ಬ್ರೇಕಿಂಗ್ ನ್ಯೂಸ್
19-11-22 10:58 pm Bangalore Correspondent ಕರ್ನಾಟಕ
ಬೆಂಗಳೂರು, ನ.19: ಮತದಾರರ ಮಾಹಿತಿ ಸಂಗ್ರಹ ಹಗರಣ ಆರೋಪ ಪ್ರಕರಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರ ನಡುವಿನ ಆರೋಪ, ಪ್ರತ್ಯಾರೋಪಗಳು ತಾರಕಕ್ಕೇರಿವೆ. ಕಾಂಗ್ರೆಸ್ ನ ಆರೋಪಗಳಿಗೆ ಬಿಜೆಪಿ ತಿರುಗೇಟು ನೀಡುತ್ತಲ್ಲೇ ಇದೆ.
ಕಾಂಗ್ರೆಸ್ ಪಕ್ಷಕ್ಕೆ ಇದು ತಿರುಗುಬಾಣವಾಗಲಿದೆ ಎಂಬ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ‘ತಿರುಗುಬಾಣವಲ್ಲ, ಈ ವಿಚಾರದಲ್ಲಿ ನಾವು ತಪ್ಪು ಮಾಡಿದ್ದರೆ ನೇಣು ಹಾಕಲಿ’ ಎಂದಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರ ಮೇಲೆ ಮಾನನಷ್ಟ ಮೊಕದ್ದಮೆ ಸಲ್ಲಿಸುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, ಈ ಮೊಕದ್ದಮೆ ಸಲ್ಲಿಸಲು ತಡ ಯಾಕೆ? ಕೂಡಲೇ ಸಲ್ಲಿಸಲಿ. ಈ ಕೇಸ್ ಎದುರಿಸುವುದು ಹೇಗೆ ಎಂದು ನಮಗೂ ಗೊತ್ತಿದೆ ಎಂದು ಹೇಳಿದ್ದಾರೆ.

ಬಮ್ಮಾಯಿ ಅವರು ಹಾಗೂ ಅವರ ಹಿಂಬಾಲಕರಿಂದ ಕನ್ನಡಿಗರ ಮತದಾನದ ಹಕ್ಕನ್ನು ಕಸಿಯುವ ಪ್ರಯತ್ನವಾಗಿದೆ. ಚಿಲುಮೆ ಈ ಅಕ್ರಮದ ಸಾಧನವಾಗಿದೆ. ಈ ವಿಚಾರವನ್ನು ನಾವು ವಿಧಾನಮಂಡಲದ ಉಭಯ ಸದನಗಳಲ್ಲಿ ಪ್ರಶ್ನಿಸುತ್ತೇವೆ. ಜನತಾ ನ್ಯಾಯಾಲಯದ ಮುಂದೆ ಇಡುತ್ತೇವೆ. ಪ್ರಜಾಪ್ರಭುತ್ವದ ರಕ್ಷಕರಾಗಿ ಕನ್ನಡಿಗರ ಮತದಾನದ ಹಕ್ಕನ್ನು ಕಸಿಯಲು ಅವಕಾಶ ನೀಡುವುದಿಲ್ಲ ಎಂದು ಸುರ್ಜೇವಾಲ ಅವರು ತಿಳಿಸಿದ್ದಾರೆ.
ಈ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆಯೇ ಎಂಬ ಪ್ರಶ್ನೆಗೆ, ‘ಈ ಸಮರದಲ್ಲಿ ಬೊಮ್ಮಾಯಿ ಅವರು ಸೋಲಲಿದ್ದಾರೆ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಮಾತ್ರವಲ್ಲ. ಅವರು ಜೈಲಿಗೂ ಹೋಗುತ್ತಾರೆ. ಹೀಗಾಗಿ ಅವರ ಮೇಲೆ ಎಫ್ಐಆರ್ ದಾಖಲಾಗಬೇಕು. ಭಾಗಿಯಾಗಿರುವ ಇತರ ಎಲ್ಲ ಅಧಿಕಾರಿಗಳು ಬಂಧನವಾಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಪ್ಪು ಮಾಡಿದವರು ಶಿಕ್ಷೆ ಅನುಭವಿಸದೇ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನನಗೆ ಕರ್ನಾಟಕ ರಾಜ್ಯದ ಜನರ ಮೇಲೆ ನಂಬಿಕೆ ಇದೆ. ಬೊಮ್ಮಾಯಿ ಅವರ ಪ್ರಕಾರ ಈ ಆರೋಪ ನಿರಾಧಾರವಾಗಿದ್ದರೆ ತನಿಖೆಗೆ ಆದೇಶ ನೀಡಿದ್ದು ಯಾಕೆ?’ ಎಂದರು ಎಂದು ಪ್ರಶ್ನಿಸಿದ್ದಾರೆ.
Karnataka Pradesh Congress Committee president DK Shivakumar alleged that minister Ashwath Narayan and his team are behind the voter data theft case in Bengaluru, news agency ANI reported. DK Shivakumar alleged the minister's team even deleted lakhs of votes using illegally collected data.
19-01-26 05:04 pm
Bangalore Correspondent
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಸರ್ಕಾರ...
18-01-26 03:34 pm
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
19-01-26 04:16 pm
HK News Desk
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm