ಬ್ರೇಕಿಂಗ್ ನ್ಯೂಸ್
22-11-22 09:31 pm Bangalore Correspondent ಕರ್ನಾಟಕ
ಬೆಂಗಳೂರು, ನ.22: ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಸಿಕ್ಕಿಬಿದ್ದಿರುವ ಐಸಿಸ್ ಉಗ್ರ ಮೊಹಮ್ಮದ್ ಶಾರೀಕ್ ಒಬ್ಬಂಟಿಯಾಗಿದ್ದ. ಒಂಟಿಯಾಗಿಯೇ ಮಂಗಳೂರಿನಲ್ಲಿ ಸರಣಿ ಸ್ಫೋಟಕ್ಕೆ ಸಂಚು ಹೂಡಿದ್ದ. ಆತ ಇದಕ್ಕಾಗಿ ಯಾವುದೇ ಗ್ಯಾಂಗ್ ಮಾಡಿಕೊಂಡಿರಲಿಲ್ಲ. ಯಾರದ್ದೇ ಸಹಾಯವನ್ನೂ ಪಡೆದಿರಲಿಲ್ಲ ಎಂದು ಗುಪ್ತಚರ ಮೂಲಗಳು ಹೇಳುತ್ತಿವೆ.
ಹೀಗಾಗಿ ಮೊಹಮ್ಮದ್ ಶಾರೀಕ್ ಜಮ್ಮು ಕಾಶ್ಮೀರದ ಉಗ್ರರ ರೀತಿ ಒಂಟಿ ತೋಳ ಆಗಿದ್ದ ನ್ಯೂಸ್ 18 ವೆಬ್ ಕೇಂದ್ರ ಗುಪ್ತಚರ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಆತ ಸುಸೈಡ್ ಬಾಂಬರ್ ಆಗಿರಲಿಲ್ಲ. ಬದಲಿಗೆ, ಮಂಗಳೂರು ಸೇರಿ ಹಲವು ಕಡೆ ಬಾಂಬ್ ಇಟ್ಟು ಸ್ಫೋಟಿಸಲು ಪ್ಲಾನ್ ಹಾಕಿದ್ದ ಎನ್ನುವ ಅಂದಾಜನ್ನು ಗುಪ್ತಚರ ಸಂಸ್ಥೆಗಳು ಮಾಡಿವೆ. ಅಲ್ಲದೆ, ಶಾರೀಕ್ ಇದಕ್ಕಾಗಿ ಯಾವುದೇ ತಂಡವನ್ನು ಕಟ್ಟಿಕೊಂಡಿರಲಿಲ್ಲ ಎಂದು ಹೇಳಿವೆ.


ಶಾರೀಕ್ ತನ್ನ ಕೃತ್ಯದ ಬಗ್ಗೆ ಯಾರ ಜೊತೆಗೂ ಹೇಳಿಕೊಂಡಿರಲಿಲ್ಲ. ಬಾಂಬ್ ತಯಾರಿಗೆ ಬಳಸಿದ ಸಾಮಗ್ರಿಗಳು ಸೇರಿದಂತೆ ಎಲ್ಲವನ್ನೂ ಆತನೇ ರೆಡಿ ಮಾಡಿಕೊಂಡಿದ್ದ. ಆತನ ಫೋನ್ ಕರೆ, ಇನ್ನಿತರ ದಾಖಲೆಗಳನ್ನು ಕಲೆ ಹಾಕುತ್ತಿದ್ದೇವೆ. ಆತನ ಜೊತೆಗೆ ಕ್ಲೋಸ್ ಇದ್ದವರನ್ನೂ ವಿಚಾರಣೆ ಮಾಡುತ್ತಿದ್ದೇವೆ ಎಂದು ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ.



ಐಸಿಸ್ ಉಗ್ರವಾದಿ ಸಂಘಟನೆಯಿಂದ ಪ್ರೇರಿತನಾಗಿದ್ದ ಶಾರೀಕ್, ಒಬ್ಬಂಟಿಯಾಗಿಯೇ ವಿಧ್ವಂಸಕ ಕೃತ್ಯ ಎಸಗಲು ಮುಂದಾಗಿದ್ದ ಎನ್ನುವ ಮಾಹಿತಿಯನ್ನು ಗುಪ್ತಚರ ಸಂಸ್ಥೆಗಳು ನೀಡಿವೆ. ಇದೇ ಆಧಾರದಲ್ಲಿ ಮಂಗಳೂರಿಗೆ ಬಂದಿದ್ದ ಎಡಿಜಿಪಿ ಅಲೋಕ್ ಕುಮಾರ್, ಆತನನ್ನು ಬದುಕಿಸುವುದೇ ನಮ್ಮ ಮೊದಲ ಆದ್ಯತೆ. ಆನಂತರ, ಆತನನ್ನು ಪ್ರಶ್ನೆ ಮಾಡಲಾಗುವುದು ಎಂದು ಹೇಳಿದ್ದರು.
Mohammed Shariq, 24, the passenger and prime suspect in Saturday’s autorickshaw blast in Mangaluru, is a lone wolf, top intelligence sources told CNN-News18. The suspect has suffered 45% burns. He probably wanted to attack all places on his own and was not a suicide bomber, they said. “Shariq was not in touch with anyone and had no gang. The theory on his associates has been proved wrong,” they said.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm