆಂಟ್ಅನ್ನು ನಮ್ಮ ಉತ್ತರ ಕರ್ನಾಟಕ ಭಾಷೆಯಲ್ಲಿ ಮಾಡಿರುವುದು ತುಂಬಾ ವಿಶೇಷವಾಗಿದೆ.
ವಿಮಾನದಲ್ಲಿ ಭಾಷಾ ಸೊಗಡು:
ಮೊದಲ ದಿನವೇ ಅಚ್ಚ ಕನ್ನಡದಲ್ಲಿ,"ಎಲ್ಲರಿಗೂ ನಮಸ್ಕಾರ್ ರೀ..ಶರಣು, ನಾನು ಅಕ್ಷಯ್ ಪಾಟೀಲ್.. ಇಲ್ಲೇ ಬೈಲಹೊಂಗಲದವ"! ಎಂದು ಪೈಲಟ್ ಉತ್ತರ ಕರ್ನಾಟಕ ಭಾಷೆಯಲ್ಲಿ ಅನೌನ್ಸ್ ಮಾಡಿದ್ದಾರೆ. ವಿಮಾನಗಳ ಹಾರಾಟಕ್ಕೂ ಮೊದಲು ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಸೂಚನೆಗಳನ್ನು ನೀಡಲಾಗುತ್ತಿತ್ತು. ಅಂತದರಲ್ಲಿ ಕನ್ನಡ ಅದರಲ್ಲೂ ಉತ್ತರ ಕರ್ನಾಟಕದ ಜವಾರಿ ಭಾಷೆಯನ್ನು ಕೇಳುವುದು ಸಾಧ್ಯವಿರಲಿಲ್ಲ. ಬೈಲಹೊಂಗಲದ ಅಕ್ಷಯ ಪಾಟೀಲ್ ಇಂಡಿಗೋ ವಿಮಾನದ ಪೈಲಟ್ ಆಗಿದ್ದು, ತಮ್ಮ ಕನ್ನಡಾಭಿಮಾನವನ್ನು ಮೆರೆದಿದ್ದಾರೆ.
ಪೈಲಟ್ ಅಕ್ಷಯ್ ಪಾಟೀಲ್ ಕನ್ನಡದಲ್ಲಿ ಮಾತನಾಡುವ ವಿಡಿಯೋವನ್ನು ಟ್ವಿಟ್ಟರ್ನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶೇರ್ ಮಾಡಿದ್ದಾರೆ. ಜೊತೆಗೆ ಹುಬ್ಬಳ್ಳಿ-ದೆಹಲಿ ವಿಮಾನಯಾನಕ್ಕೆ ಕಾರಣರಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೂ ಪೈಲಟ್ ಅಭಿನಂದಿಸಿದರು. ಉಳಿಬೇಕು ನಮ್ಮ ಭಾಷಾ ಮತ್ತ ಸಂಸ್ಕೃತಿ ಅಂದ್ರ ಪಕ್ಕಾ ಆಗೇ ಆಗ್ತೈತಿ ಪ್ರಗತಿ ಎಂದು ಅಕ್ಷಯ್ ಹೇಳಿದ್ರು.
ದೆಹಲಿ ವಿಮಾನದಾಗ ಗಂಡುಮೆಟ್ಟಿದ ನಾಡಿನ ಭಾಷಾ ಸೊಗಡು
— Pralhad Joshi (@JoshiPralhad) November 14, 2022
ನಮ್ಮ ಹುಬ್ಬಳ್ಳಿಯಿಂದ ದೆಹಲಿಗೆ ವಿಮಾನ ಸೇವಾ ಚಾಲೂ ಆತು ಅನ್ನೋದ ಒಂದ ವಿಶೇಷ ಆದ್ರ, ಫ್ಲೈಟ್ ಅನೌನ್ಸ್ಮೆಂಟ್ ಸಹ ನಮ್ಮ ಉತ್ತರ ಕರ್ನಾಟಕ ಭಾಷಾದಾಗ ಆಗಿದ್ದು ಇನ್ನೊಂದ ವಿಶೇಷ. @IndiGo6E pic.twitter.com/WlrpmR6nSQ
Air passengers from Kittur Karnataka region (Bombay Karnataka) will now be able to fly directly to the national capital Delhi with IndiGo Airlines launching an exclusive direct flight service from Hubballi on Monday.The formal launch of the direct flight services was held at Hubballi Airport, with Union Minister for Parliamentary Affairs, Coal and Mines Pralhad Joshi inaugurating it and Union Minister for Civil Aviation Jyotiradhitya Scindia and R.K. Singha of IndiGo Airlines participating in the programme through virtual mode.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm