ಬ್ರೇಕಿಂಗ್ ನ್ಯೂಸ್
25-11-22 10:36 pm Bangalore Correspondent ಕರ್ನಾಟಕ
ಬೆಂಗಳೂರು, ನ.25: ಬೆಂಗಳೂರಿನಲ್ಲಿ ನಡೆದ ಮತದಾರರ ಐಡಿ ಕಾರ್ಡ್ ಪರಿಷ್ಕರಣೆ ಅಕ್ರಮ ಪ್ರಕರಣದಲ್ಲಿ ಕೇಂದ್ರ ಚುನಾವಣಾ ಆಯೋಗ ಮಧ್ಯ ಪ್ರವೇಶ ಮಾಡಿದೆ. ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ಸಂಗ್ರಹಿಸಿದ ಆರೋಪದಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದಲ್ಲದೆ, ಪ್ರಕರಣದ ಬಗ್ಗೆ ಸಮಗ್ರ ತನಿಖೆಗೆ ಆದೇಶ ಮಾಡಿದೆ.
ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಹಾಗೂ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರನ್ನು ಅಮಾನತಾದವರು. ಬಿಬಿಎಂಪಿ ವಿಶೇಷ ಆಯುಕ್ತ ಎಸ್.ರಂಗಪ್ಪ ಅವರು ಶಿವಾಜಿನಗರ, ಚಿಕ್ಕಪೇಟೆ ಕ್ಷೇತ್ರದ ಉಸ್ತುವಾರಿ ಸಹ ಆಗಿದ್ದರು. ಬೆಂಗಳೂರು ನಗರ ಜಿಲ್ಲಾಧಿಕಾರಿ ಆಗಿದ್ದ ಕೆ.ಶ್ರೀನಿವಾಸ್ ಅವರು ಮಹದೇವಪುರ ಕ್ಷೇತ್ರದ ಉಸ್ತುವಾರಿ ಅಧಿಕಾರಿ ಆಗಿದ್ದರು. ಇದೀಗ ಈ ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತು ಮಾಡಿರುವ ಕೇಂದ್ರ ಚುನಾವಣಾ ಆಯೋಗ, ರಂಗಪ್ಪ ಹಾಗೂ ಕೆ.ಶ್ರೀನಿವಾಸ್ ವಿರುದ್ಧ ಇಲಾಖಾ ವಿಚಾರಣೆಗೆ ರಾಜ್ಯ ಚುನಾವಣಾ ಆಯುಕ್ತರಿಗೆ ನಿರ್ದೇಶನ ನೀಡಿದೆ.
ಇದಲ್ಲದೆ, ವೋಟರ್ ಐಡಿ ಪರಿಷ್ಕರಣೆಗೆ ವಿಶೇಷ ಅಧಿಕಾರಿ ನೇಮಕಕ್ಕೆ ಸೂಚನೆ ನೀಡಿದೆ. ಈವರೆಗೆ ಸಂಗ್ರಹಿಸಿರುವ ಡೇಟಾ ಬಳಸದಂತೆಯೂ ಸೂಚಿಸಿದ್ದು, ಬೆಂಗಳೂರಿನ ಮೂರು ಕ್ಷೇತ್ರಗಳಲ್ಲಿ ಮತ್ತೊಮ್ಮೆ ಶೇ. 100ರಷ್ಟು ಮತದಾರರ ಪರಿಷ್ಕರಣೆ ನಡೆಯಬೇಕು ಎಂದು ಹೇಳಿದೆ. ಮತದಾರರ ಪರಿಷ್ಕರಣೆಗೆ ಡಿ.24 ರ ವರೆಗೆ ಸಮಯ ವಿಸ್ತರಣೆ ಮಾಡಿದೆ.
ಬಿಬಿಎಂಪಿಯ ಹೊರಗಿನ ವಿಶೇಷ ಅಧಿಕಾರಿಗಳನ್ನು ಮೇಲ್ವಿಚಾರಣೆಗೆ ನೇಮಿಸಬೇಕು. ಮತದಾರರ ಪಟ್ಟಿಗಳ ಪರಿಶೀಲನೆಯನ್ನು ಅಧಿಕಾರಿಗಳು ನಡೆಸಬೇಕು. ಅಕ್ರಮವಾಗಿ ಯಾವುದೇ ನೇರ ಅಥವಾ ಪರೋಕ್ಷ ಬಳಕೆಯನ್ನು ಖಚಿತಪಡಿಸಿಕೊಳ್ಳಬೇಕು. ರಾಜಕೀಯ ಪಕ್ಷಗಳು ದಾಖಲೆ ಸಂಗ್ರಹಿಸಿರುವ ಬಗ್ಗೆ ಪತ್ತೆಹಚ್ಚಬೇಕು ಎಂದು ಅಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚನೆ ಕೊಟ್ಟಿದೆ.
ಇದಲ್ಲದೆ, ಹೊಸತಾಗಿ ವೋಟರ್ ಐಡಿ ಪರಿಷ್ಕರಣೆ ಬಗ್ಗೆ ನಿಗಾ ವಹಿಸಲು ಏಳು ಜನ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿದೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತನಿಖೆಗೆ ಐಎಎಸ್ ಅಧಿಕಾರಿ ವಿಶಾಲ್ ಅವರನ್ನು ನೇಮಕ ಮಾಡಲಾಗಿದೆ. ಮಹಾದೇವಪುರ ವಲಯಕ್ಕೆ ಅಜಯ್ ನಾಗಭೂಷಣ್ ಹಾಗೂ ಶಿವಾಜಿನಗರ ಕ್ಷೇತ್ರಕ್ಕೆ ಪ್ರಿಯಾಂಕಾ ಮೇರಿ ಅವರನ್ನು ನೇಮಿಸಿದೆ.
Voter ID scam BBMP Commissioner and Bengaluru DC Suspend, Probe ordered by Election commission.
08-05-25 12:23 pm
HK News Desk
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
07-05-25 10:45 pm
HK News Desk
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
India strikes terror camps in Pak; ಪಾಕಿಸ್ತಾನದ...
07-05-25 09:54 am
07-05-25 10:30 pm
Mangalore Correspondent
Operation Sindhoor, MP Brijesh Chowta, Manga...
07-05-25 03:36 pm
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm